ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನುಗುಣವಾಗಿ ವಿರೋಧ ಪಕ್ಷದ ಶಾಸಕರು, ಸಾರ್ವಜನಿಕರನ್ನು ವಿಶ್ವಾಸಕ್ಕೆ ಪಡೆದು ಜಿಬಿಎ ಪಾಲಿಕೆಗಳು ಹಾಗೂ ವಾರ್ಡ್ ಗಳ ಮರುವಿಂಗಡಣೆ ಮಾಡಲಾಗಿದೆ. ಆದರೆ ಈ ಬಗ್ಗೆ ಕುಮಾರಸ್ವಾಮಿ ಅವರಿಗೆ ಅರಿವಿಲ್ಲ. ಬೇಕಿದ್ದರೇ ಅವರ ಶಾಸಕರನ್ನೇ ಕೇಳಿ ತಿಳಿದುಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿಧೇಯಕ ಸಮರ್ಥಿಸಿಕೊಳ್ಳುವ ಭರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಬೆಂಗಳೂರು ಪಾಲಿಕೆಗಳ ವಾರ್ಡ್ ಮರುವಿಂಗಡಣೆ ಬಗ್ಗೆ ಯಾರೊಂದಿಗೂ ಚರ್ಚೆ ನಡೆಸಿಲ್ಲ ಎಂದು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿ, ಬೆಂಗಳೂರು ವಾರ್ಡ್ ಗಳ ಮರುವಿಂಗಡಣೆ ವೇಳೆ ಎಲ್ಲಾ ಪಕ್ಷದ ಶಾಸಕರನ್ನು ಒಳಗೊಂಡ ಸಮಿತಿ ರಚಿಸಲಾಗಿತ್ತು. ಅವರ ಪಕ್ಷದ ಶಾಸಕರು ಸಮಿತಿಯ ಭಾಗವಾಗಿದ್ದರು. ಜೆಡಿಎಸ್ ಹಾಗೂ ಬಿಜೆಪಿ ಶಾಸಕರ ಜತೆ ಚರ್ಚೆ ಮಾಡಿ, ಅವರೆಲ್ಲರ ಅಭಿಪ್ರಾಯ ಪಡೆದ ನಂತರವೇ ಅಂತಿಮ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು. ನನಗೂ ಸಣ್ಣ ಅನುಭವವಿದೆ. ಈ ಅನುಭವದ ಮೇಲೆ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ಶಾಸಕರು, ನಾಯಕರನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬುದು ನನಗೂ ಗೊತ್ತಿದೆ. ನಾನು ಅವರ ಶಾಸಕರ ಜತೆ ಎಷ್ಟು ಗಂಟೆಗಳ ಕಾಲ ಚರ್ಚೆ ಮಾಡಿದ್ದೇನೆ, ಎಷ್ಟು ಗಂಟೆಗಳ ಕಾಲ ಸಾರ್ವಜನಿಕರೊಂದಿಗೆ ಸಂವಾದ ಮಾಡಲಾಗಿದೆ ಎಂದು ಕುಮಾರಸ್ವಾಮಿ ತಿಳಿದುಕೊಂಡು ಮಾತನಾಡುವುದು ಸೂಕ್ತ” ಎಂದು ಛೇಡಿಸಿದ್ದಾರೆ.
ಇದನ್ನೂ ಓದಿ : ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್ ಬೆಂಬಲಿಸಿ : ತಮಿಳಿಗರಿಗೆ ಮೋಹನ್ ಕೊಂಡಜ್ಜಿ ಕರೆ
ಜಿಬಿಎ ಪಾಲಿಕೆಗಳ ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿ “ನಾವು ಚುನಾವಣೆಗೆ ಸಿದ್ಧವಿರುವುದಾಗಿ ತಿಳಿಸಿದ್ದೇವೆ. ಉಳಿದಂತೆ ಆ ಪ್ರಕ್ರಿಯೆ ನಡೆಸಲು ರಾಜ್ಯ ಚುನಾವಣಾ ಆಯೋಗವಿದೆ, ನ್ಯಾಯಾಲಯವಿದೆ” ಎಂದು ಹೇಳಿದ್ದಾರೆ.
ಯಾರೂ ಹಗೆ ಸಾಧಿಸುತ್ತಿಲ್ಲ. ಶಿಸ್ತು ಪಾಲನೆಗೆ ಆದ್ಯತೆ..
ಮುಸಲ್ಮಾನ ಸಮುದಾಯದ ಮುಖಂಡರು ಹೈಕಮಾಂಡ್ ನಾಯಕರಿಗೆ ಪತ್ರ ಬರೆದು ಸಮುದಾಯದ ಮೇಲೆ ಹಗೆ ಸಾಧಿಸಲಾಗುತ್ತಿದೆ ಎಂದು ಆರೋಪಕ್ಕೆ ಪ್ರತಿಕ್ರಿಯಿಸಿ, ಅದೆಲ್ಲ ಸುಳ್ಳು. ಯಾರೂ ಹಗೆ ಸಾಧಿಸುತ್ತಿಲ್ಲ. ಪಕ್ಷವು ಶಿಸ್ತು ಪಾಲನೆಗೆ ಆದ್ಯತೆ ನೀಡುತ್ತಿದೆ. ಎಲ್ಲರೂ ಶಿಸ್ತು ಅಳವಡಿಸಿಕೊಳ್ಳಬೇಕು ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ
ಈ ವಿಚಾರವಾಗಿ ಈಗಾಗಲೇ ಬಿಡಬ್ಲ್ಯೂಎಸ್ಎಸ್ ಬಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಅಂತರ್ಜಲ ಹೆಚ್ಚಳದ ಬಗ್ಗೆ ಮಾತನಾಡಿದ್ದು, ಏನೇ ಸಮಸ್ಯೆ ಬಂದರೂ ನಾವು ಅದನ್ನು ಸಮರ್ಥವಾಗಿ ನಿಭಾಯಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.






