ಭಾರೀ ಮಳೆ ಹಿನ್ನೆಲೆಯಲ್ಲಿ ಚಾರ್ ಧಾಮ್ ಯಾತ್ರೆಗಳಲ್ಲಿ ಒಂದಾದ ಕೇದರಾನಾಥ್ ಯಾತ್ರೆಗೆ ಅಧಿಕಾರಿಗಳು ತಾತ್ಕಾಲಿಕ ತಡೆ ವಿಧಿಸಿದ್ದಾರೆ.
ಸೋಮವಾರ ಬೆಳಿಗ್ಗೆಯಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇದಾರನಾಥ ದೇವಾಲಯಕ್ಕೆ ಹೋಗು ಪ್ರಯತ್ನ ಮಾಡಬೇಡಿ ಎಂದು ಯಾತ್ರಾರ್ಥಿಗಳಿಗೆ ಪೊಲೀಸರು ಸೂಚನೆ ನೀಡಿದ್ದಾರೆ.
ಕೇದರಾನಾಥದಲ್ಲಿ ಮಳೆ ಹೆಚ್ಚಾಗಿದ್ದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದ ವಾಹನ ವ್ಯವಸ್ಥೆ ಇಲ್ಲ ಅಂತ ಯಾತ್ರಾರ್ಥಿಗಳು ಕಾಲ್ನಡಿಯಲ್ಲಿ ದೇವಸ್ಥಾನಕ್ಕೆ ಹೋಗಬೇಡಿ ಎಂದು ಮನವಿ ಮಾಡಿದ್ದಾರೆ.