• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಕ್ಷಾತೀತವಾಗಿ ಕಾವೇರಿ ಸಮಸ್ಯೆ ಎದುರಿಸಬೇಕಿದೆ: ಸಚಿವ ಚಲುವರಾಯಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
September 5, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಚಿವ ಚಲುವರಾಯಸ್ವಾಮಿ

ಸಚಿವ ಚಲುವರಾಯಸ್ವಾಮಿ

Share on WhatsAppShare on FacebookShare on Telegram

ಹತ್ತಾರು ವರ್ಷಗಳಿಂದ ಕಾವೇರಿ ನದಿ ನೀರು ಸಮಸ್ಯೆ ಇದೆ. ಸುಪ್ರೀಂ ಕೋರ್ಟ್‌ನಲ್ಲಿ ನಮ್ಮ ಪರವಾಗಿ ತೀರ್ಪು ಬರುವಂತೆ ಪ್ರಾರ್ಥಿಸುತ್ತೇವೆ. ಪಕ್ಷಾತೀತವಾಗಿ ಎಲ್ಲರೂ ಕಾವೇರಿ ಸಮಸ್ಯೆ ಎದುರಿಸಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ADVERTISEMENT

ಮಂಡ್ಯದಲ್ಲಿ ಮಂಗಳವಾರ (ಸೆಪ್ಟೆಂಬರ್‌ 5) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ಗೆ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡ್ತೀವಿ. ಕೇವಲ ಒಂದು ಸರ್ಕಾರದಲ್ಲಿ, ಒಬ್ಬರ ಆಡಳಿತದಲ್ಲಿ ಈ ಸಮಸ್ಯೆ ಇಲ್ಲ. ಪಕ್ಷಾತೀತವಾಗಿ ಕಾವೇರಿ ಸಮಸ್ಯೆ ಎದರಿಸಬೇಕೆಂದು ದೇವೇಗೌಡರು ಹೇಳಿದ್ದಾರೆ. ತಮಿಳುನಾಡು ಕೆಳಭಾಗದಲ್ಲಿದೆ ಹಾಗಾಗಿ ಬುದ್ದಿವಂತಿಕೆಯಿಂದ ಕೆಲಸ ಮಾಡಲು ಹೆಚ್ಚು ಅವಕಾಶ ಇದೆ ಎಂದು ಹೇಳಿದರು.

ಎಲ್ಲಾ ಪಕ್ಷಗಳು ಈ ವಿಚಾರದಲ್ಲಿ ಒಗ್ಗಟ್ಟಿನ ಹೆಜ್ಜೆ ಇಡಬೇಕು. ಸರ್ವಪಕ್ಷ ಸಭೆಯಲ್ಲಿ ಎಲ್ಲರೂ ಕೈಜೋಡಿಸುವುದಾಗಿ ಹೇಳಿದ್ದಾರೆ. ಸಂಕಷ್ಟ ಸೂತ್ರಕ್ಕಾಗಿ ಒತ್ತಾಯ ಮಾಡುತ್ತಿದ್ದೇವೆ. ಪ್ರಧಾನಿಗಳ ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ. ಸರ್ವಪಕ್ಷ ನಿಯೋಗ ಹೋಗಿ ಭೇಟಿ ಮಾಡಲಿದ್ದೇವೆ. ಪಿಎಂ ಇನ್ನು ಸಮಯ ಕೊಟ್ಟಿಲ್ಲ. ರೈತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ಹೇಮಾವತಿ, ಹಾರಂಗಿ, ಕಬಿನಿ, ಕೆಆರ್‌ಎಸ್ ಅಣೆಕಟ್ಟುಗಳಿಂದ ಲೆಕ್ಕಹಾಕಿ ನೀರು ತಗೋತೀವಿ. ರೈತರ ಆತ್ಮಹತ್ಯೆ ವಿಚಾರವಾಗಿ ಡಿಕೆಶಿ ಹೇಳಿಕೆ ವಿಚಾರ. ಅವರ ಹೇಳಿಕೆ ನಾನು ಪ್ರತಿಕ್ರಿಯೆ ಕೊಡಲ್ಲ. ಡಿಸಿಎಂ ಆಗಿ ಯಾವ ಆ್ಯಂಗಲ್‌ನಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ರೈತ ಯಾವುದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ರು. ಸರ್ಕಾರ ಅವರ ಪರ ನಿಂತು ಅವಕಾಶ ಇದ್ರೆ ಪರಿಹಾರ ನೀಡುತ್ತದೆ. ವೈಯಕ್ತಿಕ, ಸಾಲದ ಭಾದೆ ಯಾವುದೇ ಇದ್ರು ರೈತ ಕುಟುಂಬಕ್ಕೆ ಸಹಾನುಭೂತಿ ತೋರುವುದು ಜವಬ್ದಾರಿ ಎಂದರು.

ಪರಿಹಾರಕ್ಕಾಗಿ ಆತ್ಮಹತ್ಯೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ವಿಚಾರ ಪ್ರಶ್ನೆಗೆ ಉತ್ತರಿಸಿ, ಪರಿಹಾರ ವಿಚಾರ ಎರಡನೇ ಮಾತು. ಪರಿಹಾರ ಕೊಡಲೇ ಬೇಕು ಅನ್ನೋದು ಮುಖ್ಯ ಅಲ್ಲ. ಕೆಲವೊಮ್ಮೆ ನಮ್ಮ ಗೈಡ್ ಲೈನ್ಸ್ ವ್ಯಾಪ್ತಿಯಲ್ಲಿ ಪರಿಹಾರ ಕೊಡ್ತೀವಿ. ವ್ಯಾಪ್ತಿಗೆ ಬರದಿದ್ರೆ ಪರಿಹಾರ ಕೊಡಲಿಕ್ಕೆ ಬರಲ್ಲ. ಆದರೆ ಆ ಕುಟುಂಬಕ್ಕೆ ಸಮಾಧಾನ ಹೇಳುವುದು ಕರ್ತವ್ಯ. ಸ್ಟಾಲಿನ್ ಓಲೈಕೆಗೆ ನೀರು ಬಿಟ್ಟರೆಂಬ ಆರೋಪ. ಸರ್ವಪಕ್ಷ ಸಭೆಯಲ್ಲಿ ಈ ವಾದ ಮಾಡಲಿ. 28 ಎಂಪಿ ಬಿಜೆಯವರು ಒಂದು ಮಾತು ಹೇಳಿಲ್ಲ. ಕಾವೇರಿ ಪ್ರಾಧಿಕಾರ ಕೇಂದ್ರದ ಹಿಡಿತದಲ್ಲಿದೆ. ಮಾತನಾಡಬಾರದು, ಬುದ್ದಿವಂತಿಕೆಯಿಂದ ರೈತರ ಹಿತ ಕಾಯಬೇಕೆಂದು ಸುಮ್ಮನಿದ್ದೇವೆ. ಪ್ರಧಾನಿಗಳ ಬಳಿ ಹೋಗಿ ನಮ್ಮ ಭೇಟಿಗೆ ಸಮಯ ಕೊಡಿಸಿ. ಏನ್ ಮಾಡ್ತಿದ್ದಾರೆ ನಮ್ಮ ಎಂಪಿಗಳು. ಇಲ್ಲಿ ಬಂದು ಬೆಂಕಿ ಹಚ್ಚೋದಲ್ಲ. ಮಾತನಾಡಿದರೆ ನ್ಯಾಯ ಸಿಗಲ್ಲ, ಬುದ್ದಿವಂತಿಕೆಯಿಂದ ರೈತರಿಗೆ ನ್ಯಾಯ ಕೊಡಿಸಬೇಕು ಎಂದು ತಿಳಿಸಿದರು.

Tags: Kaveri IssueKaveri RiverMinister Cheluvarayaswamyಕಾವೇರಿ ನದಿಕಾವೇರಿ ವಿವಾದಸಚಿವ ಚಲುವರಾಯಸ್ವಾಮಿ
Previous Post

ತಲೆ ತೆಗೆಯಲು 10 ಕೋಟಿ ರೂ. ಬದಲು ನನ್ನ ತಲೆ ಬಾಚಲು 10 ರೂ. ಬಾಚಣಿಗೆ ಸಾಕು: ಉದಯನಿಧಿ ಸ್ಟಾಲಿನ್

Next Post

ಯಾವುದೇ ಧರ್ಮ ಧರ್ಮಕ್ಕೆ ಕೆಟ್ಟ ಪ್ರವೃತ್ತಿ ಬೆಳೆಸಿ ಅಂತ ಹೇಳಲ್ಲ ; ಸಚಿವ ಚಲುವರಾಯಸ್ವಾಮಿ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಸಿದ್ದರಾಮಯ್ಯ ಸ್ಪರ್ಧೆಗೆ ನೂರು ಕ್ಷೇತ್ರಗಳಿವೆ : ಚಲುವರಾಯಸ್ವಾಮಿ..! : There Are a Hundred Constituencies For Siddaramaiah’s Contest

ಯಾವುದೇ ಧರ್ಮ ಧರ್ಮಕ್ಕೆ ಕೆಟ್ಟ ಪ್ರವೃತ್ತಿ ಬೆಳೆಸಿ ಅಂತ ಹೇಳಲ್ಲ ; ಸಚಿವ ಚಲುವರಾಯಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada