• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಲಕ್ನೋಗೆ 2 ರನ್ ರೋಚಕ ಜಯ, ಕೆಕೆಆರ್ ವೀರೊಚಿತ ಸೋಲು

ಪ್ರತಿಧ್ವನಿ by ಪ್ರತಿಧ್ವನಿ
May 18, 2022
in ಕ್ರೀಡೆ
0
ಕಾಕ್-ರಾಹುಲ್ ಜೊತೆಯಾಟದಲ್ಲಿ ಡಬಲ್ ದಾಖಲೆ!
Share on WhatsAppShare on FacebookShare on Telegram

ತೀವ್ರ ಜಿದ್ದಾಜಿನಿಂದ ಕೂಡಿದ ಪಂದ್ಯದಲ್ಲಿ ಬ್ಯಾಟ್ಸ್ ಮನ್ ಗಳು ರನ್ ಹೊಳೆ ಹರಿಸಿದರೂ ಲಕ್ನೋ ಸೂಪರ್ ಗೈಂಟ್ಸ್ ಕೇವಲ 2 ರನ್ ನಿಂದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ.

ADVERTISEMENT

ಅಹಮದಾಬಾದ್ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಗೈಂಟ್ಸ್ ಒಡ್ಡಿದ 211 ರನ್ ಗಳ ಗುರಿಯನ್ನು ಕೆಕೆಆರ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 208 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಕೆಕೆಆರ್ ಪ್ಲೇಆಫ್ ರೇಸ್ ನಿಂದ ಹೊರಬಿದ್ದಿತು.

ಕೆಕೆಆರ್ ಕೊನೆಯ ಓವರ್ ನಲ್ಲಿ 21 ರನ್ ಗಳಿಸಬೇಕಿತ್ತು. ಸ್ಟೋನಿಸಿಸ್ ಎಸೆದ ಮೊದಲ ಮೂರು ಎಸೆತಗಳಲ್ಲಿ ರಿಂಕು ಸಿಂಗ್ 1 ಬೌಂಡರಿ ಹಾಗೂ 2 ಸತತ ಸಿಕ್ಸರ್ ಸಿಡಿಸಿದ್ದೂ ಅಲ್ಲದೇ ನಂತರ 2 ರನ್ ಗಳಿಸಿದರು. ಇದರಿಂದ ಕೆಕೆಆರ್ ಗೆ ಗೆಲ್ಲಲು ಕೊನೆಯ 2 ಎಸೆತದಲ್ಲಿ 3 ರನ್ ಬೇಕಿತ್ತು. ಈ ಸಂದರ್ಭದಲ್ಲಿ ಕೊನೆಯ 2 ಎಸೆತಗಳಲ್ಲಿ 2 ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಯಿತು.

ರಿಂಕು ಸಿಂಗ್ 15 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್ ಸೇರಿದ 40 ರನ್ ಬಾರಿಸಿ ಪಂದ್ಯಕ್ಕೆ ರೋಚಕ ತಿರುವು ನೀಡಿದರು. ಆದರೆ ಕೊನೆಯ ಹಂತದಲ್ಲಿ ಔಟಾಗಿ ತಂಡ ಸೋಲಿನ ಆಘಾತಕ್ಕೆ ಒಳಗಾಯಿತು.

ಸುನೀಲ್ ನಾರಾಯಣ್ 7 ಎಸೆತಗಳಲ್ಲಿ 3 ಸಿಕ್ಸರ್ ಸಹಾಯದಿಂದ ಅಜೇಯ 21 ರನ್ ಬಾರಿಸಿದ್ದೂ ಅಲ್ಲದೇ ರಿಂಕು ಸಿಂಗ್ ಜೊತೆ 14 ಎಸೆತದಲ್ಲಿ 58 ರನ್ ಜೊತೆಯಾಟ ನಿಭಾಯಿಸಿದರು.

ಇದಕ್ಕೂ ಮುನ್ನ ನಾಯಕ ಶ್ರೇಯಸ್ ಅಯ್ಯರ್ 29 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 50 ರನ್ ಬಾರಿಸಿ ಔಟಾದರೆ, ನಿತಿನ್ ರಾಣಾ 42, ಸ್ಯಾಮ್ ಬಿಲ್ಲಿಂಗ್ಸ್ 36 ರನ್ ಗಳಿಸಿದರು.

ಮೊಹಸಿನ್ ಖಾನ್ ಮತ್ತು ಮಾರ್ಕೂಸ್ ಸ್ಟೊನಿಸ್ ತಲಾ 3 ವಿಕೆಟ್ ಪಡೆದು ಕೆಕೆಆರ್ ಹೋರಾಟಕ್ಕೆ ಬ್ರೇಕ್ ಹಾಕಿದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಲಕ್ನೋ ತಂಡ ಶತಕ ಸಿಡಿಸಿದ ಕ್ವಿಂಟನ್ ಡಿ ಕಾಕ್ ಮತ್ತು ಅರ್ಧಶತಕ ಸಿಡಿಸಿದ ನಾಯಕ ಕೆಎಲ್ ರಾಹುಲ್ ಅಜೇಯ ಜೊತೆಯಾಟದಿಂದ ಬೃಹತ್ ಮೊತ್ತ ಕಲೆ ಹಾಕಿತು.

ಕ್ವಿಂಟನ್ ಡಿಕಾಕ್ 59 ಎಸೆತದಲ್ಲಿ 6 ಬೌಂಡರಿ ಮತ್ತು 7 ಸಿಕ್ಸರ್ ಸೇರಿದಂತೆ ಶತಕ ಪೂರೈಸಿದರು. ಅಲ್ಲದೇ 70 ಎಸೆತದಲ್ಲಿ 10 ಬೌಂಡರಿ ಮತ್ತು 10 ಸಿಕ್ಸರ್ ಸೇರಿದ 140 ರನ್ ಸಿಡಿಸಿ ಔಟಾಗದೇ ಉಳಿದರೆ, ಮತ್ತೊಂದು ತುದಿಯಲ್ಲಿದ್ದ ನಾಯಕ ಕೆಎಲ್ ರಾಹುಲ್ 51 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 68 ರನ್ ಬಾರಿಸಿ ಅಜೇಯರಾಗಿ ಉಳಿದರು.

ಕ್ವಿಂಟನ್ ಡಿ ಕಾಕ್ ಗೆ ಇದು 2ನೇ ಐಪಿಎಲ್ ಶತಕವಾಗಿದೆ. ಇದಕ್ಕೂ ಮುನ್ನ 2016ರಲ್ಲಿ ಆರ್ ಸಿಬಿ ವಿರುದ್ಧ ಶತಕ ಗಳಿಸಿದ್ದು ಅದನ್ನು ಮೀರಿಸುವಂತೆ ಇಂದು ವೃತ್ತಿಜೀವನದ ಗರಿಷ್ಠ ಮೊತ್ತ ದಾಖಲಿಸಿದರು.

Tags: IPLKKRkl rahulpratidvani
Previous Post

ಕಾಕ್-ರಾಹುಲ್ ಜೊತೆಯಾಟದಲ್ಲಿ ಡಬಲ್ ದಾಖಲೆ!

Next Post

ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಶಿರಹಟ್ಟಿ ಜಾತ್ರೆ

Related Posts

Top Story

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

by ಪ್ರತಿಧ್ವನಿ
July 3, 2025
0

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....

Read moreDetails
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025
Next Post
ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಶಿರಹಟ್ಟಿ ಜಾತ್ರೆ

ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಶಿರಹಟ್ಟಿ ಜಾತ್ರೆ

Please login to join discussion

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada