• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸದ್ಯದಲ್ಲೇ ಕರ್ನಾಟಕ ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆ; ಯಾರಿಗೆಲ್ಲಾ ಸ್ಥಾನ?

ನಚಿಕೇತು by ನಚಿಕೇತು
August 28, 2021
in ಕರ್ನಾಟಕ
0
ಸದ್ಯದಲ್ಲೇ ಕರ್ನಾಟಕ ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆ; ಯಾರಿಗೆಲ್ಲಾ ಸ್ಥಾನ?
Share on WhatsAppShare on FacebookShare on Telegram

2023 ವಿಧಾನಸಭಾ ಚುನಾವಣೆಗೆ ರಾಜ್ಯದ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ. ಮುಂದಿನ ಚುನಾವಣೆ ಗೆಲ್ಲಬೇಕು ಎನ್ನುವ ದೃಷ್ಟಿಯಿಂದಲೇ ಇತ್ತೀಚೆಗೆ ಬಿಜೆಪಿ ಹೈಕಮಾಂಡ್ ಬಿ.ಎಸ್ ಯಡಿಯೂರಪ್ಪನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿತ್ತು. ಬಳಿಕ ಇದೇ ಸಿಎಂ ಸ್ಥಾನಕ್ಕೆ ವೀರಶೈವ ಲಿಂಗಾಯತ ಸಮುದಾಯದ ಪ್ರಬಲ ನಾಯಕ ಮತ್ತು ಮಾಜಿ ಸಿಎಂ ಎಸ್.ಆರ್ ಬೊಮ್ಮಾಯಿ ಪುತ್ರ ಬಸವರಾಜ್ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು. ಈ ಬೆನ್ನಲ್ಲೀಗ ಹೈಕಮಾಂಡ್ ಬಿಜೆಪಿ ಕೋರ್ ಕಮಿಟಿ ಪುನಾರಚನೆಗೆ ಮುಂದಾಗಿದೆ.

ADVERTISEMENT

ಬಿಜೆಪಿ ಕೋರ್ ಕಮಿಟಿ ಕಳೆದ ಬಾರಿ ಪುನಾರಚನೆಯಾಗಿದ್ದು 2016ರಲ್ಲಿ. ಪಕ್ಷದ ಸಂಘಟನೆ, ಮುಂಬರುವ ಜಿಲ್ಲಾ ಪಂಚಾಯತ್ ಮತ್ತು 2023ರ ವಿಧಾನಸಭೆ ಚುನಾವಣೆ ದೃಷ್ಟಿಕೋನದಿಂದ ಈಗ ಬಿಜೆಪಿ ಕೋರ್ ಕಮಿಟಿಯ ಮರು ರಚನೆ ಅಗತ್ಯ ಎಂದು ಹಲವರು ಬಯಸಿದ್ದಾರೆ.

ಹೌದು, ಶೀಘ್ರದಲ್ಲೇ ಕರ್ನಾಟಕ ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆಯಾಗಲಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೇರಿದ ಬೆನ್ನಲ್ಲೇ ಪುನಾರಚನೆ ಮಾಡಲಾಗುತ್ತಿದೆ. ಹೊಸ ಕೋರ್ ಕಮಿಟಿಯಲ್ಲಿ ಹಲವು ಬದಲಾವಣೆ ನಿಶ್ಚಿತವಾಗಿದ್ದು, ಕೆಲವರಿಗೆ ಕೋಕ್ ನೀಡಲಾಗುತ್ತಿದೆ.

ನಾಲ್ಕೈದು ಹಿರಿಯ ನಾಯಕರಿಗೆ ಕೋಕ್ ನೀಡಿ ಹೊಸಬರ ಸೇರ್ಪಡೆ ಚಿಂತನೆ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲೇ ರಾಜ್ಯ ಬಿಜೆಪಿ ಕೋರ್ ಕಮಿಟಿ ಶೀಘ್ರವೇ ಪುನಾರಚನೆ ಆಗಲಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಈ ಕೋರ್ ಕಮಿಟಿಗೆ ಬರಲಿದ್ದಾರೆ. ಬಿ.ಎಸ್. ಯಡಿಯೂರಪ್ಪ, ಪ್ರಲ್ಹಾದ್ ಜೋಶಿ ಕೋರ್ ಕಮಿಟಿಯಲ್ಲಿ ಮುಂದುವರಿಯುವ ಸಾಧ್ಯತೆ ಇದೆ.

ಸಚಿವ ಸ್ಥಾನ ಕಳೆದುಕೊಂಡ ಜಗದೀಶ್ ಶೆಟ್ಟರ್ ಕೂಡ ಔಟ್ ಆಗಲಿದ್ದಾರೆ. ಮಾಜಿ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಕೋರ್ ಕಮಿಟಿಯಲ್ಲಿ ಮುಂದುವರಿಯಲಿದ್ದಾರೆ. ಲಕ್ಷ್ಮಣ ಸವದಿ, ಕೆ.ಎಸ್ ಈಶ್ವರಪ್ಪ, ಆರ್. ಅಶೋಕ್, ಬಿ. ಶ್ರೀರಾಮುಲುಗೆ ಕೋಕ್ ನೀಡುವ ಸಾಧ್ಯತೆ ಇದೆ.

ಬಿಜೆಪಿ ಕೋರ್ ಕಮಿಟಿ ಪುನಾರಚನೆಯಲ್ಲಿ ಬೊಮ್ಮಾಯಿಗೆ ಸ್ಥಾನ ಸಿಗಲಿದೆ. ಕೇಂದ್ರ, ರಾಜ್ಯದಲ್ಲಿ ಸಚಿವ ಸ್ಥಾನ ಪಡೆದಿರುವ ಕೆಲವರಿಗೆ ಸ್ಥಾನ ಸಿಗಲಿದೆಯೇ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಕೆಲವು ಕಳಂಕಿತ ಸದಸ್ಯರನ್ನು ಕೈಬಿಟ್ಟು ಕೋರ್ ಕಮಿಟಿಯನ್ನು ಸ್ವಚ್ಛಗೊಳಿಸುವ ಅಗತ್ಯದ ಬಗ್ಗೆ ಕೇಂದ್ರ ನಾಯಕತ್ವ ಬಯಸಿದೆ. ಮಾಜಿ ಕೇಂದ್ರ ಸಚಿವ ಹೆಚ್.ಎನ್ ಅನಂತ್ ಕುಮಾರ್ ನಿಧನ ಬಳಿಕ ಅತ್ಯಗತ್ಯ ಎಂದು ಭಾವಿಸಿದೆ. ಆದರೆ, ಬಿ ಎಸ್ ಯಡಿಯೂರಪ್ಪಗೆ ಯಾವುದೇ ತೊಂದರೆಯಾಗದಂತೆ ಮುಂಜಾಗೃತ ಹೆಜ್ಜೆ ಇಡಬೇಕಿದೆ.

ಈ ಹಿಂದೆಯೇ ಕೋರ್ ಕಮಿಟಿ ಮರುರಚನೆ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಬಳಿ ಕೆಲವು ನಾಯಕರು ಚರ್ಚೆ ನಡೆಸಿದ್ದರು. ಆದರೆ, ಅವರ ಕಡೆಯಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿರಲಿಲ್ಲ.

ಸದ್ಯ ಬಿ ಎಸ್ ಯಡಿಯೂರಪ್ಪನವರ ಕೈ ಮೇಲಾಗಿದೆ. ಲಿಂಗಾಯತ ಮತಗಳನ್ನು ಸೆಳೆಯುವ ಸಾಮಥ್ರ್ಯ ಇರುವ ಬಲಿಷ್ಠ ನಾಯಕ ಸದ್ಯ ಅವರೊಬ್ಬರೇ. ಹೀಗಾಗಿ ಅವರನ್ನು ಅಸಮಾಧಾನಗೊಳಿಸುವ ವಿಷಯಕ್ಕೆ ಹೈಕಮಾಂಡ್ ಸದ್ಯ ಕೈಹಾಕುವ ನಿರೀಕ್ಷೆಯಿಲ್ಲ. ಅವರ ಮಾತಿಗೆ ಮನ್ನಣೆ ಸಿಗುವ ಸಾಧ್ಯತೆಯಿದೆ.

ಕಳೆದ ಬಾರಿ ಪಕ್ಷದ ಕೋರ್ ಕಮಿಟಿಯ ಪುನಾರಚನೆ ಸಂದರ್ಭದಲ್ಲಿ, ಹೈಕಮಾಂಡ್ ಯಡಿಯೂರಪ್ಪ ಆಪ್ತರಾದ ಶೋಭಾ ಕರಂದ್ಲಾಜೆ, ಬಸವರಾಜ್ ಬೊಮ್ಮಾಯಿ, ರವಿ ಕುಮಾರ್ ಅವರನ್ನು ಕೈಬಿಟ್ಟು ರಾಜಕೀಯ ಸಂದೇಶ ಕಳುಹಿಸಿತ್ತು.

ಪಕ್ಷದಲ್ಲಿ ಅತಿ ಉನ್ನತ ನಿರ್ಧಾರ ಕೈಗೊಳ್ಳುವ ಸಂಸ್ಥೆ ಬಿಜೆಪಿ ಕೋರ್ ಸಮಿತಿಯ ಪುನಾರಚನೆ ಮಾಡಿದರೆ ಅಲ್ಲಿ ಒಂದು ಸ್ಥಾನಕ್ಕಾಗಿ ಬಿಜೆಪಿಯ ಹಲವು ಹಿರಿಯ ನಾಯಕರು ಕಾಯುತ್ತಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ ಬಳಿಕ ಅತೃಪ್ತ ಬಿಜೆಪಿ ನಾಯಕರು ಕೋರ್ ಕಮಿಟಿಯಲ್ಲಾದರೂ ಒಂದು ಸ್ಥಾನ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.

Tags: Basavaraj BommaiBJPKarnataka GovernmentKarnataka Politicsಬಿಜೆಪಿ
Previous Post

ರಾಜ್ಯದ ಮೂರು ತನಿಖಾ ಸಂಸ್ಥೆಗಳನ್ನು ಬಲಪಡಿಸಿ; ಸಿಎಂ ಬೊಮ್ಮಾಯಿಗೆ ಹಿರಿಯ ಅಧಿಕಾರಿಗಳು ನೀಡಿದ ಸಲಹೆಯೇನು?

Next Post

ಮೈಸೂರು ಅತ್ಯಾಚಾರ ಪ್ರಕರಣ: ಐವರು ಪಾತಕಿಗಳ ಬಂಧನ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಮೈಸೂರು ಅತ್ಯಾಚಾರ ಪ್ರಕರಣ: ಐವರು ಪಾತಕಿಗಳ ಬಂಧನ

ಮೈಸೂರು ಅತ್ಯಾಚಾರ ಪ್ರಕರಣ: ಐವರು ಪಾತಕಿಗಳ ಬಂಧನ

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada