• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227.91 ಕೋಟಿ ರೂ.ಗಳಲ್ಲಿ ಭೂಮಿ ಖರೀದಿಗೆ 30 ಕೋಟಿ ರೂ, ಉತ್ಪಾದನಾ ಸ್ಥಾವರ ನಿರ್ಮಾಣಕ್ಕೆ 77.88 ಕೋಟಿ ರೂ ಅನುಮೋದನೆ..

ಪ್ರತಿಧ್ವನಿ by ಪ್ರತಿಧ್ವನಿ
April 30, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Share on WhatsAppShare on FacebookShare on Telegram

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ADVERTISEMENT
Bowring Hospital Wall Collapse: ದುರಂತದಲ್ಲಿ ನನ್ನ ಸ್ನೇಹಿತ ಪ್ರಾಣ ಕಳೆದುಕೊಂಡಿದ್ದಾನೆ ದುಖಃ ತಡೆಯೋಕಾಗ್ತಿಲ್ಲಾ!

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಈ ವಿಚಾರ ತಿಳಿಸಿದ್ದು, ಇದಕ್ಕಾಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಿತ ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಸಂಪುಟ ಸಭೆಯ ಬಳಿಕ ಮಾತನಾಡಿ, ‘ಪಾರಂಪರಿಕ ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ಒಟ್ಟು 94 ಬಗೆಬಗೆಯ ಗುಣಮಟ್ಟದ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಹೊಂದಿರುವ ಕೆ.ಎಸ್.ಡಿ.ಎಲ್.ನ ವಸ್ತುಗಳಿಗೆ ಉತ್ತರ ಕರ್ನಾಟಕ ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ ಮುಂತಾದ ರಾಜ್ಯಗಳಲ್ಲಿ ಅಪಾರ ಬೇಡಿಕೆ ಇದೆ. ಇದನ್ನು ಮನಗಂಡು ವಿಜಯಪುರದ ಇಟ್ಟಂಗಿಹಾಳ ಕೈಗಾರಿಕಾ ಪ್ರದೇಶದಲ್ಲಿ 50 ಎಕರೆ ಜಾಗದಲ್ಲಿ ಸಾಬೂನು ಕಾರ್ಖಾನೆಯ ನೂತನ ಉತ್ಪಾದನಾ ಘಟಕ ಆರಂಭಿಸಲಾಗುವುದು. ಇದರಿಂದ ಆ ಭಾಗದಲ್ಲಿ ಕೈಗಾರಿಕಾ ಬೆಳವಣಿಗೆ, ಉದ್ಯೋಗಸೃಷ್ಟಿ ಮತ್ತು ಮಾರುಕಟ್ಟೆ ವಿಸ್ತರಣೆ ಸಾಧ್ಯವಾಗಲಿದೆ’ ಎಂದಿದ್ದಾರೆ.

May be an image of dais and text

ಇದನ್ನೂ ಓದಿ : ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

227.91 ಕೋಟಿ ರೂ.ಗಳಲ್ಲಿ ಭೂಮಿ ಖರೀದಿಗೆ 30 ಕೋಟಿ ರೂ, ಉತ್ಪಾದನಾ ಸ್ಥಾವರ ನಿರ್ಮಾಣಕ್ಕೆ 77.88 ಕೋಟಿ ರೂ, ಮೂಲಸೌಕರ್ಯ ವ್ಯವಸ್ಥೆಗೆ 24 ಕೋಟಿ ರೂ, ಯಂತ್ರೋಪಕರಣಗಳ ಖರೀದಿಗೆ 70.80 ಕೋಟಿ ರೂ, ಟೆಂಡರ್ ಪ್ರೀಮಿಯಂಗೆ 8.63 ಕೋಟಿ ರೂ, ಸಾದಿಲ್ವಾರು ವೆಚ್ಚಕ್ಕೆ 8.63 ಕೋಟಿ ರೂ, ಮತ್ತು ಇತರೆ ವೆಚ್ಚಗಳಿಗೆಂದು 7.97 ಕೋಟಿ ರೂ ಮೀಸಲಿಡಲಾಗಿದೆ. ಇಲ್ಲಿ ಎಕರೆಗೆ 59.30 ಲಕ್ಷ ರೂ. ನಿಗದಿಪಡಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಕೆ.ಎಸ್.ಡಿ.ಎಲ್.ನ ಒಂದು ಉತ್ಪಾದನಾ ಘಟಕ ಸ್ಥಾಪಿಸಬೇಕೆಂಬ ಚಿಂತನೆ ಕಳೆದ ಒಂದು ವರ್ಷದಿಂದಲೂ ಇತ್ತು. 110 ವರ್ಷಗಳ ಇತಿಹಾಸವಿರುವ ಕಾರ್ಖಾನೆಯು ಇದೇ ಮೊದಲ ಬಾರಿಗೆ 2025-26ರಲ್ಲಿ 47,494 ಟನ್ ಉತ್ಪಾದನೆ ಮತ್ತು 2,016 ಕೋಟಿ ರೂ.ಗಳ ಸಾರ್ವಕಾಲಿಕ ದಾಖಲೆಯ ವಹಿವಾಟು ನಡೆಸಿದ್ದು, 507 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ನೂತನ ಘಟಕದ ಆರಂಭವು ಸಂಸ್ಥೆಗೆ ಮತ್ತಷ್ಟು ಬಲ ತರಲಿದೆ ಎಂದು ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಸ್ಥೆಯ ಉತ್ಕರ್ಷಕ್ಕೆ ಕಳೆದ ಮೂರು ವರ್ಷಗಳಿಂದ ಬ್ರ್ಯಾಂಡಿಂಗ್, ಪ್ರಚಾರ, ಮಾರುಕಟ್ಟೆ, ಗುಣಮಟ್ಟ ನಿರ್ವಹಣೆ, ರಫ್ತು ವಹಿವಾಟು, ಇ-ಕಾಮರ್ಸ್ ಸೇರಿದಂತೆ ಹಲವು ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪಾಟೀಲ ನುಡಿದಿದ್ದಾರೆ.

Tags: CM Siddaramaiahcongress karnatakaH K PatilKarnataka GovernmentKSDL UNItLarge Medium Scale Industry MinisterM B PatilMysore Sandal SoapsParlimentry Affairs MinisterPratidhvaniSandal Soap FactoryVijayapur
Previous Post

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

Related Posts

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್
ಕರ್ನಾಟಕ

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

by ಪ್ರತಿಧ್ವನಿ
April 30, 2026
0

ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಸುರಿದ ಭಾರೀ ಮಳೆಯ ಅಬ್ಬರದಿಂದ ಅನಾಹುತಗಳ ಸರಮಾಲೆ ಉಂಟಾಗಿದೆ. ಕೇವಲ ಕೆಲವೇ ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿದ್ದು, ಬೌರಿಂಗ್ ಆಸ್ಪತ್ರೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada