![](https://pratidhvani.com/wp-content/uploads/2024/06/images-1-2.jpeg)
ಲೋಕಸಭಾ ಚುನಾವಣೆ ಫಲಿತಾಂಶ ಹೊರಬಂದ ಕೆಲವೇ ದಿನಗಳಲ್ಲಿಯೇ ರಾಜ್ಯದ ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ರಾಜ್ಯದಲ್ಲಿ ರಸ್ತೆ ಸಾರಿಗೆ ನಿಗಮದ ಬಸ್ಗಳ ಪ್ರಯಾಣದರ ಹೆಚ್ಚಳ ಮಾಡುವ ಪ್ರಸ್ತಾಪವಾಗಿದೆ. ಹೆಚ್ಚುತ್ತಿರುವ ಡೀಸೆಲ್ ಬೆಲೆ, ಬಸ್ ಬಿಡಿಭಾಗಗಳು ಮತ್ತು ಇತರ ಘಟಕಗಳ ಬೆಲೆ ಏರಿಕೆಯಾಗಿರುವ ಜೊತೆಗೆ ನೌಕರರ ವೇತನವೂ ಏರಿಕೆಯಾಗಿದೆ. ಹೀಗಾಗಿಯೇ ರಸ್ತೆ ಸಾರಿಗೆ ನಿಗಮದ (ಆರ್ಟಿಸಿ) ಬಸ್ಗಳ ನಿರ್ವಹಣಾ ವೆಚ್ಚವು ಹೆಚ್ಚಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಮದ ಮೇಲೆ ಜಾರಿಗೆ ತಂದ ಶಕ್ತಿ ಯೋಜನೆಯ ಬಳಿಕ ರಾಜ್ಯ ಸರ್ಕಾರದಿಂದ ಯಾವುದೇ ವಿಶೇಷ ಅನುದಾನ ದೊರೆತಿಲ್ಲ. ಈ ಎಲ್ಲಾ ಕಾರಣಗಳಿಂದ ಇದೀಗ ಆರ್ಟಿಸಿಗಳು ಟಿಕೆಟ್ ದರ ಏರಿಕೆ ಮಾಡಲು ಮುಂದಾಗಿವೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯಿಂದಾಗಿ ರಾಜ್ಯ ಸಾರಿಗೆ ನಿಗಮದ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಇನ್ನು, 2020 ರಲ್ಲಿ ಕೊನೆಯ ಬಾರಿಗೆ ಟಿಕೆಟ್ ದರವನ್ನು ಹೆಚ್ಚಿಸಲಾಗಿತ್ತು. ಇದರ ಡೀಸೆಲ್ ಬೆಲೆ ದಿನ ದಿನಕ್ಕೇ ಏರಿಕೆಯಾಗುತ್ತಿದೆ. 2020 ರಲ್ಲಿ ಒಂದು ಲೀಟರ್ ಡೀಸೆಲ್ 61 ರೂಪಾಯಿತ್ತು. ಈಗ ಸುಮಾರು 90 ರೂಪಾಯಿಗೆ ಏರಿಕೆಯಾಗಿದೆ. ಶೇಕಡಾ 25-30 ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸರ್ಕಾರವು ಶೇ 15-20 ರ ಹೆಚ್ಚಳಕ್ಕೆ ಅನುಮತಿ ನೀಡಬಹುದು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಟಿಕೆಟ್ ದರ ಹೆಚ್ಚಳದ ಬಗ್ಗೆ ಖಚಿತಪಡಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ ಇನ್ನೂ ಪ್ರಸ್ತಾವನೆಯನ್ನು ಸ್ವೀಕರಿಸಿಲ್ಲ.ಮುಂದಿನ ಕೆಲವೇ ದಿನಗಳಲ್ಲಿ ಎಲ್ಲವೂ ಫೈನಲ್ ಆಗಲಿದೆ.