ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಉಸ್ತುವಾರಿ ಕ್ಷೇತ್ರ ಚಿಕ್ಕಮಗಳೂರಿನ ಕಚೇರಿಯಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದೆ.
ಸರ್ಕಾರ ನೇಮಿಸಿರುವ ಆಪ್ತ ಸಹಾಯಕರು ಹಾಗೂ ಸಚಿವ ಜಾರ್ಜ್ ಅವರ ಪರ್ಸನಲ್ ಇಬ್ಬರು ಆಪ್ತ ಸಹಾಯಕರು ಅದೇ ಕಚೇರಿಯಲ್ಲಿ ಉಳಿದುಕೊಂಡಿದ್ದಾರೆ. ಎರಡು ದಿನದ ಹಿಂದೆ ಕಚೇರಿಯಲ್ಲಿ ಬ್ಯಾಗ್ ಇಟ್ಟು ಹೊರಗಡೆ ಹೋಗಿ ಬರುವಷ್ಟರಲ್ಲಿ ಬ್ಯಾಗ್ ನಾಪತ್ತೆಯಾಗಿದೆ.
ಕೆ.ಜೆ ಜಾರ್ಜ್ ಅವರ ಖಾಸಗಿ ಆಪ್ತ ಸಹಾಯಕ ಮೋಗಣ್ಣ ಅವರ ಬಳಿ ಇದ್ದ ಫೈಲ್ಗಳು, 15 ಸಾವಿರ ಹಣ ಹಾಗೂ ಅವರ ಖಾಸಗಿ ದಾಖಲೆಗಳು ಕಳ್ಳತನವಾಗಿವೆ. ದಾಖಲೆ ಹಾಗೂ ಹಣ ಕಳುವಾದ ಹಿನ್ನೆಲೆ ಮೊಗಣ್ಣ ಚಿಕ್ಕಮಗಳೂರು ನಗರದ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಿಸಿದ್ದಾರೆ.

ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ನಗರದ ಪ್ರವಾಸಿ ಮಂದಿರದಲ್ಲೇ ಒಂದು ಕೊಠಡಿಯನ್ನು ಕಚೇರಿ ಮಾಡಿಕೊಂಡಿದ್ದಾರೆ. ಪ್ರವಾಸಿ ಮಂದಿರದಲ್ಲಿ ಸಿಸಿ ಕ್ಯಾಮೆರಾಗಳು ಇಲ್ಲದ ಕಾರಣ ಕದ್ದವರು ಯಾರೆಂದು ಕೂಡ ಸ್ಪಷ್ಟವಿಲ್ಲದಂತಾಗಿದೆ.