• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾಳೆ ಬಿಜೆಪಿ ಪರ ಕಿಚ್ಚ ಸುದೀಪ್‌ ಪ್ರಚಾರ.. ಎಲ್ಲೆಲ್ಲಿ ಗೊತ್ತಾ..?

Any Mind by Any Mind
April 25, 2023
in ಕರ್ನಾಟಕ, ರಾಜಕೀಯ
0
ನಾಳೆ ಬಿಜೆಪಿ ಪರ ಕಿಚ್ಚ ಸುದೀಪ್‌ ಪ್ರಚಾರ.. ಎಲ್ಲೆಲ್ಲಿ ಗೊತ್ತಾ..?
Share on WhatsAppShare on FacebookShare on Telegram

ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆ ರಂಗೇರಿದೆ. ದಿನ ಕಳೆದಂತೆ ಪಕ್ಷದ ನಾಯಕರು ರಾಜ್ಯದ ಮೂಲೆ ಮೂಲೆಗೂ ತಿರುಗಿ ಅಬ್ಬರದ ಪ್ರಚಾರ ಮಾಡ್ತಿದ್ದಾರೆ. ಇದೀಗ ನಾಳೆ ಬಿಜೆಪಿ ಪರ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭರ್ಜರಿ ಮತಬೇಟೆ ನಡೆಸಲಿದ್ದಾರೆ. ಕೆಲ ದಿನಗಳ ಹಿಂದೆ ಬಿಜೆಪಿ ಅದರಲ್ಲೂ ಸಿಎಂ ಬಸವರಾಜ ಬೊಮ್ಮಾಯಿಯವರ ಪರ ಪ್ರಚಾರ ಮಾಡುವುದಾಗಿ ಕಿಚ್ಚ ಸುದೀಪ್‌ ಘೋಷಿಸಿದ್ದರು. ಸುದೀಪ್‌ರ ಈ ನಿರ್ಧಾರದ ಬಗ್ಗೆ ಸಾಕಷ್ಟು ಪರ ವಿರೋಧಗಳು ವ್ಯಕ್ತವಾಗಿದ್ದವು. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ನಟ ಕಿಚ್ಚ ಸುದೀಪ್‌ ತಮ್ಮ ಮಾವ ಬಸವರಾಜ ಬೊಮ್ಮಾಯಿಯವರ ಬೆಂಬಲಕ್ಕೆ ನಿಂತಿದ್ದಾರೆ.

ADVERTISEMENT

ಕಳೆದ ವಾರವಷ್ಟೇ ಸಿಎಂ ಬೊಮ್ಮಾಯಿ ಪರ ಪ್ರಚಾರಕ್ಕಾಗಿ ಶಿಗ್ಗಾಂವಿಗೆ ತೆರಳಿದ್ದ ಸುದೀಪ್‌, ನಾಳೆ ಹಲವು ಊರುಗಳಲ್ಲಿ ಬಿಜೆಪಿ (BJP) ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಬೊಮ್ಮಾಯಿ ಮಾಮ ಸೂಚಿಸಿದ ಊರುಗಳಿಗೆ ಹೋಗಿ ಪ್ರಚಾರ ಮಾಡುತ್ತೇನೆ ಎಂದಿದ್ದ ಕಿಚ್ಚ ಕೊಟ್ಟ ಮಾತಿನಂತೆ ನಾಳೆಯಿಂದ ಭರ್ಜರಿ ಪ್ರಚಾರ (campaign) ಮಾಡಲಿದ್ದಾರೆ. ಕಿಚ್ಚನಿಗಾಗಿಯೇ ಹೆಲಿಕಾಪ್ಟರ್ ಸಿದ್ಧಗೊಂಡಿದೆ. ನಾಳೆ ಸುದೀಪ್ ಯಾವೆಲ್ಲ ಊರಿಗೆ ಹೋಗಬೇಕು ಮತ್ತು ಯಾರ ಪರವಾಗಿ ಪ್ರಚಾರ ಮಾಡಬೇಕು ಎನ್ನುವುದರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.

ಬೆಂಗಳೂರಿನಿಂದ ಹೊರಡುವ ಕಿಚ್ಚ, ನಾಳೆಯೇ ಐದು ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಮಾಡಲಿದ್ದಾರೆ. ಬೆಂಗಳೂರಿನಿಂದ ಹೊರಡುವ ಇವರ ಪಯಣ ಮೊದಲು ಮೊಳಕಾಲ್ಮೂರು ಕ್ಷೇತ್ರದಿಂದ ಪ್ರಚಾರ ಆರಂಭಿಸಲಿದೆ. ಬೆಳಗ್ಗೆ 10.15ಕ್ಕೆ ಮೊಳಕಾಲ್ಮೂರು (Molakalmuru) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಪರವಾಗಿ ಕಿಚ್ಚ ಮತಯಾಚನೆ ಮಾಡಲಿದ್ದಾರೆ. ಮೊಳಕಾಲ್ಮೂರು ಕ್ಷೇತ್ರದಿಂದ ನೇರವಾಗಿ ಜಗಳೂರು (Jagaluru) ಕ್ಷೇತ್ರದತ್ತ ಹೆಲಿಕಾಪ್ಟರ್ ನಲ್ಲೇ ಪ್ರಯಾಣ ಮುಂದುವರೆಸುವ ಸುದೀಪ್ 12.30ಕ್ಕೆ ಜಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಅವರ ಪರವಾಗಿ ರೋಡ್ ಶೋ ನಡೆಸಲಿದ್ದಾರೆ.

ಒಂದು ಗಂಟೆಗೂ ಅಧಿಕ ಕಾಲ ಅವರು ರೋಡ್ ಶೋ ಮಾಡಲಿದ್ದಾರೆ. ಮಾಯಕೊಂಡದಿಂದ ಸುದೀಪ್ ದಾವಣಗೆರೆಗೆ (Davangere) ತೆರಳಲಿದ್ದು, ದಾವಣಗೆರೆಯ ಸೌತ್ ಮತ್ತು ನಾರ್ತ್ ಕ್ಷೇತ್ರಗಳ ಅಭ್ಯರ್ಥಿಗಳಾದ ಲೊಕ್ಕಿಕೆರೆ ನಾಗರಾಜ ಹಾಗೂ ಬಿ.ಜಿ. ಅಜಯ್ ಕುಮಾರ್ ಪರವಾಗಿ ಸಂಜೆ 4.20ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಅಲ್ಲಿಂದ ನೇರವಾಗಿ ಸಂಡೂರಿಗೆ ತೆರಳಿ ಸಂಡೂರು (Sandur) ಬಿಜೆಪಿ ಅಭ್ಯರ್ಥಿ ಶಿಲ್ಪಾ ನಾಗೇಂದ್ರ ಪರವಾಗಿ ಸಂಜೆ 6.10ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.

Tags: #actor#basavarajbommai#bjp#campaign#election2023#karnataka#karnatakaassemblyelection#kicchasudeep#pratidhvani#pratidhvanidigital#pratidhvaninews#sandalwood
Previous Post

ಸಿಎಂ ರೇಸ್:‌ ಸಿಟಿ ರವಿಗೆ ಈಶ್ವರಪ್ಪ ಸಾಥ್;‌ ಬಿಜೆಪಿಯಲ್ಲಿ ಲಿಂಗಾಯತರ ಭವಿಷ್ಯವೇನು?

Next Post

ಚಾಮರಾಜನಗರದಲ್ಲಿ ಹೊಂದಾಣಿಕೆ ರಾಜಕೀಯಕ್ಕೆ ಮುಂದಾದ್ರಾ ಸಚಿವ ವಿ.ಸೋಮಣ್ಣ..?

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಚಾಮರಾಜನಗರದಲ್ಲಿ ಹೊಂದಾಣಿಕೆ ರಾಜಕೀಯಕ್ಕೆ ಮುಂದಾದ್ರಾ ಸಚಿವ ವಿ.ಸೋಮಣ್ಣ..?

ಚಾಮರಾಜನಗರದಲ್ಲಿ ಹೊಂದಾಣಿಕೆ ರಾಜಕೀಯಕ್ಕೆ ಮುಂದಾದ್ರಾ ಸಚಿವ ವಿ.ಸೋಮಣ್ಣ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada