ಖ್ಯಾತ ಕಥಕ್ ನೃತ್ಯಗಾರ ಬಿರ್ಜು ಮಹಾರಾಜ್(83) ಭಾನಯವಾರ ತೀವ್ರ ಹೃದಯಘಾತದಿಂದಾಗಿ ದೆಹಲಿಯ ತಮ್ಮ ನಿವಾಸಲದಲಿ ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿರ್ಜು ಮಹಾರಾಜ್ ಅವರ ಮೊಮ್ಮಗಳು ರಾಗಿಣಿ ಮಧ್ಯಾಹ್ನದ ವೇಳೆ ಅಚರಿಗೆ ತೀವ್ರ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯಲಾಗಿತ್ತು. ಆದರೆ, ಮಾರ್ಗ ಮಧ್ಯೆಯೇ ಅವರ ಪ್ರಾಣ ಹೋಗಿತ್ತು ಎಂದು ವೈದ್ಯರು ನಮ್ಮಗೆ ತಿಳಿಸಿದ್ದರು ಎಂದು ಹೇಳಿದ್ದಾರೆ.
ಇನ್ನು ಬಿರ್ಜು ಸಾವಿನ ಕುರಿತು ಗಣ್ಯರು ಕಂಬನಿ ಮಿಡಿದಿದ್ದಾರೆ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.