• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಮುಖ್ಯ ನಿರ್ಣಯಗಳು..!!

ಪ್ರತಿಧ್ವನಿ by ಪ್ರತಿಧ್ವನಿ
October 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಕೃಷಿ ಇಲಾಖೆಯಡಿ 2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯವರು ಪಡೆಯುವ ತಲಾ ರೂ.200.00 ಕೋಟಿಗಳ ಬಂಡವಾಳ ಸಾಲಕ್ಕೆ ರಾಜ್ಯ ಸರ್ಕಾರದ ಖಾತ್ರಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ADVERTISEMENT


• ಜಲಾನಯನ ಅಭಿವೃದ್ಧಿ ಘಟಕ-ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ 2.0 (PMKSY-WDC 2.0) ಯೋಜನೆಯಡಿ ಹೆಚ್ಚುವರಿ 15 ಯೋಜನೆಗಳನ್ನು ರಾಜ್ಯದ 15 ತಾಲ್ಲೂಕುಗಳಲ್ಲಿ 39413 ಹೆಕ್ಟೇರ್ ಪ್ರದೇಶದಲ್ಲಿ ಯೋಜನಾ ಮೊತ್ತ ರೂ.90.07 ಕೋಟಿಗಳಲ್ಲಿ (ಕೇಂದ್ರ ಮತ್ತು ರಾಜ್ಯ ಸರ್ಕಾರ – ಶೇ.60:40) ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ನಿರ್ಣಯಿಸಲಾಯಿತು.
• ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.
• 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 452 ರಲ್ಲಿನ ಘೋಷಣೆಯನ್ವಯ, ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿನ (State Data Centre) ಭದ್ರತಾ ಕಾರ್ಯಾಚರಣೆ ಕೇಂದ್ರವನ್ನು ನವೀಕರಿಸಲು ಮತ್ತು ಸೈಬರ್ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶಕ್ಕಾಗಿ ವಾರ್ಷಿಕ ರೂ.38.33 ಕೋಟಿಗಳ ಅಂದಾಜು ವೆಚ್ಚದಲ್ಲಿ ಹೊಸ ತಂತ್ರಾAಶಗಳನ್ನು ಅಳವಡಿಸಲು; ಸಚಿವ ಸಂಪುಟ ನಿರ್ಣಯಿಸಿದೆ.


• 5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ನವೆಂಬರ್ 2025 ರವರೆಗೆವಿಸ್ತರಿಸಲು ಸಚಿವ ಸಂಪುಟ ನಿರ್ಣಯಿಸಿದೆ.
• ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎರಡನೇ ಹಂತದಲ್ಲಿ 11 ಶ್ರಮಿಕ ವಸತಿ ಶಾಲೆಗಳನ್ನು ರೂ.405.55 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.
• ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್ MNC ಗಳು IT ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ (Menstrual Leave Policy, 2025) ನ್ನು ಜಾರಿಗೆ ತರಲು ಸಚಿವ ಸಂಪುಟ ನಿರ್ಣಯಿಸಿದೆ.
• ಲೋಕೋಪಯೋಗಿ ಇಲಾಖೆಯಡಿ ಸೇತುವೆಗಳು ಪುನರ್ ನಿರ್ಮಾಣ ಹಾಗೂ ಪುನಶ್ಚೇತನ ಕಾಮಗಾರಿಗಳನ್ನು ರೂ.2000.00 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತಾತ್ವಿಕ ಅನುಮೋದನೆ ಹಾಗೂ ಮೊದಲನೇ ಹಂತದಲ್ಲಿ PRAMC ಅಧ್ಯಯನದಲ್ಲಿ ಗುರುತಿಸಿರುವ 39 ಬೃಹತ್ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳನ್ನು ರೂ.1000.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.


• ಬೀದರ್ ಜಿಲ್ಲೆ ಔರಾದ್ (ಬಿ) ಪಟ್ಟಣ ಪಂಚಾಯತಿಯಿAದ “ಔರಾದ್ ಪುರಸಭೆ” ಯನ್ನು ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಣಯಿಸಿದೆ.
• ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಯ ವತಿಯಿಂದ ಕರಿವೋಬನಹಳ್ಳಿಯಿಂದ ನಾಗಸಂದ್ರ ಹೊಸ ಬಳಸಿದ ನೀರು ಸಂಸ್ಕರಣಾ ಘಟಕದವರೆಗೆ ಇರುವ ರೈಸಿಂಗ್ ಮೇನ್ ಸೇರಿ ನಾಗಸಂದ್ರದಲ್ಲಿ 20 MLD ಬಳಸಿದ ನೀರು ಸಂಸ್ಕರಣಾ ಘಟಕ (UWTP) ಮತ್ತು 5 MLD ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಾಗಾರಗಳ 05 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯನ್ನು ರೂ.26.02 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ.
• ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜುನ್ನು ಸ್ವಾಯತ್ತ ಸ್ಥಾನಮಾನದೊಂದಿಗೆ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಬಿಸಲು ಮತ್ತು ಅವ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, 300 ಹಾಸಿಗೆಗಳ ಬೋಧನಾ ಆಸ್ಪತ್ರೆ, ವಸತಿ ನಿಲಯಗಳು ಮತ್ತಿತರ ಕಾಮಗಾರಿಗಳನ್ನು ರೂ.550.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.


• ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪುರಸಭೆ ವ್ಯಾಪ್ತಿಯಲ್ಲಿ 1668.80 ಚ.ಮೀ ಕಲಬುರಗಿ ಜಿಲ್ಲೆಯ ಅಫಜಲಪುರ್ ಪುರಸಭೆ ವ್ಯಾಪ್ತಿಯಲ್ಲಿ 1120.60 ಚ.ಮೀ ಧಾರವಾಡ ಜಿಲ್ಲೆಯ ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ 1287.77 ಚ.ಮೀ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಪುರಸಭೆ ವ್ಯಾಪ್ತಿಯಲ್ಲಿ 4200.00 ಚ.ಅಡಿ ನಾಗರೀಕ ಸೌಲಭ್ಯ ನಿವೇಶನಗಳನ್ನು ಕಾಂಗ್ರೆಸ್ ಭವನ ನಿರ್ಮಾಣ ಮಾಡಲು ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ಇವರಿಗೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿದೆ.
• ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಮಂಗಳೂರಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3,285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ DBFOT ಆಧಾರದ ಮೇಲೆ ನಗದೀಕರಿಸಲು ಮತ್ತು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ.


• ಸಿಪಿಸಿ ಪಾಲಿಟೆಕ್ನಿಕ್, ಮೈಸೂರು ಸಂಸ್ಥೆಯ ಕಟ್ಟಡದ ನವೀಕರಣ & ಹೊಸ ಸಂಸ್ಥೆಯ ಕಟ್ಟಡದ ನವೀಕರಣ & ಆಡಿಟೋರಿಯಂ ಅನ್ನು ಒಳಗೊಂಡAತೆ ಮೂಲಭೂತ ಸೌಕರ್ಯಗಳನ್ನು ತಲಾ ರೂ.70.00 ಕೋಟಿಗಳು ಹಾಗೂ ರೂ.50.00 ಕೋಟಿಗಳ ಮೊತ್ತದಲ್ಲಿ ಒದಗಿಸಿರುವ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
• ಕೇಂದ್ರ ಪುರಸ್ಕೃತ SASCI (Special Assistance to State Capital Investment – Development of Iconic Tourist Destination) ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯ ತಾತಗುಣಿಯಲ್ಲಿರುವ ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್ನಲ್ಲಿ ಪರಿಸರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಕೇಂದ್ರ ಅಭಿವೃದ್ಧಿಪಡಿಸುವ ರೂ.99.17 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಸಂಬAಧಿಸಿದAತೆ ಮೊದಲನೇ ಹಂತದ ಕಾಮಗಾರಿಗಳನ್ನು ರೂ.55.33 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ.


• ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಎಎವೈ ಮತ್ತು ಪಿಎಚ್ಎಚ್ ಪಡಿತರ ಫಲಾನುಭವಿಗಳಿಗೆ ಪರ್ಯಾಯವಾಗಿ ಇಂದಿರಾ ಆಹಾರ ಕಿಟ್ಗಳನ್ನು (ಪೌಷ್ಠಿಕ ಆಹಾರ ಕಿಟ್- ತೊಗರಿ ಬೆಳೆ 2ಕೆಜಿ, ಅಡುಗೆ ಎಣ್ಣೆ 1ಕೆಜಿ, ಸಕ್ಕರೆ 1ಕೆಜಿ, ಉಪ್ಪು 1ಕೆಜಿ.) ರೂ.61.19 ಕೋಟಿಗಳ ಮೊತ್ತದಲ್ಲಿ ವಿತರಿಸಲು ಸಚಿವ ಸಂಪುಟ ನಿರ್ಣಯಿಸಿದೆ.

Tags: CM Siddaramaiahcm siddaramaiah budgetcm siddaramaiah cabinetcm siddaramaiah dancecm siddaramaiah dasaracm siddaramaiah latest newscm siddaramaiah livecm siddaramaiah newscm siddaramaiah patriotic momentcm siddaramaiah press meetcm siddaramaiah speechcm siddaramaiah speech 2025cm siddaramaiah statuscm siddaramaiah today newscm siddaramaiah videokarnataka cm siddaramaiahkarnataka next cm siddaramaiahSiddaramaiah CMsiddaramaiah karnataka cm
Previous Post

Siddaramaiah: ನಮ್ಮ ಸರ್ಕಾರ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ‌ ಖರ್ಚು ಮಾಡುತ್ತಿದೆ: ಸಿ.ಎಂ

Next Post

ಋತುಚಕ್ರ ರಜೆ ನೀತಿ – 2025ಕ್ಕೆ ಸಿಕ್ಕಿತು ಸಚಿವ ಸಂಪುಟದ ಅನುಮೋದನೆ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಋತುಚಕ್ರ ರಜೆ ನೀತಿ – 2025ಕ್ಕೆ ಸಿಕ್ಕಿತು ಸಚಿವ ಸಂಪುಟದ ಅನುಮೋದನೆ

ಋತುಚಕ್ರ ರಜೆ ನೀತಿ - 2025ಕ್ಕೆ ಸಿಕ್ಕಿತು ಸಚಿವ ಸಂಪುಟದ ಅನುಮೋದನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada