ಪೆನ್ ಡ್ರೈವ್ (Pendrive case) ವಿಚಾರದಲ್ಲಿ ಕುಮಾರಣ್ಣ (Kumaraswamy) ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ ಎಂದು ಡಿಸಿಎಂ(Dcm) ಡಿ.ಕೆ. ಶಿವಕುಮಾರ್ (Dk shivakumar) ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
![](https://pratidhvani.com/wp-content/uploads/2024/03/Shivakumar_PTI10_26_2019_00014.jpeg)
ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಅವರನ್ನ ಪ್ರಶ್ನಿಸಿದಾಗ ಡಿಕೆಶಿ ಬಹಳ ವ್ಯಂಗ್ಯಭರಿತವಾಗಿಯೇ ಉತ್ತರ ನೀಡಿದರು.
![](https://pratidhvani.com/wp-content/uploads/2024/04/hdkumaraswamy1-1703161767.jpg)
ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ ಎಂದು ಮಾತಿನಲ್ಲೇ ತಿವಿದಿದ್ದಾರೆ.