• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೆಟ್ರಿಕ್‌ ನಂತರದ ವಿದ್ಯಾರ್ಥಿಗಳಿಗೆ ʼಫ್ರೀಶಿಪ್‌ ಕಾರ್ಡ್ʼ ವಿತರಣೆ

ಪ್ರತಿಧ್ವನಿ by ಪ್ರತಿಧ್ವನಿ
November 11, 2021
in ಕರ್ನಾಟಕ
0
ಮೆಟ್ರಿಕ್‌ ನಂತರದ ವಿದ್ಯಾರ್ಥಿಗಳಿಗೆ ʼಫ್ರೀಶಿಪ್‌ ಕಾರ್ಡ್ʼ ವಿತರಣೆ
Share on WhatsAppShare on FacebookShare on Telegram

ವಿದ್ಯಾರ್ಥಿಗಳ ಖಾತೆಗಳಿಗೆ ವಿದ್ಯಾರ್ಥಿವೇತನದ ಮೊತ್ತವನ್ನು ಜಮಾ ಮಾಡುವಲ್ಲಿ ವಿಳಂಬವಾಗುವುದನ್ನು ನಿವಾರಿಸಲು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಗಳಿಗೆ ಸೇರಿದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿವೇತನವನ್ನು ನೀಡಲು ಕರ್ನಾಟಕ ಸರ್ಕಾರದಿಂದ ‘ಫ್ರೀಶಿಪ್ ಕಾರ್ಡ್’ ವಿತರಿಸಲು ನಿರ್ಧರಿಸಲಾಗಿದೆ.

ADVERTISEMENT

ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್ ಮಾತನಾಡಿ, ಈ ಕಾರ್ಡ್ ಶಿಕ್ಷಣ ಸಂಸ್ಥೆಗಳಿಗೆ ಶುಲ್ಕ ಪಾವತಿ ಮಾಡುತ್ತಾ ಸರ್ಕಾರ ನೀಡಿರುವ ಖಾತರಿಯಂತೆ ಕಾರ್ಯನಿರ್ವಹಿಸುತ್ತದೆ, ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡಲು ಸಂಸ್ಥೆಗಳಿಗೆ ಒತ್ತಾಯಿಸದಂತೆ ತಿಳಿಸಲಾಗಿದೆ. ಇದು ಸರ್ಕಾರದ ಖಾತರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದರು.

ತಾಂತ್ರಿಕ ದೋಷದಿಂದಾಗಿ ವಿದ್ಯಾರ್ಥಿವೇತನ ಬಾಕಿ ಮೊತ್ತವನ್ನು ಪಾವತಿಸಲು ವಿಳಂಬವಾಗಿರುವುದರಿಂದ ವಿದ್ಯಾರ್ಥಿಗಳು ಅನಾನುಕೂಲವನ್ನು ಎದುರಿಸುತ್ತಿದ್ದಾರೆ, ವಿದ್ಯಾರ್ಥಿ ವೇತನಕ್ಕಾಗಿ ಸಲ್ಲಿಸಿದ ಅರ್ಜಿಗಳ ಪರಿಶೀಲನೆ ಮತ್ತು ದೃಢೀಕರಣದಲ್ಲಿ ವಿಳಂಬವಾಗುತ್ತಿದೆ, ವಿದ್ಯಾರ್ಥಿಯು ಕಾಲೇಜಿಗೆ ಪ್ರವೇಶ ಪಡೆದುಕೊಂಡ ನಂತರ, ಸರ್ಕಾರವು ವಿದ್ಯಾರ್ಥಿಯ ಆಧಾರ್-ಸೀಡ್ ಮಾಡಿದ ಬ್ಯಾಂಕ್‌ ಖಾತೆಗೆ ವಿದ್ಯಾರ್ಥಿವೇತನದ ಮೊತ್ತವನ್ನು ಜಮಾ ಮಾಡುತ್ತದೆ, ನಂತರ ವಿದ್ಯಾರ್ಥಿಯು ಈ ಮೊತ್ತವನ್ನು ಕಾಲೇಜಿಗೆ ಪಾವತಿಸುತ್ತಾನೆ. ಕಾರ್ಡ್ ಬಳಸಿ, ಅವರು ಮೊತ್ತವನ್ನು ಕಾಲೇಜಿಗೆ ವರ್ಗಾಯಿಸಬಹುದು ಎಂದು ಹೇಳಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಮತ್ತು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಎಲ್ಲಾ ಅರ್ಜಿಗಳ ವಿಲೇವಾರಿ ಸುಗಮಗೊಳಿಸಲು ಅಭಿಯಾನವನ್ನು ನಡೆಸುತ್ತದೆ. ಮೊದಲ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಕೋರ್ಸ್‌ಗಳನ್ನು ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಇಲಾಖೆಯ ವತಿಯಿಂದ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ರಾಜ್ಯಾದ್ಯಂತ ನವೆಂಬರ್ 17 ರವರೆಗೆ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದ್ದು, ದಕ್ಷಿಣ ಕನ್ನಡದಲ್ಲಿ ತಿಂಗಳ ಪೂರ್ತಿ ಅಭಿಯಾನ ನಡೆಯಲಿದೆ. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಸಿದ್ದಲಿಂಗೇಶ್ ತಿಳಿಸಿದ್ದಾರೆ.

ಜಿಲ್ಲೆಗಳಿಂದ ಇಲಾಖೆಗೆ 5,096 ಅರ್ಜಿಗಳು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಇಲಾಖೆಯು ಕಾಲೇಜುಗಳಲ್ಲಿ ಶಿಬಿರಗಳನ್ನು ನಡೆಸಲಾಗುತ್ತದೆ ಎಂದು ಈ ವೇಳೆ ತಿಳಿಸಿದರು. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಇಲಾಖೆಗೆ 14,241 ಅರ್ಜಿಗಳು ಬಂದಿದ್ದು, 14,131 ಅರ್ಜಿಗಳ ವಿಲೇವಾರಿ ಈಗಾಗಲೇ ಮುಗಿದಿದೆ. ಮೆಟ್ರಿಕ್ ನಂತರದ ವಿಭಾಗದಲ್ಲಿ ಜಿಲ್ಲೆಗಳಿಂದ ಇಲಾಖೆಗೆ 5,096 ಅರ್ಜಿಗಳು ಬಂದಿವೆ. ಕೆಲವು ಮೆಟ್ರಿಕ್ ನಂತರದ ಕೋರ್ಸ್‌ಗಳು ಈಗಷ್ಟೇ ಪ್ರಾರಂಭವಾಗಿದ್ದು, ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳು ಇಲಾಖೆಗೆ ಇನ್ನೂ ಬಂದಿಲ್ಲ ಎಂದು ಸಿದ್ದಲಿಂಗೇಶ್ ಹೇಳಿದ್ದಾರೆ.

ಯಾರಿಗೆಲ್ಲ ವಿದ್ಯಾರ್ಥಿವೇತನ ಸಿಗಲಿದೆ.

ಮೊದಲ ಪ್ರಯತ್ನದಲ್ಲಿ ಉತ್ತೀರ್ಣರಾದ , ದಕ್ಷಿಣ ಕನ್ನಡದ ಒಟ್ಟು 1,049 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ 121 ವಿದ್ಯಾರ್ಥಿಗಳು ಸೆಮಿಸ್ಟರ್‌ಗಳಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣರಾದ ಕಾರಣ ಅವರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಈ ಯೋಜನೆಯಡಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.60ರಿಂದ ಶೇ.75 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 7 ಸಾವಿರ ರೂ., ಶೇ.75ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ 15 ಸಾವಿರ ರೂ. ನೀಡಲಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ 20 ಸಾವಿರ, ಪದವಿ ವಿದ್ಯಾರ್ಥಿಗಳಿಗೆ 25 ಸಾವಿರ, ಪಿಜಿ ವಿದ್ಯಾರ್ಥಿಗಳಿಗೆ 30 ಸಾವಿರ ಹಾಗೂ ವೃತ್ತಿಪರ ಕೋರ್ಸ್ ಮುಗಿಸಿದವರಿಗೆ 35 ಸಾವಿರ ರೂ. ವಿದ್ಯಾರ್ಥಿವೇತನ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಅಂತರ್ಜಾತಿ ವಿವಾಹದಡಿ ಪ್ರೋತ್ಸಾಹಧನಕ್ಕಾಗಿ 28 ಅರ್ಜಿಗಳು ಬಂದಿದ್ದು, 23 ಅರ್ಜಿಗಳಿಗೆ ಅನುಮತಿ ನೀಡಲಾಗಿದೆ. ಉಳಿದ ಐದು ಅರ್ಜಿಗಳನ್ನು ಮುಂದಿನ ದಿನಗಳಲ್ಲಿ ಅನುಮತಿ ನೀಡಕಾಗುವುದು ಎಂದು ಸಿದ್ದಲಿಂಗೇಶ್ ತಿಳಿಸಿದ್ದಾರೆ.

ಮೂಲ : ಡಿ.ಎಚ್‌

Tags: ಫ್ರೀಶಿಪ್‌ ಕಾರ್ಡ್ಮೆಟ್ರಿಕ್‌ ನಂತರವಿದ್ಯಾರ್ಥಿಗಳು
Previous Post

ಬೆಳಗಾವಿ ರೈತರ ಹೋರಾಟ , ಬಿಜೆಪಿ ಸರ್ಕಾರಕ್ಕೆ ರೈತರ ಮೇಲೆ ದೌರ್ಜನ್ಯ ಮಾಡೋದೆ ಕೆಲಸವಾಗಿದೆ : ಸಚಿನ್ ಮೀಗಾ

Next Post

ಪ್ರಧಾನಿ ಮೋದಿ ಅವರೊಂದಿಗೆ ಬಿಟ್ ಕಾಯಿನ್ ಪ್ರಕರಣದ ಕುರಿತು ಮಾತನಾಡಿಲ್ಲ – ಸಿಎಂ ಬೊಮ್ಮಾಯಿ

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
Next Post
ಪ್ರಧಾನಿ ಮೋದಿ ಅವರೊಂದಿಗೆ ಬಿಟ್ ಕಾಯಿನ್ ಪ್ರಕರಣದ ಕುರಿತು ಮಾತನಾಡಿಲ್ಲ – ಸಿಎಂ ಬೊಮ್ಮಾಯಿ

ಪ್ರಧಾನಿ ಮೋದಿ ಅವರೊಂದಿಗೆ ಬಿಟ್ ಕಾಯಿನ್ ಪ್ರಕರಣದ ಕುರಿತು ಮಾತನಾಡಿಲ್ಲ – ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada