ಚಾಲೆಂಜಿಂಗ್ ಸ್ಟಾರ್ ಡಿ ಬಾಸ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ಕ್ರಾಂತಿ ಈಗಾಗಲೇ ಟೈಟಲ್, ಟೀಸರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ಸದ್ದು ಮಾಡುತ್ತಿದ್ದು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಇನ್ನು ಭಾನುವಾರ ಹೊಸಪೇಟೆಯಲ್ಲಿ ಚಿತ್ರದ ಎರಡನೇ ಹಾಡು ಬೊಂಬೆ ಬೊಂಬೆ ಬಿಡುಗಡೆ ಸಮಾರಂಭವನ್ನ ಚಿತ್ರತಂಡ ಹಮ್ಮಿಕೊಂಡಿತ್ತು ಈ ವೇಳೆ ಅಪ್ಪು ಅಭಿಮಾನಿಗಳು ದರ್ಶನ್ ಭಾವಚಿತ್ರವಿರುದ್ದ ಪ್ಲೆಕ್ಸ್ಗಳನ್ನ ಹರಿದು ಹಾಕಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಮೂಲಕ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು. ಈ ವೇಳೆ ಕಿಡಿಗೇಡಿಯೋರ್ವ ದಾಸನ ಮೇಲೆ ಚಪ್ಪಲಿ ಎಸೆದಿರುವುದು ತೀವ್ರ ಖಂಡನೆಗೆ ಗುರಿಯಾಗಿದೆ.
ಘಟನೆ ನಡೆದ ಬೆನ್ನಲ್ಲೇ ನಟ ದರ್ಶನ್ ಬೆನ್ನಿಗೆ ನಿಂತಿರುವ ಸ್ಯಾಂಡಲ್ವುಡ್ ಸಿನಿ ಮಂದಿಯ ಜೊತೆ ಇದೀಗ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ತಮ್ಮ ಮಾಜಿ ಸ್ನೇಹಿತನ ಬೆಂಬಲಕ್ಕೆ ನಿಲ್ಲುವ ಮೂಲಕ ಘಟನೆಯನ್ನ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ ನಮ್ಮ ನೆಲ, ಜಲ, ಭಾಷೆ, ಸಂಸ್ಕೃತಿ ಇದೆಲ್ಲವೂ ಪ್ರೀತಿ ಮತ್ತು ಗೌರವದಿಂದ ಕೂಡಿದೆ ಿಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಘನತೆಯಿಂದ ವರ್ತಿಸಲು ಅರ್ಹರಾಗಿದ್ದಾರೆ ಮತ್ತು ಸಮಸ್ಯೆಯನ್ನು ಶಾಂತ ರೀತಿಯಲ್ಲಿ ಪರಿಹರಿಸಬಹುದು ಎಂದು ಹೇಳಿದ್ದಾರೆ.
ವಿಡಿಯೋ ನೋಡಿ ನನ್ನಗೆ ತುಂಬಾ ಆಘಾತವಾಯಿತ್ತು ಮತ್ತು ಕಾರ್ಯಕ್ರಮದಲ್ಲಿ ಚಿತ್ರತಂಡ ಸಹ ಇತ್ತು ಸಾರ್ವಜನಿಕವಾಗಿ ಅವಮಾನಿಸುವುದನ್ನು ನೋಡಿದ ಮೇಲೆ ನಾವು ಕನ್ನಡಿಗರೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ ಎಂದು ಬೇಸರಿಸಿದ್ದಾರೆ.






