• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಗ್ನಿ ದುರಂತಗಳ ಬಗ್ಗೆ ಅಗ್ನಿಶಾಮಕ ದಳ ಮುಂಜಾಗ್ರತಾ ಕ್ರಮ ವಹಿಸಬೇಕು: ಸಚಿವ ಕೃಷ್ಣ ಬೈರೇಗೌಡ

Any Mind by Any Mind
October 30, 2023
in ಕರ್ನಾಟಕ
0
ಅಗ್ನಿ ದುರಂತಗಳ ಬಗ್ಗೆ ಅಗ್ನಿಶಾಮಕ ದಳ ಮುಂಜಾಗ್ರತಾ ಕ್ರಮ ವಹಿಸಬೇಕು: ಸಚಿವ ಕೃಷ್ಣ ಬೈರೇಗೌಡ
Share on WhatsAppShare on FacebookShare on Telegram

ADVERTISEMENT

ನಗರದಲ್ಲಿ ಹೆಚ್ಚುತ್ತಿರುವ ಅಗ್ನಿ ದುರಂತಗಳಿಂದ ಪ್ರಾಣಾಪಾಯಗಳು ಹೆಚ್ಚುತ್ತಿದೆ. ಜನಸಾಮಾನ್ಯರಲ್ಲೂ ಆತಂಕ ಮನೆಮಾಡಿದೆ. ಹೀಗಾಗಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಹಿಸಬೇಕು, ಅಗ್ನಿ ಶಾಮಕದಳವನ್ನೂ ಉನ್ನತೀಕರಣಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಅಗ್ನಿ ಶಾಮಕದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್ ಅವರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ 20 ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲೇ ಮೂರು ಕಡೆಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸಿವೆ. ಅಗ್ನಿ ದುರಂತಗಳಿಂದ ಜನರೂ ಭಯಭೀತರಾಗಿದ್ದಾರೆ. ಹೀಗಾಗಿ ನಗರ ಭಾಗಗಳೂ ಸೇರಿದಂತೆ ರಾಜ್ಯಾದ್ಯಂತ ಅಗ್ನಿ ದುರಂತಗಳು ಸಂಭವಿಸಿದಂತೆ ಅಗ್ನಿಶಾಮಕ ದಳ ತಡೆಯುವಂತಾಗಬೇಕು” ಎಂದು ಸಲಹೆ ನೀಡಿದರು.

“ಅತ್ತಿಬೆಲೆ ಪಠಾಕಿ ಗೋದಾಮಿನ ದುರಂತದಲ್ಲಿ ತಮಿಳುನಾಡು ಮೂಲದ ರಾಜೇಶ್, ದಿನೇಶ್, ಸಂತೋಷ್ ಕುಮಾರ್, ನಿತೀಶ್, ವೇದಪ್ಪನ್, ಆದಿಕೇಶವನ್, ವಿಜಯರಾಘವನ್, ಆಕಾಶ್ ರಾಜ್, ಗಿರಿ, ಇಂಬರ್ತಿ, ಮುನಿವೇಲ್, ಪ್ರಕಾಶರಾಜ್, ಆಂಥೋನಿ ಪೌಲಾರಾಜ್ ಸೇರಿ 13 ಕಾರ್ಮಿಕರು ಮೃತಪಟ್ಟಿದ್ದರು.

ಅಕ್ಟೋಬರ್ 19 ರಂದು ಕೋರಮಂಗಲದ ಮಡ್‌ಪೈಪ್ ಅನ್ನೋ ರೆಸ್ಟೋಕೆಫೆ ಅಗ್ನಿ ದುರಂತಕ್ಕೆ ಈಡಾಗಿತ್ತು. ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದರೆ, ಹಲವರು ಗಾಯಾಳುಗಳಾಗಿದ್ದರು. ಇದರ ಬೆನ್ನಿಗೆ ಕಳೆದ ಶನಿವಾರ ಹಜ್ ಭವನವೂ ಬೆಂಕಿಗೆ ಆಹುತಿಯಾಗಿದ್ದು ಕನಿಷ್ಟ 3 ಕೋಟಿ ನಷ್ಟವಾಗಿದೆ. ಎಂದು ಆತಂಕ ಹೊರಹಾಕಿದ ಸಚಿವರು, ಇಂತಹ ದುರಂತಗಳಿಗೆ ಕಾರಣವೇನು? ಇದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳೇನು? ಎಂಬ ಕುರಿತು ಅಗ್ನಿಶಾಮಕ ದಳ ಚಿಂತನೆ ನಡೆಸಬೇಕಿದೆ” ಎಂದರು.

ಅಲ್ಲದೆ, ಅಗ್ನಿಶಾಮಕ ದಳದ ಉನ್ನತೀಕರಣಗಳ ಬಗ್ಗೆಯೂ ಗಮನವಹಿಸಬೇಕಿದೆ. ಇದರ ಜೊತೆಗೆ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗಲೇ ಅಗ್ನಿದುರಂತ ತಡೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆಯೂ ಪರಿಶೀಲಿಸಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಉನ್ನತೀಕರಣ ಹಾಗೂ ಹೊಸ ಅಗ್ನಿಶಾಮಕ ದಳಗಳನ್ನು ಸ್ಥಾಪಿಸುವ ಕುರಿತ ಕ್ರಿಯಾ ಯೋಜನೆ ಮಂಡಿಸಿದ ಅಗ್ನಿಶಾಮಕ ದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್, “ಉಡುಪಿ ಜಿಲ್ಲೆಯ ಮಣಿಪಾಲ್, ದಾವಣಗೆರೆಯ- ನ್ಯಾಮತಿ, ವಿಜಯಪುರ ಜಿಲ್ಲೆಯ ನಿಡಗುಂದಿ-ಬಬಲೇಶ್ವರ್, ರಾಯಚೂರಿನ ಮಸ್ಕಿ, ಬೆಳಗಾವಿಯ ಮುದಲಗಿ, ಬಳ್ಳಾರಿಯ ಕಂಪ್ಲಿ ಹಾಗೂ ಕಲಬುರಗಿ ಷಹಾಬಾದ್ ಭಾಗದಲ್ಲಿ ನೂತನ ಅಗ್ನಿಶಾಮಕ ದಳ ಸ್ಥಾಪಿಸುವ ಸಂಬಂಧ ಯೋಜನೆ ಮಂಡಿಸಿದರು.

ಅಲ್ಲದೆ, ಬೆಂಗಳೂರು ಸೇರಿದಂತೆ ನಗರ ಭಾಗದಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳ ತಡೆಗೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬಹುದು? ಎಂಬ ಕುರಿತು ಶೀಘ್ರದಲ್ಲೇ ಇಲಾಖೆಗೆ ವರದಿ ನೀಡುವುದಾಗಿಯೂ ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಸೇರಿದಂತೆ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸರ್ಕಾರಿ ನೌಕರರನ್ನು 90 ದಿನಗಳಿಗಿಂತ ಹೆಚ್ಚು ಅಮಾನತುಗೊಳಿಸುವಂತಿಲ್ಲ : ಸುಪ್ರೀಂ ಕೋರ್ಟ್ ತೀರ್ಪು

Next Post

ಚುನಾವಣಾ ಬಾಂಡ್ ನಿಧಿಯ ಮೂಲವನ್ನು ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇಲ್ಲ: ಕೇಂದ್ರ

Related Posts

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
0

ದೆಹಲಿಯಲ್ಲಿ (Delhi) ತಂಗಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ (Dk Shivakumar) ಹೈಕಮಾಂಡ್‌ ಇಂದು ಕಾಂಗ್ರೆಸ್ ಹೈಕಮ್ಯಾಂಡ್ (Congress highcommand) ನಾಯಕರ...

Read moreDetails
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

July 10, 2025

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
Next Post
ಚುನಾವಣಾ ಬಾಂಡ್ ನಿಧಿಯ ಮೂಲವನ್ನು ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇಲ್ಲ: ಕೇಂದ್ರ

ಚುನಾವಣಾ ಬಾಂಡ್ ನಿಧಿಯ ಮೂಲವನ್ನು ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇಲ್ಲ: ಕೇಂದ್ರ

Please login to join discussion

Recent News

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada