ಮಹಿಳಾ ಸಬಲೀಕರಣದ ಉದ್ದೇಶದಿಂದ ಕರ್ನಾಟಕ ಕಾಂಗ್ರೆಸ್ ವತಿಯಿಂದ ಜನವರಿ 16ರಂದು ನಗರದ ಅರಮನೆ ಮೈದಾನದಲ್ಲಿ ನಾ ನಾಯಕಿ ಮಹಿಳಾ ಸಮಾವೇಶ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧೀ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆಶಿ ಗ್ರಾಮ ಪಂಚಾಯ್ತಿ, ಸಹಕಾರ ಸಂಘಗಳಲ್ಲಿ ಸ್ಪರ್ದಿಸಿದ್ದ ಮಹಿಳೆಯರು ಕಾರ್ಯಕ್ರಮದಲ್ಲಿ ಹೆಚ್ಚಾಗಿ ಭಾಗವಹಿಸಲಿದ್ದಾರೆ. ಪ್ರತಿ ಬೂತ್ ಮಟ್ಟದಿಂದ 3-10 ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕರೆ ನೀಡಿದ್ದಾರೆ.
ಹೆಣ್ಣು ಸಮಾಜದ ಶಕ್ತಿಯಾಗಿದ್ದು ಅವರ ಸಮಾಜದ ಸಬಲೀಕರಣಕ್ಕಾಗಿ ನಾವು ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದೇವೆ ಈ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದ್ದೇವೆ ಈಗಾಗಲೇ ಕಾರ್ಯಕ್ರಮದ ಕುರಿತು ಅನೇಕ ಸಲಹೆಗಲು ಬಂದಿದ್ದು ಸಮಿತಿ ಅದರ ಪರಿಶೀಲನೆ ನಡೆಸುತ್ತಿದೆ. ಮಹಿಳೆಯರಿಗೆ ಪಕ್ಷ ನೀಡುವ ಭರವಸೆಗಳನ್ನ ಸಮಾವೇಶದಲ್ಲಿ ಘೋಷಿಸಲಾಗುವುದು ಎಂದು ಹೇಳಿದ್ದಾರೆ.







