• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ” ಭೈರತಿ ರಣಗಲ್’ ಚಿತ್ರ ನವೆಂಬರ್ 15 ರಂದು ತೆರೆಗೆ

ಪ್ರತಿಧ್ವನಿ by ಪ್ರತಿಧ್ವನಿ
November 11, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಭೈರತಿ ರಣಗಲ್’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಹೊಸಕೆರೆಹಳ್ಳಿಯ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 15 ರಂದು ಬಿಡುಗಡೆಯಾಗುತ್ತಿದೆ. 1996 ರಲ್ಲಿ ಶಿವಣ್ಣ ಅಭಿನಯದ ಸೂಪರ್ ಹಿಟ್ ಚಿತ್ರ “ಜನುಮದ ಜೋಡಿ” ಕೂಡ ನವೆಂಬರ್ 15 ರಂದು ನರ್ತಕಿ ಚಿತ್ರಮಂದಿರದಲ್ಲೇ ಬಿಡುಗಡೆಯಾಗಿತ್ತು. ಈಗ “ಭೈರತಿ ರಣಗಲ್” ಚಿತ್ರ ಕೂಡ ಅದೇ ದಿನ ನರ್ತಕಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ.

ADVERTISEMENT

ಡಾಲಿ ಧನಂಜಯ, ನೀನಾಸಂ ಸತೀಶ್, ವಿಜಯ ರಾಘವೇಂದ್ರ, ಸುಧಾರಾಣಿ, ಶೃತಿ, ರಕ್ಷಿತಾ ಪ್ರೇಮ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಮಾಜಿ‌ ಅಧ್ಯಕ್ಷರಾದ ಸಾ ರಾ ಗೋವಿಂದು, ನಿರ್ಮಾಪಕರಾದ ಸೂರಪ್ಪ ಬಾಬು, ಕೆ.ಪಿ.ಶ್ರೀಕಾಂತ್, ನಿರ್ದೇಶಕರಾದ ಬಹದ್ದೂರ್ ಚೇತನ್, ಪವನ್ ಒಡೆಯರ್ ಸೇರಿದಂತೆ ಸ್ಯಾಂಡಲ್ ವುಡ್ ನ ಹಲವಾರು ಗಣ್ಯರು ಈ ಸುಂದರ ಸಮಾರಂಭಕ್ಕೆ ಆಗಮಿಸಿ, ತಮ್ಮ ಪ್ರೀತಿ ತುಂಬಿದ ಮಾತುಗಳಿಂದ “ಭೈರತಿ ರಣಗಲ್” ಗೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಮಾತನಾಡಿದರು.

ಮಫ್ತಿ” ಚಿತ್ರದ “ಭೈರತಿ ರಣಗಲ್” ಪಾತ್ರವನ್ನು ತಾವು ಮೆಚ್ಚಿಕೊಂಡು ಯಶಸ್ವಿ ಮಾಡಿದ್ದೀರಿ ಎಂದು ಮಾತನಾಡಿದ ನಾಯಕ ಶಿವರಾಜಕುಮಾರ್, “ಮಫ್ತಿ” ಚಿತ್ರದ ಪ್ರೀಕ್ವೇಲ್ ಈ “ಭೈರತಿ ರಣಗಲ್”. ನಿರ್ದೇಶಕ ನರ್ತನ್ ತುಂಬಾ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಅಷ್ಟೇ ಚೆನ್ನಾಗಿ ನಿರ್ದೇಶನವನ್ನು ಮಾಡಿದ್ದಾರೆ. “ಭೈರತಿ ರಣಗಲ್” ಅಭಿಮಾನಿಗಳ ಹೃದಯಕ್ಕೆ ಹತ್ತಿರವಾಗುತ್ತಾನೆ.

ನಮ್ಮ ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ ಎರಡನೇ ಚಿತ್ರವಿದು.ಅನುಭವಿ ತಂತ್ರಜ್ಞರ ಹಾಗೂ ಕಲಾವಿದರ ಸಮಾಗಮದಲ್ಲಿ ಈ ಚಿತ್ರ ಉತ್ತಮವಾಗಿ ಮೂಡಿಬಂದಿದೆ.ನವೆಂಬರ್ 15ರಂದು ಚಿತ್ರ ಬಿಡುಗಡೆಯಾಗುತ್ತಿದೆ.

ನವೆಂಬರ್ 15ರಂದು ಚಿತ್ರ ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ.ಇಪ್ಪತ್ತೆಂಟು ವರ್ಷಗಳ ಹಿಂದೆ ನವೆಂಬರ್ 15 ರಂದೇ ನನ್ನ ಜನುಮದ ಜೋಡಿ ಚಿತ್ರ ನರ್ತಕಿ ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು. ಅದರ ನಿರ್ದೇಶಕರು ನಾಗಾಭರಣ.ಈ ಚಿತ್ರ ಕೂಡ ನವೆಂಬರ್ 15 ರಂದು ನರ್ತಕಿ ಚಿತ್ರಮಂದಿರದಲ್ಲೇ ಬಿಡುಗಡೆಯಾಗುತ್ತಿದೆ.ಇದರ ನಿರ್ದೇಶಕರು ನರ್ತನ್. ಎರಡು ಚಿತ್ರಗಳಲ್ಲೂ ನ ನ ಇದೆ.ಇದು ಕಾಕತಾಳೀಯ. ಆ ಚಿತ್ರದ ನಿರ್ಮಾಪಕರು ನನ್ನ ಅಮ್ಮ.ಈ ಚಿತ್ರದ ನಿರ್ಮಾಪಕರು ನನ್ನ ಹೆಂಡತಿ ಎಂದರು.

ನಿರ್ದೇಶಕ ನರ್ತನ್ ಹಾಗೂ ನಿರ್ಮಾಪಕಿ ಗೀತಾ ಶಿವರಾಜಕುಮಾರ್ ಚಿತ್ರವನ್ನು ನೋಡಿ ಪ್ರೋತ್ಸಾಹಿಸುವಂತೆ ಪ್ರೇಕ್ಷಕರಲ್ಲಿ ಮನವಿ ಮಾಡಿದರು. ನಾಯಕಿ ರುಕ್ಮಿಣಿ ವಸಂತ್, ನಟಿ ಛಾಯಾಸಿಂಗ್, ಚಿತ್ರದಲ್ಲಿ ಅಭಿನಯಿಸಿರುವ ಅವಿನಾಶ್, ಬಾಬು ಹಿರಣಯ್ಯ, ಗೋಪಾಲಕೃಷ್ಣ ದೇಶಪಾಂಡೆ, ಮಧು ಗುರುಸ್ವಾಮಿ, ಡ್ಯಾನ್ಸಿಂಗ್ ರೋಸ್ ಶಬೀರ್, ಪ್ರತಾಪ್ ಮುಂತಾದ ಕಲಾವಿದರು, ಸಂಗೀತ ನಿರ್ದೇಶಕ ರವಿ ಬಸ್ರೂರ್, ಛಾಯಾಗ್ರಾಹಕ ನವೀನ್ ಕುಮಾರ್ ಸೇರಿದಂತೆ ಮುಂತಾದ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Actor Sivarajkumaractress ChhayasinghActress Rukmini Vasanthartists like AvinashBabu HiraniahBhairati Rangal' Filmcinematographer Naveen KumarDancing Rose ShabirDirector Narthanfilm "Mufti"Geetha SivarajkumarGopalkrishna DeshpandeMadhu Guruswamymusic director Ravi BasrurNartaki theatres.Pratapproducer Geetha Sivarajkumar
Previous Post

ಚನ್ನಪಟ್ಟಣದಲ್ಲಿ ನನ್ನ ಅಣ್ಣನ ಮಗ ನಿಖಿಲ್ ಅವರನ್ನು ಗೆಲ್ಲಿಸಿ ಎಂದು ನಟಿ ತಾರಾ ಮನವಿ

Next Post

ನೆಂಟರಂತೆ ಬಂದವರು, ನೆಂಟರಂತೆ ಹೋಗಲಿ, ನಿಮ್ಮ ಮನೆ ಮಕ್ಕಳಾಗಿ ನಾವು ಸೇವೆ ಮಾಡುತ್ತೇವೆ:ಡಿ.ಕೆ. ಸುರೇಶ್

Related Posts

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
0

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?: ಮೂರು ರಾಜ್ಯಗಳಿಗೆ ಲಿಂಕ್, ಏನಿದು ಕೋಟಿ ಕೋಟಿ ದೋಣಿದ ಕಥೆ..? ಬೆಂಗಳೂರು: ಇಡೀ ದೇಶವೇ ಬೆಚ್ಚಿಬೀಳಿಸುವ...

Read moreDetails
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
Next Post

ನೆಂಟರಂತೆ ಬಂದವರು, ನೆಂಟರಂತೆ ಹೋಗಲಿ, ನಿಮ್ಮ ಮನೆ ಮಕ್ಕಳಾಗಿ ನಾವು ಸೇವೆ ಮಾಡುತ್ತೇವೆ:ಡಿ.ಕೆ. ಸುರೇಶ್

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada