• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಕೇಂದ್ರ ಸಚಿವರಾಗಿ ಕುಮಾರಸ್ವಾಮಿ, ವಿಧಾನಸಭೆಗೆ ನಿಖಿಲ್​ ಎಂಟ್ರಿ..?

ಕೃಷ್ಣ ಮಣಿ by ಕೃಷ್ಣ ಮಣಿ
June 9, 2023
in ಅಂಕಣ
0
ಕೇಂದ್ರ ಸಚಿವರಾಗಿ ಕುಮಾರಸ್ವಾಮಿ, ವಿಧಾನಸಭೆಗೆ ನಿಖಿಲ್​ ಎಂಟ್ರಿ..?
Share on WhatsAppShare on FacebookShare on Telegram

ರಾಜಕಾರಣಕ್ಕೆ ಪ್ರವೇಶ ಪಡೆಯಲು ಇನ್ನಿಲ್ಲದ ಕಸರತ್ತು ಮಾಡುತ್ತಿರುವ ನಿಖಿಲ್​ ಕುಮಾರಸ್ವಾಮಿ ಅಂತಿಮವಾಗಿ ಈ ಬಾರಿಯ ವಿಧಾನಸಭೆಗೆ ಆಯ್ಕೆ ಆಗಲು ಸಕಲ ತಯಾರಿಗಳು ನಡೆಯುತ್ತಿವೆ ಎನ್ನಲಾಗಿದೆ. ಈ ಮೊದಲು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಹೋಗುವ ಪ್ರಯತ್ನ ಮಾಡಿದ್ದ ನಿಖಿಲ್​ ಕುಮಾರಸ್ವಾಮಿ(nikhil kumaraswamy), ಸುಮಲತಾ ಅಂಬರೀಷ್ (sumalatha ambarish)​​ ವಿರುದ್ಧ ಸೋಲುಂಡು ವಾಪಸ್​ ಆಗಿದ್ದರು. ಎರಡನೇ ಬಾರಿಗೆ ರಾಮನಗರ(ramangara) ವಿಧಾನಸಭಾ ಕ್ಷೇತ್ರದಿಂದ ರಾಜ್ಯ ರಾಜಕಾರಣ ಪ್ರವೇಶ ಮಾಡುವ ಪ್ರಯತ್ನ ಮಾಡಿದ್ದರು. ಆಗ ಕಾಂಗ್ರೆಸ್​​ ಅಭ್ಯರ್ಥಿ ವಿರುದ್ಧ ಸೋಲುಂಡು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ನಿಖಿಲ್​ ಕುಮಾರಸ್ವಾಮಿ ವಿಧಾಸಭೆ ಪ್ರವೇಶ ಮಾಡಲು ತೆರೆಮರೆಯ ಕಸರತ್ತು ನಡೆಯುತ್ತಿವೆ ಎನ್ನುವುದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿರುವ ವಿಚಾರ.

ADVERTISEMENT

ಚನ್ನಪಟ್ಟಣ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ..!

ರಾಮನಗರ ಕ್ಷೇತ್ರದಲ್ಲಿ ಸೋಲುಂಡಿರುವ ನಿಖಿಲ್​ ಕುಮಾರಸ್ವಾಮಿ ಈ ಬಾರಿ ಪಕ್ಕದ ಚನ್ನಪಟ್ಟಣ ಕ್ಷೇತ್ರದಲ್ಲಿ ಅದೃಷ್ಟಪರೀಕ್ಷೆ ಮಾಡಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈಗಾಗಲೇ ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ, ಶೀಘ್ರದಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಸಭೆಗೆ ಆಯ್ಕೆ ಆಗಲಿದ್ದು, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಈಗಾಗಲೇ ಬಿಜೆಪಿ ಜೊತೆಗೆ ರಾಜಕೀಯ ಚರ್ಚೆಗಳು ಆರಂಭವಾಗಿದ್ದು, ಮಾತುಕತೆ ಅಂತಿಮ ಆಗುತ್ತಿದ್ದಂತೆ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ. ಆ ಬಳಿಕ ಉಪಚುನಾವಣೆ ಘೋಷಣೆ ಆಗಲಿದ್ದು, ಚನ್ನಪಟ್ಟಣ ಕ್ಷೇತ್ರದಿಂದ ನಿಖಿಲ್​ ಕುಮಾರಸ್ವಾಮಿ ಸುಲಭವಾಗಿ ಜಯಗಳಿಸಿ ವಿಧಾನಸಭೆ ಪ್ರವೇಶ ಮಾಡಲು ಬೇಕಾದ ಎಲ್ಲಾ ತಯಾರಿಗಳು ನಡೆದಿವೆ ಅನ್ನೋದು ಸದ್ಯಕ್ಕಿರುವ ಮಾಹಿತಿ.

Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com

ಸತತವಾಗಿ ಸೋತು ಸುಣ್ಣವಾಗಿರುವ ಸೈನಿಕನ ಕಥೆ ಏನು..?

ಕುಮಾರಸ್ವಾಮಿ ರಾಜ್ಯಸಭೆ ಪ್ರವೇಶ ಜೊತೆಗೆ ಚನ್ನಪಟ್ಟಣದಿಂದ ವಿಧಾನಸಭೆಗೆ ನಿಖಿಲ್​ ಕುಮಾರಸ್ವಾಮಿ ಆಯ್ಕೆ ಬಗ್ಗೆ ಚರ್ಚೆಗಳು ಒಂದು ಕಡೆಯಾದರೆ, ಕುಮಾರಸ್ವಾಮಿಯನ್ನು ರಾಜಕೀಯ ಎದುರಾಳಿಯಾಗಿ ಸ್ವೀಕರಿಸಿ ಕುಮಾರಸ್ವಾಮಿಯನ್ನು ಸೋಲಿಸಲು ಸಾಧ್ಯವಾಗದೆ ಕಂಗಾಲಾಗಿರುವ ವಿಧಾನಪರಿಷತ್​ ಸದಸ್ಯ ಸಿ.ಪಿ ಯೋಗೇಶ್ವರ್​ ರಾಜಕೀಯ ನಡೆ ಏನು..? ಅನ್ನೋ ಚರ್ಚೆ ಕೂಡ ಶುರುವಾಗಿದೆ. ಆದರೆ ಎಲ್ಲದ್ದಕ್ಕೂ ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್​ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿಯೇ ಕಣಕ್ಕಿಳಿಸಿ ಬೆಂಬಲಿಸುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಸಿಪಿ ಯೋಗೇಶ್ವರ್​ ಅವರನ್ನು ಕಳುಹಿಸುವ ಚಿಂತನೆ ನಡೆದಿದೆ ಅನ್ನೋದು ರಾಜಕೀಯ ಬೆಳವಣಿಗೆ.

ಕ್ಷೇತ್ರವನ್ನು ಸಲಭವಾಗಿ ಬಿಟ್ಟು ಕೊಡ್ತಾರಾ ಬಂಡೆ ಬ್ರದರ್ಸ್​..?

ರಾಮನಗರ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಸತತ ಎರಡು ಬಾರಿ ಗೆಲುವು ಸಾಧಿಸಿರುವ ಡಿ.ಕೆ ಶಿವಕುಮಾರ್ ಸಹೋದರ, ಡಿ.ಕೆ ಸುರೇಶ್​​ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್​ಗೆ ಸುಲಭ ತುತ್ತಾಗುತ್ತಾರಾ..? ಯೋಗೇಶ್ವರ್​ ಲೋಕಸಭೆಗೆ ಪ್ರವೇಶ ಪಡೆಯಲು ಅನುಕೂಲ ಮಾಡಿಕೊಡ್ತಾರಾ..? ಅನ್ನೋದು ಕೂಡ ಮಹತ್ವದ ಪ್ರಶ್ನೆಯಾಗಿದೆ. ಈ ಪ್ರಶ್ನೆಗೆ ಸ್ವತಃ ಡಿ.ಕೆ ಸುರೇಶ್​​ ಕುಣಿಗಲ್​ನಲ್ಲಿ ಉತ್ತರ ನೀಡಿದ್ದು, ನಾನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೋ..? ಇಲ್ಲವೋ ಅನ್ನೋದು ಇನ್ನೂ ಖಚಿತವಿಲ್ಲ. ನನಗೆ ರಾಜಕಾರಣ ಬೇಕೋ..? ಬೇಡ್ವೋ ಅನ್ನೋ ಗೊಂದಲದಲ್ಲಿ ನಾನಿದ್ದೇನೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ನಾನು ನಿಮ್ಮ ಅಭಿಪ್ರಾಯ ಪಡೆಯುತ್ತೇನೆ. ಆದರೆ ಕುಣಿಗಲ್​ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಬೇಕು ಎನ್ನುವುದು ನನ್ನ ಆಶಯ ಎನ್ನುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎನ್ನುವ ಸುಳಿವು ಬಿಟ್ಟುಕೊಟ್ಟಿದ್ದಾರೆ. ಅಂದರೆ ಕುಮಾರಸ್ವಾಮಿ ರಾಜ್ಯಸಭೆಗೆ ಸಿ.ಪಿ ಯೋಗೇಶ್ವರ್​ ಲೋಕಸಭೆಗೆ ನಿಖಿಲ್​ ಕುಮಾರಸ್ವಾಮಿ ವಿಧಾನಸಭೆಗೆ ಅನ್ನೋದು ಕನ್ಫರ್ಮ್..

ಕೃಷ್ಣಮಣಿ

Tags: Assembly electionsChennapatnamHD KumaraswamyNikhil KumaraswamyramanagaraSUMALATHA AMBARISH
Previous Post

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ : ಯಾರಿಗೆ ಯಾವ ಜಿಲ್ಲೆಯ ಸಾರಥ್ಯ..?

Next Post

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕ‌ಕಾಲಕ್ಕೆ ‘ಶಕ್ತಿ’ಗೆ ಚಾಲನೆ

Related Posts

ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ
ಅಂಕಣ

ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

by ಪ್ರತಿಧ್ವನಿ
April 15, 2026
0

ನಾ ದಿವಾಕರ ಹಂ ದೋನೋ ಚಿತ್ರದ “ ಅಭೀ ನಾ ಜಾವೋ ಚೋಡ್‌ ಕರ್‌ ”, ಯಾದೋಂಕಿ ಬಾರಾತ್‌ ಚಿತ್ರದ “ ಚುರಾಲಿಯಾ ಹೈ ತುಮ್‌ ನೆ...

Read moreDetails
ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

April 15, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್‌ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್‌ ಎಲ್ಲಿದ್ದಾರೆ ?

April 14, 2026
ಒಳದನಿಗೆ ಜೀವತುಂಬಿದ ʼ ಪ್ರತಿಧ್ವನಿ ʼ ಯೊಡನೆ- ನಾ ದಿವಾಕರ  ಲೇಖನ

ಒಳದನಿಗೆ ಜೀವತುಂಬಿದ ʼ ಪ್ರತಿಧ್ವನಿ ʼ ಯೊಡನೆ- ನಾ ದಿವಾಕರ  ಲೇಖನ

April 13, 2026
Next Post
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕ‌ಕಾಲಕ್ಕೆ ‘ಶಕ್ತಿ’ಗೆ ಚಾಲನೆ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕ‌ಕಾಲಕ್ಕೆ ‘ಶಕ್ತಿ'ಗೆ ಚಾಲನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada