• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ವಾಡಿಕೆಗಿಂತ 135% ಹೆಚ್ಚು ಮಳೆ ಪಡೆದ ಕೇರಳ: ದೇವರ ನಾಡು ಕಂಗಾಲು

ಫಾತಿಮಾ by ಫಾತಿಮಾ
October 22, 2021
in Uncategorized
0
ವಾಡಿಕೆಗಿಂತ 135% ಹೆಚ್ಚು ಮಳೆ ಪಡೆದ ಕೇರಳ: ದೇವರ ನಾಡು ಕಂಗಾಲು
Share on WhatsAppShare on FacebookShare on Telegram

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ರೂಪುಗೊಂಡ ಚಂಡಮಾರುತದ ಸಂಗಮವು ಕಳೆದ ಕೆಲವು ದಿನಗಳಿಂದ ದೇಶದ ವಿವಿಧ ಕಡೆಗಳಲ್ಲಿ ಮಳೆ ಸುರಿಸುತ್ತಿದೆ. ಉತ್ತರಾಖಂಡ ಮತ್ತು ಕೇರಳದಲ್ಲಿ ಸುರಿಯುತ್ತಿರುವ ಮಳೆಗೆ ಜನಜೀವನ ತೀರಾ ಅಸ್ತವ್ಯಸ್ತಗೊಂಡಿದೆ.

ADVERTISEMENT

ವಾಡಿಕೆಯಂತೆ ಕೇರಳದಲ್ಲಿ ಅಕ್ಟೋಬರಿನಲ್ಲಿ 192.7 ಮೀಮೀ ಮಳೆಯಾಗಬೇಕಿತ್ತು. ಆದರೆ ಅಕ್ಟೋಬರ್ 19ರ  ವರೆಗೇ 453.5 ಮಿಮೀ ಆಗಿದೆ. ಇದು ವಾಡಿಕೆಗಿಂತ 135% ಅಧಿಕ. ಅಕ್ಟೋಬರ್ 20 ರ ನಂತರ ಕೇರಳದಲ್ಲಿ ಮತ್ತೊಂದು ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು ಈಗಾಗಲೇ ಎಚ್ಚರಿಸಿದೆ.

ಅಕ್ಟೋಬರ್ ತಿಂಗಳಲ್ಲಿ ಮಳೆ ಸುರಿಯುವುದು ಅಸಾಮಾನ್ಯ ಘಟನೆಯಲ್ಲ. ಆದರೆ ಈ ಸಮಯದಲ್ಲಿ ಸಾಮಾನ್ಯವಾಗಿ ಮುಂಗಾರು ಹಿಂದಡಿ ಇಟ್ಟು ಹಿಂಗಾರು ಸುರಿಯಬೇಕು. ಸಾಮಾನ್ಯವಾಗಿ ಮುಂಗಾರು ಸೆಪ್ಟೆಂಬರ್ 1 ರ ವೇಳೆಗೆ ಹಿಂತೆಗೆದುಕೊಳ್ಳಲು ಆರಂಭಿಸುತ್ತದೆ ಮತ್ತು ಅಕ್ಟೋಬರ್ ವೇಳೆಗೆ ಸಂಪೂರ್ಣವಾಗಿ ಹೋಗಬೇಕು. ಆದರೆ  2019 ಮತ್ತು 2020 ರಲ್ಲಿ  ಮುಂಗಾರು ಅಕ್ಟೋಬರ್‌ನಲ್ಲಿ ತನ್ನ ಹಿಂತೆಗೆತವನ್ನು ಆರಂಭಿಸಿತ್ತು ಮತ್ತು ಈ ವರ್ಷವೂ ಅದೇ ನಿರೀಕ್ಷೆಯಿದೆ ಎಂದು ಐಎಂಡಿ ಈ ಮೊದಲೇ ವರದಿ ಮಾಡಿತ್ತು.

ಆದರೆ ಕಳೆದ ಆರು ದಿನಗಳಲ್ಲಿ ಸುರಿಯುತ್ತಿರುವ ವಿಪರೀತ ಮಳೆಗೆ ಅರಬ್ಬೀ ಸಮುದ್ರದಲ್ಲಿ ರೂಪುಗೊಂಡ ಕಡಿಮೆ ಒತ್ತಡವೇ ಕಾರಣ ಎಂದು ಐಎಂಡಿ ಹೇಳಿದೆ. ಉಕ್ಕಿ ಹರಿಯುತ್ತಿರುವ ನದಿಗಳು, ಪ್ರವಾಹಕ್ಕೆ ಸಿಲುಕಿರುವ ವಾಹನಗಳು, ಭೂಕುಸಿತದಿಂದ ಜರ್ಜರಿತವಾದ ಮನೆಗಳು ದೇವರ ರಾಜ್ಯವನ್ನ ಕಂಗಾಲು ಮಾಡಿದೆ.

ಅಕ್ಟೋಬರ್‌ 19ರ ವರೆಗೆ ಕನಿಷ್ಠ 27 ಮಂದಿ ಸಾವನ್ನಪ್ಪಿದದ್ದಾರೆ ಎಂದು ಸರ್ಕಾರದ ಅಧಿಕೃತ ಅಂಕಿ ಅಂಶಗಳು ಮಾಹಿತಿ ನೀಡಿದೆ. ಕೊಟ್ಟಾಯಂ ಜಿಲ್ಲೆಯೊಂದರಲ್ಲೇ ಭೂಕುಸಿತದಿಂದ 13 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳುತ್ತಾರೆ ಅಧಿಕಾರಿಗಳು.  ಇಡುಕ್ಕಿ ಜಿಲ್ಲೆಯಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ ಸ್ಥಳದಿಂದ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇಬ್ಬರು ವ್ಯಕ್ತಿಗಳು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಮಲಪ್ಪುರಂ ಜಿಲ್ಲೆಯ ಮೂವರು ಮೀನುಗಾರರು ಕೂಡ ನಾಪತ್ತೆಯಾಗಿದ್ದಾರೆ. ಕೇವಲ ಪ್ರವಾಹ ಅಥವಾ ಭೂಕುಸಿದಿಂದ ಮಾತ್ರವಲ್ಲದೆ ಇತರ ಕಾರಣಗಳಿಂದಲೂ ಜನತೆ ಸಾವೀಗೀಡಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿರುವ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ.ಕೌಶಿಕನ್  “ವಾಹನದ ಕೆಳಗೆ ಸಿಲುಕಿದ್ದರಿಂದ ಇಬ್ಬರು ಮತ್ತು ಗೋಡೆ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ” ಎಂದಿದ್ದಾರೆ. ಪ್ರವಾಹದಲ್ಲಿ ಸಿಲುಕಿದರವರನ್ನು ರಕ್ಷಿಸಿದ ಬಳಿಕವಷ್ಟೇ ಒಟ್ಟು ಕಾಣೆಯಾದವರ ಸಂಖ್ಯೆಯನ್ನು ನಿರ್ಧರಿಸಲು ಸಾಧ್ಯ ಎಂದು ಕೌಶಿಕನ್ ಹೇಳಿದ್ದಾರೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ರಾಜ್ಯಾದ್ಯಂತ 150 ಕ್ಕೂ ಹೆಚ್ಚು ಪರಿಹಾರ ಶಿಬಿರಗಳಿಗೆ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ.

ಆಗಸ್ಟ್ 2018 ರಲ್ಲೂ ಇದೇ ರೀತಿಯ ಘಟನೆ ಸಂಭವಿಸಿದ್ದು ಕೇರಳದಲ್ಲಿ ಸುರಿದ ಧಾರಾಕಾರ ಮಳೆಗೆ ಕನಿಷ್ಠ 324 ಜನರು ಸಾವನ್ನಪ್ಪಿದ್ದರು ಮತ್ತು 300,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿತ್ತು.‌ ಅದು ಆ ರಾಜ್ಯವು ಸುಮಾರು ಒಂದು ಶತಮಾನದಲ್ಲಿ ಕಂಡ ಭೀಕರ ಪ್ರವಾಹವಾಗಿತ್ತು.  ಕೇರಳದ 14 ಜಿಲ್ಲೆಗಳಲ್ಲಿ 13 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್‌ ಘೋಷಿಸಿತ್ತು.

ಕೇರಳದಲ್ಲಿ ಧಾರಾಕಾರ ಮಳೆ ಸುರಿಯುವುದು ಹೊಸದಲ್ಲವಾದರೂ ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿ ಪ್ರವಾಹ ಮತ್ತು ಭೂಕುಸಿತಗಳು ತೀವ್ರವಾಗುತ್ತಿವೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಕಡಿಮೆ ಒತ್ತಡ ಇದಕ್ಕೆ ಎಷ್ಟು ಕಾರಣವೋ ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟಗಳಲ್ಲಿ ಹೆಚ್ಚಿರುವ ಅಕ್ರಮ ಕಲ್ಲು ಗಣಿಗಾರಿಕೆ, ಕಾಡು ಮತ್ತು ಹುಲ್ಲುಗಾವಲುಗಳ ನಾಶ, ನೀರಿನ ಹರಿವಿನ ಬದಲಾವಣೆ ಮತ್ತು ನದಿ ತೀರದಲ್ಲಿ ಮರಳು ಗಣಿಗಾರಿಕೆ ಇತ್ಯಾದಿ ಮಾನವ ಹಸ್ತಕ್ಷೇಪಗಳು ಹೆಚ್ಚಾಗಿರುವುದೂ ಇಂತಹ ಅನಾಹುತಗಳಿಗೆ ಕಾರಣ ಎಂದು  ತಜ್ಞರು ಅಭಿಪ್ರಾಯ ಪಡುತ್ತಾರೆ. ಮಣ್ಣಿನ ಇಂಗುವಿಕೆಯ ಸಾಮರ್ಥ್ಯ‌ಕ್ಕಿಂತಲೂ ಹೆಚ್ಚಿನ ಮಳೆ ಸುರಿದಾಗ  ಸಹಜವಾಗಿಯೇ ನೀರು ಸಿಕ್ಕ ಸಿಕ್ಕ ದಿಕ್ಕಿನಲ್ಲಿ ಹರಿಯತೊಡಗುತ್ತದೆ. ಹಾಗಾಗಿ ನಗರೀಕರಣ ಹೆಚ್ಚಾದಂತೆ ಪ್ರವಾಹವೂ ಹೆಚ್ಚುತ್ತಿದೆ, ಪ್ರತಿ ವರ್ಷ‌ ಸಂಭವಿಸುವ ಜೀವ, ಆಸ್ತಪಾಸ್ತಿ ಹಾನಿಯೂ ಹೆಚ್ಚುತ್ತಿದೆ.

Previous Post

ಗಡಿ ಪ್ರದೇಶ ಅತಿಕ್ರಮಣಕ್ಕೆ ಮುಂದಾದ ಚೀನಾ; ಕಣ್ಗಾವಲು ಹೆಚ್ಚಿಸಿದ ಭಾರತದಿಂದ ಹೆರಾನ್ ಡ್ರೋಣ್ ಅಳವಡಿಕೆ

Next Post

ಚುನಾವಣೆ ವೇಳೆ ನಾವು ಮಿಷನ್ ಹಾನಗಲ್ ಮಾಡ್ತೀವಿ ಎಂದು ಹೇಳುತ್ತಿದ್ದಾರೆ, ಇಷ್ಟು ದಿನ ಎಲ್ಲಿದ್ದರು? ; ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪ್ರಶ್ನೆ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಚುನಾವಣೆ ವೇಳೆ ನಾವು ಮಿಷನ್ ಹಾನಗಲ್ ಮಾಡ್ತೀವಿ ಎಂದು ಹೇಳುತ್ತಿದ್ದಾರೆ, ಇಷ್ಟು ದಿನ ಎಲ್ಲಿದ್ದರು? ; ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪ್ರಶ್ನೆ

ಚುನಾವಣೆ ವೇಳೆ ನಾವು ಮಿಷನ್ ಹಾನಗಲ್ ಮಾಡ್ತೀವಿ ಎಂದು ಹೇಳುತ್ತಿದ್ದಾರೆ, ಇಷ್ಟು ದಿನ ಎಲ್ಲಿದ್ದರು? ; ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪ್ರಶ್ನೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada