• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ದಿಢೀರ್ ನಾಯಕನಾಗಿ ಹೊರಹೊಮ್ಮಿರುವ ಅರವಿಂದ ಬೆಲ್ಲದ ಅವರ‌ ಹಿಂದೆ ಯಾರಿದ್ದಾರೆ?

ಯದುನಂದನ by ಯದುನಂದನ
June 13, 2021
in ರಾಜಕೀಯ
0
ದಿಢೀರ್ ನಾಯಕನಾಗಿ ಹೊರಹೊಮ್ಮಿರುವ ಅರವಿಂದ ಬೆಲ್ಲದ ಅವರ‌ ಹಿಂದೆ ಯಾರಿದ್ದಾರೆ?
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಬಿಜೆಪಿ ಹೈಕಮಾಂಡ್ ರಾಜೀನಾಮೆ ಪಡೆಯಲಿದೆ. ಪರ್ಯಾಯ ನಾಯಕನಿಗಾಗಿ ಹುಡುಕಾಟ ಆರಂಭವಾಗಿದೆ. ಯಾವಾಗ ಬೇಕಾದರೂ ದಿಢೀರನೆ ನಾಯಕತ್ವ ಬದಲಾಗಬಹುದು ಎಂಬ ಚರ್ಚೆಗಳು ಬಿರುಸಾಗಿ ನಡೆಯುತ್ತಿವೆ. ಇದೇ ಹಿನ್ನಲೆಯಲ್ಲಿ ಆರೇಳು ಮಂದಿಯ ಹೆಸರು ಕೇಳಿಬರುತ್ತಿವೆ. ಆ ಹೆಸರುಗಳ ಪೈಕಿ ಅತ್ಯಂತ ಕುತೂಹಲ ಮತ್ತು ಆಶ್ಚರ್ಯ ಮೂಡಿಸಿರುವುದು ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಹೆಸರು.

ಅರವಿಂದ ಬೆಲ್ಲದ ಹೆಸರು ಹಿಂದೆ ರಾಜಕೀಯವಾಗಿ ಯಾವುದೇ ಸಂದರ್ಭದಲ್ಲಿ ಚರ್ಚೆ ಆಗಿಲ್ಲ. ಈಗ ರಾಜ್ಯಾದ್ಯಂತ ಚರ್ಚೆ ಆಗುತ್ತಿರುವ ಈ ಹೆಸರು ಕೆಲ‌ ದಿನಗಳ ಹಿಂದೆ ಅವರ ಸ್ವಕ್ಷೇತ್ರದಿಂದ ಆಚೆಗೆ ಜಿಲ್ಲೆಯಲ್ಲೇ ಅಪ್ರಸ್ತುತವಾಗಿತ್ತು. ಈಗ ಒಂದೇ ಸಲಕ್ಕೆ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಚರ್ಚೆ ಮಾಡಲಾಗುತ್ತಿದೆ. ಇದರಿಂದಾಗಿ ಸಹಜವಾಗಿ ಅರವಿಂದ ಬೆಲ್ಲದ ಅವರ ಹಿಂದೆ ‘ಯಾರೋ ಇರಬಹುದು’ ಎಂಬ ಅನುಮಾನ ಹುಟ್ಟುಕೊಂಡಿದೆ. ಯಾರದು?

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಇರಬಹುದು ಎಂಬ ದಟ್ಟವಾದ ಗುಮಾನಿ ಇದೆ. ಯಡಿಯೂರಪ್ಪ ಅವರನ್ನು ಕೆಳಗಿಳಿಸಲು ಬಿ.ಎಲ್. ಸಂತೋಷ್ ನಡೆಸುತ್ತಿರುವ ನಿರಂತರ ಪ್ರಯತ್ನ-ಪ್ರಯೋಗದ ಭಾಗ ಅರವಿಂದ ಬೆಲ್ಲದ ಎಂದು ಹೇಳಲಾಗುತ್ತಿದೆ. ಬ್ರಾಹ್ಮಣರಾದ ಪ್ರಹ್ಲಾದ್ ಜೋಷಿ ಅವರನ್ನು ಪಕ್ಕಕ್ಕೆ ಸರಿಸಿ, ಉಳಿದವರೆಲ್ಲರನ್ನೂ ಬಿಟ್ಟು ಬಿ.ಎಲ್. ಸಂತೋಷ್ ಅವರು ಅರವಿಂದ ಬೆಲ್ಲದ ಅವರನ್ನು ಆಯ್ಕೆ ಮಾಡಿಕೊಂಡಿದ್ದು ಮತ್ತೊಂದು ಆಸಕ್ತಿದಾಯಕ ಸಂಗತಿ ಎಂತಲೂ ಹೇಳಲಾಗುತ್ತದೆ.

ಸದ್ಯದ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಆ ಸ್ಥಾನದಲ್ಲಿ ಪ್ರಹ್ಲಾದ್ ಜೋಷಿಯನ್ನು ಪ್ರತಿಷ್ಠಾಪಿಸಿದರೆ ಲಿಂಗಾಯತ ಮತಗಳನ್ನು ಕಳೆದುಕೊಳ್ಳಬೇಕಾಗುತ್ತದೆ.‌ ಈ ಹಿನ್ನಲೆಯಲ್ಲಿ ಲಿಂಗಾಯತರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದುಕೊಂಡಿದ್ದಾರೆ. ಹಾಗಾದರೆ ಲಿಂಗಾಯತರ ಪೈಕಿ ಯಾವ ಉಪಜಾತಿಗೆ ಮಣೆ ಹಾಕಬೇಕೆಂಬ ಇನ್ನೊಂದು ಸಮಸ್ಯೆ ಕೂಡ ಇದೆ. ಲಿಂಗಾಯತರ ಪೈಕಿ ಪಂಚಮಸಾಲಿ ಶಾಸಕರೇ ಹೆಚ್ಚಿರುವುದರಿಂದ ಅವರಲ್ಲೆ ಒಬ್ಬರನ್ನು ಮುಖ್ಯಮಂತ್ರಿ ಮಾಡಿದರೆ ಆಗ ಉಳಿದ ಪಂಚಮಸಾಲಿ ಲಿಂಗಾಯತರು ವಿರೋಧ ಮಾಡಲ್ಲ, ‘ಲಿಂಗಾಯತ’ ಎಂಬ ಕಾರಣಕ್ಕೆ ಉಳಿದ ಉಪ ಜಾತಿಗಳು ಮುನಿದು‌ ದೂರು ಹೋಗುವುದನ್ನು ತಪ್ಪಿಸಬಹುದು ಎಂಬ ಲೆಕ್ಕಾಚಾರ ಇದೆಯಂತೆ.

ಪಂಚಮಸಾಲಿಗಳ ಪೈಕಿ ಯಾರು? ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಮುರುಗೇಶ್ ನಿರಾಣಿ ಪ್ರಮುಖರು. ಯತ್ನಾಳ್ ಕೇಂದ್ರ ಸಚಿವರಾಗಿದ್ದವರು. ಹಿರಿಯರು. ಹಿಂದುತ್ವದ ಐಕಾನ್ ಎಂಬುದಾಗಿಯೂ ಬ್ರಾಂಡ್ ಆಗಿದ್ದಾರೆ. ಸಮಸ್ಯೆ ಏನೆಂದರೆ ಅವರನ್ನು ನಿಯಂತ್ರಿಸುವುದು ಕಷ್ಟ ಎನಿಸಿದೆಯಂತೆ. ಅದಲ್ಲದೆ ಯಾವಾಗ ಯಾವ ವಿವಾದ ಹುಟ್ಟುಹಾಕುತ್ತಾರೆ ಎಂಬುದನ್ನು ಅಂದಾಜು ಮಾಡಲು ಸಾಧ್ಯವಿಲ್ಲ. ಮುರುಗೇಶ್ ನಿರಾಣಿ ಅವರಿಗೆ ಕ್ಲೀನ್ ಇಮೇಜಿಲ್ಲ.  ಯಡಿಯೂರಪ್ಪ ಅವರನ್ನು ಬದಲಿಸಿದ ನಂತರ ಪರಿಸ್ಥಿತಿಯನ್ನು ನಿಭಾಯಿಸಬಲ್ಲ ಸಾಮರ್ಥ್ಯವೂ ಅವರಲ್ಲಿ ಇಲ್ಲ.

ಹಾಗಾಗಿ ಅರವಿಂದ ಬೆಲ್ಲದ ಹೆಸರನ್ನು ಪರಿಗಣಿಸಲಾಗುತ್ತಿದೆ ಎಂಬುದು ಬಿಜೆಪಿ ಪಾಳೆಯದ ಗುಸುಗುಸು. ಅರವಿಂದ ಬೆಲ್ಲದ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದರೆ ಸರ್ಕಾರವನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಬಹುದೆಂಬ ಲೆಕ್ಕಾಚಾರವೂ ಇದ್ದಂತಿದೆ. ಆದುದರಿಂದ ಬಿ.ಎಲ್. ಸಂತೋಷ್ ಅವರೇ ಅರವಿಂದ ಬೆಲ್ಲದ ಹೆಸರನ್ನು ಚರ್ಚೆಯ ಮುಂಚೂಣಿಗೆ ತಂದಿದ್ದಾರೆ ಎಂದು ಹೇಳಾಗುತ್ತಿದೆ.

ಇದಲ್ಲದೆ ಅರವಿಂದ ಬೆಲ್ಲದ ಅವರು ಗುಜರಾತ್ ಹಾಗೂ ದೆಹಲಿ ಮೂಲದ ವ್ಯಕ್ತಿಗಳ ಜೊತೆ ವ್ಯವಹಾರಿಕ ಸಂಬಂಧಗಳನ್ನು ಹೊಂದಿದ್ದಾರೆ. ಆ ಸಂಪರ್ಕಗಳನ್ನು ಬಳಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ‌ ಸಚಿವ ಅಮಿತ್ ಶಾ ಅವರ ಮನ ಗೆದ್ದಿದ್ದಾರೆ. ಆ ಕಾರಣಕ್ಕೆ ಈಗ ಸಕ್ರೀಯವಾಗಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಯಾರೋ ಪ್ರಭಾವಿಗಳು ಅರವಿಂದ ಬೆಲ್ಲದ ಅವರ ಹಿಂದೆ ಇದ್ದಾರೆ. ಇಲ್ಲದಿದ್ದರೆ ಅವರು ದಿಢೀರನೆ ಮುಖ್ಯಮಂತ್ರಿ ಕುರ್ಚಿಗೆ ಟವೆಲ್ ಹಾಕುತ್ತಿರಲಿಲ್ಲ ಎನ್ನಲಾಗುತ್ತಿದೆ. ಯಾವ ಹುತ್ತದಲ್ಲಿ‌ ಯಾವ ಹಾವಿದೆ ಎಂಬುದನ್ನು ಹೇಳುವುದಾದರೂ ಹೇಗೆ?

Previous Post

ರಾಜ್ಯಗಳು ಕರೋನ ಸಾವಿನ ಅಂಕಿಅಂಶಗಳನ್ನು ತನಿಖೆ ಮಾಡಬೇಕು -ಏಮ್ಸ್ ಮುಖ್ಯಸ್ಥ ಡಾ.ರಂದೀಪ್

Next Post

ಕರೋನ ಎಫೆಕ್ಟ್: ಕಳೆದ ವರ್ಷಕ್ಕಿಂತ 2021ರ ಏಪ್ರಿಲ್-ಮೇ ತಿಂಗಳಲ್ಲಿ ಸಂಭವಿಸಿದ ಸಾವುಗಳು 4 ಪಟ್ಟು ಹೆಚ್ಚು

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಕರೋನ ಎಫೆಕ್ಟ್: ಕಳೆದ ವರ್ಷಕ್ಕಿಂತ 2021ರ ಏಪ್ರಿಲ್-ಮೇ ತಿಂಗಳಲ್ಲಿ ಸಂಭವಿಸಿದ ಸಾವುಗಳು 4 ಪಟ್ಟು ಹೆಚ್ಚು

ಕರೋನ ಎಫೆಕ್ಟ್: ಕಳೆದ ವರ್ಷಕ್ಕಿಂತ 2021ರ ಏಪ್ರಿಲ್-ಮೇ ತಿಂಗಳಲ್ಲಿ ಸಂಭವಿಸಿದ ಸಾವುಗಳು 4 ಪಟ್ಟು ಹೆಚ್ಚು

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada