ನಾಗಮಂಗಲದಲ್ಲಿ ಕೆಎಸ್ಆರ್ಟಿಸಿ ಉದ್ಯೋಗಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈಗ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಸಚಿವ ಎನ್ ಚಲುವರಾಯಸ್ವಾಮಿ ವಜಾಗೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ
ಸರ್ಕಾರ ಬಂದು ಒಂದು ತಿಂಗಳಾಗುವಷ್ಟರಲ್ಲೇ ದ್ವೇಷದ ರಾಜಕಾರಣ ಹೆಚ್ಚಾಗಿದೆ. ಕೂಡಲೇ ಸಚಿವ ಚಲುವರಾಯಸ್ವಾಮಿಯನ್ನು ವಜಾ ಮಾಡಿ, ಪ್ರಕರಣದ ತನಿಖೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು

“ಮಂತ್ರಿಗಳನ್ನ ಹದ್ದುಬಸ್ತಿನಲ್ಲಿ ಕೆಲಸ ಮಾಡುವಂತೆ ಮಾಡಿ. ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ನನ್ನ ಅವಧಿಯಲ್ಲಿ ಕ್ಷೇತ್ರದಲ್ಲಿ ಒಂದು ವರ್ಗಾವಣೆ ಮಾಡಿಲ್ಲ. ರಾಜ್ಯದಲ್ಲಿ ಎಲ್ಲಾ ಕಡೆ ದ್ವೆಷದ ರಾಜಕಾರಣ ಶುರುವಾಗಿಬಿಟ್ಟಿದೆ.
ಕಾಂಗ್ರೆಸ್ ಶಾಸಕರ ಹಣೆ ಬರಹ ಏನಾಗಿದೆ ಅಂತಲೂ ಗೊತ್ತು.
ಹಣ ಕೊಡದಿದ್ದರೇ ಅವರ ಕೆಲಸವೂ ಆಗುತ್ತಿಲ್ಲ. ದುಡ್ಡು ಬೇಕಾದರೆ ಮಾಡಿಕೊಳ್ಳಲಿ, ಜೀವದ ಜೊತೆ ಚೆಲ್ಲಾಟವಾಡುವುದು ಬೇಡ, ಸದನದಲ್ಲಿ ಇದೇ ವಿಚಾರ ಇಟ್ಟು ಹೋರಾಟ ಮಾಡುತ್ತೇನೆ ಎಂದು
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮೈಸೂರಿನಲ್ಲಿ ಹೇಳಿಕೆ.






