ರಾಜ್ಯದಲ್ಲಿ ನಿರಂತರವಾಗಿ ಅಬ್ಬರಿಸಿದ್ದ ವರುಣ ಇತ್ತೀಚೆಗೆ ಕೊಂಚ ಸೈಲೆಂಟ್ ಆಗಿದ್ದ. ಆದ್ರೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆರಾಯ ಈ ವಾರ ಮತ್ತೆ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ (weather forecaste)ಮುನ್ಸೂಚನೆ ನೀಡಿದೆ.

ಇಂದು ರಾಜ್ಯದ ಕೆಲ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ (bengaluru rain) ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಈ ಮೂಲಕ ಮಳೆಯಿಂದ ಮುಕ್ತಿ ಸಿಕ್ಕಿದೆ ಎಂದುಕೊಂಡಿದ್ದ ರಾಜ್ಯದ ಕೆಲು ಭಾಗದ ಜನರಿಗೆ ವರುಣ ಮತ್ತೆ ಶಾಕ್ ಕೊಡಲು ಸಿದ್ಧವಾಗಿದ್ದು, ಬೆಂಗಳೂರು ಮತ್ತೊಂದು ಸುತ್ತಿನ ಮಳಗೆ ಸಿದ್ಧವಾಗಬೇಕಿದೆ.





