• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಶ್ಚಿಮ ಬಂಗಾಳ: ಶಸ್ತ್ರಾಸ್ತ್ರ ಕಾಯ್ದೆಯಡಿ ಬಿಜೆಪಿ ನಾಯಕನ ಬಂಧನ

Shivakumar A by Shivakumar A
August 15, 2021
in ದೇಶ
0
ಪಶ್ಚಿಮ ಬಂಗಾಳ: ಶಸ್ತ್ರಾಸ್ತ್ರ ಕಾಯ್ದೆಯಡಿ ಬಿಜೆಪಿ ನಾಯಕನ ಬಂಧನ
Share on WhatsAppShare on FacebookShare on Telegram

ಕೊಲ್ಕತ್ತಾದ ಬಿಜೆಪಿ ನಾಯಕರೊಬ್ಬರನ್ನು ಪೊಲೀಸರು ಬಲವಂತವಾಗಿ ಅವರ ಮನೆಯಿಂದ ಬಂಧಿಸಿದ್ದಾರೆ. ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಕಳ್ಳತನನಕ್ಕೆ ಸಂಬಂಧಪಟ್ಟ ಹಲವು ಪ್ರಕರಣಗಳನ್ನು ಅವರ ವಿರುದ್ದ ದಾಖಲಿಸಲಾಗಿದೆ.

ADVERTISEMENT

ಮಾಧ್ಯಮಗಳ ಕ್ಯಾಮೆರಾ ಮುಂದೆಯೇ ಈ ಘಟನೆ ನಡೆದಿದ್ದು. ಪೊಲೀಸರು ಬಿಜೆಪಿ ನಾಯಕ ಸಜಲ್ ಘೋಷ್ ಅವರ ಮನೆಯ ಬಾಗಿಲನ್ನು ಒಡೆದು ಒಳ ನುಗ್ಗಿರುವುದು ದಾಖಲಾಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲವಾದರೂ ನನ್ನ ಮೇಲೆ ಆರೋಪ ಹೊರಿಸಲಾಗಿದೆ. ಈ ರಾಜ್ಯದಲ್ಲಿ ಹುಟ್ಟಿರುವುದಕ್ಕೆ ನನಗೆ ನಾಚಿಕೆಯಾಗುತ್ತಿದೆ, ಎಂದು ಅವರು ಈ ಸಮಯದಲ್ಲಿ ಹೇಳಿದ್ದಾರೆ.

ಮುಚ್ಚಿಪುರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಘೋಷ್ ಅವರ ಮನೆಗೆ ಬಂದು, ಅವರ ಮೇಲೆ ಜಾಮೀನು ರಹಿತ ಪ್ರಕರಣ ದಾಖಲಾಗಿರುವುದರ ಕುರಿತು ಮಾಹಿತಿ ನೀಡಿದ್ದಾರೆ. ಪೊಲೀಸರು ಬಂಧನಕ್ಕೆ ಯತ್ನಿಸುವಾಗ ಮನೆಯ ಬಾಗಿಲು ಮುಚ್ಚಿದ್ದಾರೆ. ನಂತರ ಕಿಟಕಿಯ ಬಳಿ ಕುಳಿತು ಮಾಧ್ಯಮಗಳೊಂದಿಗೆ ಮಾತನಾಡಿದ ಘೋಷ್, ಮನೆಯ ಬಾಗಿಲು ಒಡೆದು ನನ್ನನ್ನು ಬಂಧಿಸಿ ಎಂದು ಹೇಳಿದ್ದಾರೆ.

ಹೆಚ್ಚಿನ ಸಿಬ್ಬಂದಿ ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ, ಪೊಲೀಸರು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದ್ದಾರೆ. ನಂತರ ಘೋಷ್ ಅವರ ಬಂಧನವಾಗಿದೆ. ಸಜಲ್ ಘೋಷ್ ಹಾಗೂ ಅವರ ತಂದೆ ಪ್ರದೀಪ್ ಘೋಷ್ ಅವರು ಕೊಲ್ಕತ್ತಾದ ಪ್ರಮುಖ ಬಿಜೆಪಿ ನಾಯಕರು. ಸಂತೋಷ್ ಮಿತ್ರಾ ಚೌಕದಲ್ಲಿ ನಡೆಯುವ ಪ್ರಸಿದ್ದ ದುರ್ಗಾ ಪೂಜೆಯ ಆಯೋಜಕರು. ಅವರ ಒಂದು ಕರೆಗೆ ನೂರಾರು ಕಾರ್ಯಕರ್ತರು ಜಮಾಯಿಸುತ್ತಾರೆ. ಪ್ರದೀಪ್ ಈ ಹಿಂದೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಗುರುವಾರದಂದು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ತಮ್ಮ ಮೇಲೆ ಇಬ್ಬರು ಬಿಜೆಪಿ ಕಾರ್ಯಕರ್ತರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ದೂರು ನೀಡಿದ್ದರು. ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯವು ಅವರಿಗೆ ಆಗಸ್ಟ್ 16ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.

ಆ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಿಡುಗಡೆಗೊಳಿಸಲು ಸಜಲ್ ಘೋಷ್ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ, ಟಿಎಂಸಿ ಕಾರ್ಯಕರ್ತರೊಂದಿಗೆ ತೀವ್ರ ವಾಗ್ವಾದ ನಡೆದಿತ್ತು. ಇದಾದ ಬಳಿಕ ಶುಕ್ರವಾರದಂದು, ಟಿಎಂಸಿ ಕಾರ್ಯಕರ್ತರೊಬ್ಬರು ಸಜಲ್ ವಿರುದ್ದ ಜೀವ ಬೆದರಿಕೆಯ ಪ್ರಕರಣ ದಾಖಲಿಸಿದ್ದರು.

ಐಪಿಸಿ ಸೆಕ್ಷನ್ 324 (ಸ್ವಇಚ್ಚೆಯಿಂದ ಮಾರಕಾಯುಧ ಬಳಸಿ ಹಲ್ಲೆ) 341, 506 (ಬೆದರಿಕೆ), 380 (ಕಳ್ಳತನ) ಮತ್ತು ಅಕ್ರಮ ಶಸ್ತ್ತಾಸ್ತ್ರ ಕಾಯ್ದೆಯ ಕಲಂ 25(1)(a) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆ ಬಳಿಕ ಸಜಲ್ ಘೋಷ್ ಅವರ ಬಂಧನವಾಗಿದೆ.

ಸಜಲ್ ಘೋಷ್ ಅವರ ಪತ್ನಿ ತಾನಿಯಾ ಘೋಷ್ ಅವರು, ಸ್ಥಳೀಯ ಪೊಲೀಸ್ ಅಧೀಕಾರಿಗಳ ವಿರುದ್ದವೇ ಪ್ರಕರಣ ದಾಖಲಿಸಿದ್ದಾರೆ. ಬಲವಂತವಾಗಿ ಮನೆಯ ಬಾಗಿಲು ಮುರಿದು ಒಳಗೆ ಪ್ರವೇಶಿಸಿದ್ದು ಹಾಗೂ ಯಾವುದೇ ಮಹಿಳಾ ಅಧಿಕಾರಿಯಿಲ್ಲದೇ ಮನೆಯೊಳ್ಗೆ ಪ್ರವೇಶಿದ್ದರ ಕುರಿತು ತನಿಖೆ ನಡೆಯಬೇಕೆಂದು ಆಗ್ರಹಿಸಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರು ಹೇಳಿದ್ದಾರೆ.

“ಇದು ದುರದೃಷ್ಟಕರ ಘಟನೆ. ತ್ರಿಪುರದ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡಿ, ಇಲ್ಲಿ ಬಿಜೆಪಿ ಕಾರ್ಯಕರ್ತರ ಮನೆಯ ಬಾಗಿಲು ಒಡೆಯುತ್ತಿದ್ದಾರೆ. ದೆಹಲಿಯಲ್ಲಿ ಪ್ರಜಾತಂತ್ರ ಆಂದೋಲನ ನಡೆಸುತ್ತಾರೆ. ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲ. ಬಿಜೆಪಿಯ ಎಲ್ಲರ ಹಿಂದೆ ಮುಗಿಬೀಳುತ್ತಿದ್ದಾರೆ,” ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್ ಅವರು, ಸಜಲ್ ಅವರು ವಿನಾಕಾರಣ ವಿಷಯವನ್ನು ಬೆಟ್ಟದಷ್ಟು ದೊಡ್ಡದು ಮಾಡಿದ್ದಾರೆ. ಅವರು ಪೊಲೀಸರೊಂದಿಗೆ ಸಹಕರಿಸಿ ಅವರ ಮನೆಯಿಂದ ಹೊರಬರಬೇಕಿತ್ತು. ಪೊಲೀಸರು ಏಕೆ ಅವರ ಬಾಗಿಲು ಒಡೆಯುತ್ತಿದ್ದರು?, ಎಂದು ಪ್ರಶ್ನಿಸಿದ್ದಾರೆ.

Tags: BJPಬಿಜೆಪಿ
Previous Post

ಸ್ವಾತಂತ್ರ್ಯ ದಿನಾಚಾರಣೆ: ಲಂಡನ್ ಬ್ರಿಡ್ಜ್ ಮೇಲೆ ‘Resign Modi’ ಬ್ಯಾನರ್ ಹಾರಾಟ

Next Post

ರಾಜಕಾರಣದಲ್ಲಿ ಲಿಂಗ ತಾರತಮ್ಯ: ನಾಯಕತ್ವಕ್ಕೆ ಲಿಂಗವೇ ಮಾನದಂಡ!

Related Posts

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!
ಇದೀಗ

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

by ಪ್ರತಿಧ್ವನಿ
February 2, 2026
0

ಬೆಂಗಳೂರು : 2026 ರ ಜಾಗತಿಕ ಜಿಡಿಪಿ ಕೊಡುಗೆ ನೀಡುವಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ ಎಂದು ಜಾಗತಿಕ ಅಂಕಿಅಂಶಗಳ ವರದಿಯೊಂದು ಪ್ರಕಟವಾಗಿದೆ, ಇದೇ ವಿಚಾರಕ್ಕೆ ಟೆಸ್ಲಾ ಸಿಇಒ...

Read moreDetails
Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Next Post
ರಾಜಕಾರಣದಲ್ಲಿ ಲಿಂಗ ತಾರತಮ್ಯ: ನಾಯಕತ್ವಕ್ಕೆ ಲಿಂಗವೇ ಮಾನದಂಡ!

ರಾಜಕಾರಣದಲ್ಲಿ ಲಿಂಗ ತಾರತಮ್ಯ: ನಾಯಕತ್ವಕ್ಕೆ ಲಿಂಗವೇ ಮಾನದಂಡ!

Please login to join discussion

Recent News

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada