• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇರಳದಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕು: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಕರ್ನಾಟಕ

by
April 20, 2021
in ಕರ್ನಾಟಕ
0
ಕೇರಳದಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕು: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಕರ್ನಾಟಕ
Share on WhatsAppShare on FacebookShare on Telegram

ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ವಿಪರೀತ ಏರಿಕೆಯಾಗುತ್ತಿರುವುದು ಕರ್ನಾಟಕ ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಿದೆ. ಭಾರತದ 40 ರಿಂದ 45% ಕೋವಿಡ್‌ ಪ್ರಕರಣಗಳು ಕೇರಳವೊಂದರಲ್ಲೇ ಪತ್ತೆಯಾಗುತ್ತಿದೆ ಎಂದು ಕಳೆದ ತಿಂಗಳ ವರದಿಯೂ ಹೇಳಿತ್ತು. ಅದಾಗ್ಯೂ, ಕೇರಳದಲ್ಲಿ ಪತ್ತೆಯಾಗುತ್ತಿರುವ ಕರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ.

ADVERTISEMENT

ಈ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಸರ್ಕಾರ ಕೆಲವೊಂದು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಕೇರಳದಿಂದ ರಾಜ್ಯಕ್ಕೆ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಿಂತ ಹಳೆಯದಲ್ಲದ ಕೋವಿಡ್‌ ನೆಗೆಟಿವ್‌ RT-PCR ವರದಿ ಹೊಂದಿರಬೇಕೆಂದು ಕರ್ನಾಟಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೈದ್ ಅಖ್ತಾರ್ ಅವರು ಮಂಗಳವಾರ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ, ʼಜಿಲ್ಲಾ ಆಯುಕ್ತರು ಈ ಸುತ್ತೋಲೆಯನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿದ್ದು, ಗಡಿಗಳಲ್ಲಿ ಕಣ್ಗಾವಲು ವ್ಯವಸ್ಥೆ ಇರುತ್ತದೆಂದು’ ಹೇಳಿದ್ದಾರೆ.

ಇದಲ್ಲದೆ, ಕಳೆದ ಎರಡು ವಾರಗಳಲ್ಲಿ ಕೇರಳದಿಂದ ಕರ್ನಾಟಕಕ್ಕೆ ಬಂದವರೆಲ್ಲರೂ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು ಎನ್ನಲಾಗಿದೆ.

5 ಕ್ಕಿಂತ ಹೆಚ್ಚು ಪ್ರಕರಣ ಕಂಡುಬಂದ ಕ್ಲಸ್ಟರ್‌ಗಳು ಕಂಟೈನ್‌ಮೆಂಟ್‌ ಝೋನ್!‌

RTPCR ನೆಗೆಟಿವ್‌ ವರದಿ ಇದ್ದವರಿಗೆ ಮಾತ್ರ ವಿನಾಯಿತಿ ಇದ್ದು, ನೆಗೆಟಿವ್‌ ವರದಿ ಅನುಸರಿಸದವರನ್ನು ನೋಡಲ್‌ ಅಧಿಕಾರಿಗಳ ಗಮನಕ್ಕೆ ತಂದು ನೆಗೆಟಿವ್‌ ವರದಿ ಸಿಗುವಲ್ಲಿವರೆಗೆ ಕ್ವಾರಂಟೈನ್‌ನಲ್ಲಿರಿಸಲಾಗುವುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಹಾಸ್ಟೆಲ್‌ಗಳು, ಬೋರ್ಡಿಂಗ್ ಅಥವಾ ವಸತಿ, ಶಿಕ್ಷಣ ಸಂಸ್ಥೆಗಳಲ್ಲಿ ಐದು ಅಥವಾ ಹೆಚ್ಚಿನ ಪ್ರಕರಣಗಳು ಇದ್ದರೆ, ಅಂತಹ ಸ್ಥಳಗಳನ್ನು ಸ್ಥಳೀಯ ಆರೋಗ್ಯ ಅಧಿಕಾರಿಗಳು ‘ಕಂಟೈನ್‌ಮೆಂಟ್ ವಲಯಗಳು’ ಎಂದು ಘೋಷಿಸುತ್ತಾರೆ ಮತ್ತು ವಿಶೇಷ ಕಣ್ಗಾವಲು ಕ್ರಮಗಳನ್ನು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಕಂಟೈನ್‌ಮೆಂಟ್‌ ಝೋನ್‌ ಎಂದು ಘೋಷಿಸಿದ ಏಳು ದಿನಗಳ ಬಳಿಕ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕೋವಿಡ್‌ ಮರು ಪರೀಕ್ಷೆ ನಡೆಸಲಾಗುವುದು.

ಫೇಸ್‌‌ ಮಾಸ್ಕ್ ಕಡ್ಡಾಯವಾಗಿ ಧರಿಸುವುದು, ದೈಹಿಕ ಅಂತರ ಕಾಪಾಡುವುದು, ಕೈಗಳಿಗೆ ಸ್ಯಾನಿಟೈಸರ್ಗಳ ಬಳಕೆಯನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿದ್ದು, ನಿರ್ಲಕ್ಷ್ಯಗಳಿಗೆ ಹಾಸ್ಟೆಲ್‌ಗಳು ಮತ್ತು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹೊಣೆಯಾಗುತ್ತಾರೆ.

ಕೋವಿಡ್‌ ನೋಡಲ್‌ ಅಧಿಕಾರಿಗಳ ಅನುಮತಿಯಿಲ್ಲದೆ ಹಾಸ್ಟೆಲ್‌ ಹಾಗೂ ಕಾಲೇಜುಗಳಿಗೆ ಸಂದರ್ಶಕರ, ಸಂಬಂಧಿಕರ ಭೇಟಿಗೆ ಅವಕಾಶ ನೀಡದಂತೆ ಸರ್ಕಾರ ಹೇಳಿದೆ.

ಹಾಸ್ಟೆಲ್‌ಗಳಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆಗಳು

ವಿದ್ಯಾರ್ಥಿಗಳು ಪ್ರತ್ಯೇಕ ಕೋಣೆಗಳಲ್ಲಿ ಇರಬೇಕು. ಊಟಮಾಡುವ ಪ್ರದೇಶಗಳಲ್ಲಿ ಜನಸಂದಣಿ ಕಡಿಮೆ ಇರಬೇಕು, ಕಾಯುವ ಸಭಾಂಗಣಗಳು, ಓದುವ ಕೋಣೆಗಳು, ಆಟದ ಪ್ರದೇಶಗಳು, ಜಿಮ್ನಾಷಿಯಂ ಮುಂತಾದ ಕಡೆಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಸೋಂಕಿನ ಹರಡುವಿಕೆಗೆ ಅವಕಾಶ ಮಾಡಕೂಡದು.

Previous Post

ತಂದೆ ‌ಹಂತಕರ ಮೇಲೆ ಯಾವುದೇ ಧ್ವೇಷವಿಲ್ಲ -ರಾಹುಲ್‌ ಗಾಂಧಿ

Next Post

ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ಹಠಾತ್ ಬದಲಾವಣೆಗೆ ಕಾರಣವೇನು?

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ಹಠಾತ್ ಬದಲಾವಣೆಗೆ ಕಾರಣವೇನು?

ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ಹಠಾತ್ ಬದಲಾವಣೆಗೆ ಕಾರಣವೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada