• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

B.Y ವಿಜಯೇಂದ್ರ ಬಗ್ಗೆ ಕೆ.ಎಸ್‌ ಈಶ್ವರಪ್ಪ ಭವಿಷ್ಯ.. ತವರಿಗೆ ಮರಳುವ ವಿಶ್ವಾಸ..

ಕೃಷ್ಣ ಮಣಿ by ಕೃಷ್ಣ ಮಣಿ
September 13, 2024
in ಕರ್ನಾಟಕ, ರಾಜಕೀಯ
0
B.Y ವಿಜಯೇಂದ್ರ ಬಗ್ಗೆ ಕೆ.ಎಸ್‌ ಈಶ್ವರಪ್ಪ ಭವಿಷ್ಯ.. ತವರಿಗೆ ಮರಳುವ ವಿಶ್ವಾಸ..
Share on WhatsAppShare on FacebookShare on Telegram

ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧೆ ಮಾಡಿದ ಬಳಿಕ ಬಿಜೆಪಿ ಪಕ್ಷದಿಂದ ಹೊರಬಿದ್ದಿರುವ ಕೆ.ಎಸ್‌ ಈಶ್ವರಪ್ಪ, ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಯಡಿಯೂರಪ್ಪ ಮೋಡಿ ಮಾಡಿ ಮಗನನ್ನು ರಾಜ್ಯಾಧ್ಯಕ್ಷ ಮಾಡಿದ್ದಾರೆ. ಈ ರಾಜ್ಯಧ್ಯಕ್ಷ ಸ್ಥಾನ ಬಹಳ ದಿನ ಉಳಿಯಲ್ಲ ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಭವಿಷ್ಯ ಹೇಳಿದ್ದಾರೆ.

ADVERTISEMENT

ಯಡಿಯೂರಪ್ಪ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿರುವ ಈಶ್ವರಪ್ಪ, ನಾನು ಒಂದಲ್ಲ ಒಂದು ಬಾರಿ ತವರು ಮನೆಗೆ ಬಂದೇ ಬರ್ತೇನೆ. ಬಿಜೆಪಿ ಪಕ್ಷಕ್ಕೆ ಮರಳುತ್ತೇನೆ. ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಅಂದ್ರೆ ಯಡಿಯೂರಪ್ಪ ಅನ್ನೋ ಸ್ಥಿತಿ ಇದೆ. ಈ ಸ್ಥಿತಿಗೆ ಕೊನೆ ಹಾಡಬೇಕೆಂಬುದೇ ನನ್ನ ಉದ್ದೇಶ. ಆರು ತಿಂಗಳ ಕಾಲ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇತ್ತು. ಇಂತಹ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿರಲಿಲ್ಲ. ಕೊನೆಗೆ ಯಡಿಯೂರಪ್ಪ ಮೋಡಿ ಮಾಡಿ ತಮ್ಮ ಪುತ್ರನಿಗೆ ರಾಜ್ಯಧ್ಯಕ್ಷ ಸ್ಥಾನ ತಂದುಕೊಂಡರು ಎಂದು ಟೀಕಿಸಿದ್ದಾರೆ.

ಕುಟುಂಬ ರಾಜಕಾರಣ ಬೇಡ ಅನ್ನೋದು ಪ್ರಧಾನಿ ನರೇಂದ್ರ ಮೋದಿ ಅಪೇಕ್ಷೆ ಆಗಿದೆ. ಆದರೆ ಮೋದಿ ಅಪೇಕ್ಷೆಗೆ ವಿರುದ್ಧವಾಗಿ ಕರ್ನಾಟಕ ಬಿಜೆಪಿಯಲ್ಲಿ ಒಂದು ಕುಟುಂಬದ ಹಿಡಿತವಿದೆ. ಯಡಿಯೂರಪ್ಪ ಮತ್ತು ಅವರ ಪುತ್ರರು ಒಳ ಒಪ್ಪಂದ ರಾಜಕಾರಣ ಮಾಡ್ತಿದಾರೆ. ಇದನ್ನು ಖುದ್ದು ಡಿಕೆ ಶಿವಕುಮಾರ್‌ ಹೇಳಿದ್ದಾರೆ. ವಿಜಯೇಂದ್ರ ಶಾಸಕರಾಗಿರೋದು ಕಾಂಗ್ರೆಸ್ ಪಕ್ಷದ ಭಿಕ್ಷೆ ಅಂತ ಅಂದಿದ್ದಾರೆ. ಒಳ ಒಪ್ಪಂದ ಮಾಡಿಕೊಳ್ಳುವ ಮೂಲಕ ಯಡಿಯೂರಪ್ಪ ಬಿಜೆಪಿಗೆ ದ್ರೋಹ ಮಾಡಿದ್ದಾರೆ. ಯಡಿಯೂರಪ್ಪಗೆ ಬೆಂಬಲ ನೀಡುವ ಮೂಲಕ ಡಿಕೆಶಿ ಕಾಂಗ್ರೆಸ್ ಕಾರ್ಯಕರ್ತರಿಗೆ ದ್ರೋಹ ಬಗೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಡಿಕೆ ಶಿವಕುಮಾರ್‌ ಆರೋಪದ ಬಗ್ಗೆ ವಿಜಯೇಂದ್ರ ಸೌಜನ್ಯಕ್ಕಾದ್ರೂ ಪ್ರತಿಕ್ರಿಯೆ ನೀಡಿಲ್ಲ. ಡಿಕೆ ಶಿವಕುಮಾರ್‌ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿಲ್ಲ. ಹಿಂದುತ್ವವಾದಿಗಳು ಇವರಿಗೆ ಬೇಡ, ಇದರಿಂದ ನನಗೂ ತೊಂದ್ರೆ ಆಗಿದೆ. ದೇಶದ ನಾಯಕರಿಗೆ ಅರ್ಥ ಆಗಲಿ ಅಂತಾನೇ ನಾನು ಚುನಾವಣೆ ಸ್ಪರ್ಧೆ ಮಾಡಿದ್ದು ಎಂದು ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ. ರಾಯಣ್ಣ ಬ್ರಿಗೇಡ್‌ಗೆ ಮರು ಚಾಲನೆ ನೀಡುವ ಕುರಿತು ಬೆಂಬಲಿಗರ ಜೊತೆ ಚರ್ಚೆ ನಡೆಸಿದ ಬಳಿಕ ನಿರ್ಧಾರ ಮಾಡ್ತೇನೆ. ರಾಯಣ್ಣ ಬ್ರಿಗೇಡ್ ಮತ್ತೆ ಆರಂಭ ಮಾಡಿ ಅಂತಾ ಹೇಳ್ತಾ ಇದ್ದಾರೆ. ಇನ್ನು ಯಾವುದೇ ತೀರ್ಮಾನ ಆಗಿಲ್ಲ ಎಂದಿದ್ದಾರೆ.

Tags: BJPCongress PartyDK shikaumrkseshwarappaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಧರಣಿ ನಿರತ ವೈದ್ಯರನ್ನು ಅನರ್ಹರು ಎಂದು ಟೀಕಿಸಿದ ಟಿಎಂಸಿ ಲೋಕಸಭಾ ಸದಸ್ಯ

Next Post

ಇವತ್ತು ಪವಿತ್ರಾಗೌಡಗೆ ಹೈಕೋರ್ಟ್‌ನಲ್ಲಿ ಸಿಗುತ್ತಾ ಬೇಲ್‌..?

Related Posts

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್
ಕರ್ನಾಟಕ

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

by ಪ್ರತಿಧ್ವನಿ
April 30, 2026
0

ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಸುರಿದ ಭಾರೀ ಮಳೆಯ ಅಬ್ಬರದಿಂದ ಅನಾಹುತಗಳ ಸರಮಾಲೆ ಉಂಟಾಗಿದೆ. ಕೇವಲ ಕೆಲವೇ ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿದ್ದು, ಬೌರಿಂಗ್ ಆಸ್ಪತ್ರೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post

ಇವತ್ತು ಪವಿತ್ರಾಗೌಡಗೆ ಹೈಕೋರ್ಟ್‌ನಲ್ಲಿ ಸಿಗುತ್ತಾ ಬೇಲ್‌..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada