• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚುನಾವಣೆ ಇದ್ದಾಗ ಕಣ್ಣೀರು ಹಾಕುವ ಕುಮಾರಸ್ವಾಮಿ ಅವರು, ಜನ ಕಣ್ಣೀರು ಹಾಕುವಾಗ ಎಲ್ಲಿಗೆ ಹೋಗಿದ್ದರು:ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
November 2, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಮಂಗಳೂರು:”ಕುಮಾರಸ್ವಾಮಿ ಅವರಿಗೆ ಕಣ್ಣೀರು ಬರುವುದು ಚುನಾವಣೆ ಇದ್ದಾಗ ಮಾತ್ರ. ಚನ್ನಪಟ್ಟಣದ ಜನರು ಕಣ್ಣೀರು ಹಾಕಿದಾಗ ಅವರು ಎಲ್ಲಿಗೆ ಹೋಗಿದ್ದರು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ADVERTISEMENT

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ನಾಯಕರಿಗೆ ಮನುಷ್ಯತ್ವವಿಲ್ಲ, ನಾವು ಭಾವುಕ ಜೀವಿ, ಹೀಗಾಗಿ ಕಣ್ಣೀರು ಹಾಕುತ್ತೇವೆ ಎಂಬ ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಕೇಳಿದಾಗ, “ಚನ್ನಪಟ್ಟಣ ಅಥವಾ ರಾಮನಗರದ ಜನ ಅವರನ್ನು ಶಾಸಕರನ್ನಾಗಿ ಆರಿಸಿದರೂ, ಜಿಲ್ಲೆಗೆ ರಾಷ್ಟ್ರಧ್ವಜ, ಕನ್ನಡಧ್ವಜ ಹಾರಿಸಲು ಏಕೆ ಬರಲಿಲ್ಲ. ಚನ್ನಪಟ್ಟಣದ ಜನರ ಅಭಿವೃದ್ಧಿಗೆ ಯಾವುದಾದರೂ ಒಂದು ಕೆಲಸ ಮಾಡಿದ್ದಾರಾ? ಕುಮಾರಸ್ವಾಮಿ ಅಲ್ಲಿನ ಯಾವ ಕೆರೆಗೆ ನೀರು ತುಂಬಿಸಿದ್ದಾರೆ? ಚನ್ನಪಟ್ಟಣ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಿದ್ದು ಯೋಗೇಶ್ವರ್ ಅವರು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗಲೇ ಆ ಕ್ಷೇತ್ರಕ್ಕೆ ಸಣ್ಣ ಕೆಲಸವನ್ನೂ ಮಾಡಿಲ್ಲ. ಕೇವಲ ಶಾಸಕರಾಗಿದ್ದಾಗ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದ ಕುಮಾರಸ್ವಾಮಿ ಅನುದಾನ ತಂದು ಕೆಲಸ ಮಾಡಬೇಕಿತ್ತಲ್ಲವೇ? ಏಕೆ ಮಾಡಲಿಲ್ಲ” ಎಂದು ಪ್ರಶ್ನಿಸಿದರು.

“ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಪ್ರತಿನಿಧಿಸಿದ್ದರು.ಈಗಿನ ಅಭ್ಯರ್ಥಿಗೂ ಚನ್ನಪಟ್ಟಣಕ್ಕೂ ಸಂಬಂಧವಿಲ್ಲ. ಅವರು ಮಂಡ್ಯ ಹಾಗೂ ರಾಮನಗರದಲ್ಲಿ ಸೋತಿದ್ದಾರೆ” ಎಂದು ತಿಳಿಸಿದರು.

“ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರಕ್ಕೆ ಏನು ಮಾಡಿದ್ದಾರೆ ಎಂದು ಹೇಳಬೇಕು. ಯೋಗೇಶ್ವರ್ ಪಕ್ಷಾಂತರಿ ಇರಬಹುದು, ಇಲ್ಲ ಎಂದು ಹೇಳುವುದಿಲ್ಲ. ಕಾಂಗ್ರೆಸ್ ನಲ್ಲಿ ಇದ್ದವರು ಸಮಾಜವಾದಿ ಪಕ್ಷ, ಬಿಜೆಪಿ ಪಕ್ಷಕ್ಕೆ ಹೋಗಿದ್ದರು. ಎನ್ಡಿಎ ಮೈತ್ರಿ ಸರಿಯಿಲ್ಲ, ಕುಮಾರಸ್ವಾಮಿ ಸರಿಯಿಲ್ಲ. ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರದಿಂದ ಒಳ್ಳೆಯದಾಗಲಿದೆ ಎಂದು ಈಗ ಮತ್ತೆ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ” ಎಂದು ತಿಳಿಸಿದರು.

“ಚನ್ನಪಟ್ಟಣ ತಾಲ್ಲೂಕಿನ ಜನ ವಿದ್ಯಾವಂತರು, ಪ್ರಜ್ಞಾವಂತರಿದ್ದಾರೆ. ನಮ್ಮ ಸರ್ಕಾರ ಅವರ ಸೇವೆ ಮಾಡಲು ಮನೆ ಬಾಗಿಲಿಗೆ ಹೋಗಿದೆ. 22 ಸಾವಿರ ಜನ ತಮ್ಮ ಕಷ್ಟವನ್ನು ನಮ್ಮ ಬಳಿ ಹೇಳಿಕೊಂಡಿದ್ದಾರೆ. ನೂರಾರು ಕೋಟಿ ಅಭಿವೃದ್ಧಿ ಕೆಲಸ ಪ್ರಾರಂಭವಾಗಿದೆ. ಬಡವರಿಗೆ ನಿವೇಶನ ನೀಡಲಾಗುತ್ತಿದೆ” ಎಂದರು.

“ನಮ್ಮ ಸರ್ಕಾರ ರಾಜ್ಯದ ಎಲ್ಲಾ ವರ್ಗದ ಜನರಿಗೆ ಐದು ಗ್ಯಾರಂಟಿ ಯೋಜನೆ ನೀಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ. ಜನತಾದಳದಲ್ಲಿ ಭವಿಷ್ಯವಿಲ್ಲ ಎಂದು ಅನೇಕ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ” ಎಂದರು.

ಚುನಾವಣೆಗಾಗಿ ಗ್ಯಾರಂಟಿ ಬಗ್ಗೆ ಟೀಕೆ:ಗ್ಯಾರಂಟಿ ಯೋಜನೆ ಬಗ್ಗೆ ಪ್ರಧಾನಿ ಅವರ ಟೀಕೆ ಬಗ್ಗೆ ಕೇಳುದಾಗ, “ಅವರು ಚುನಾವಣೆಗಾಗಿ ಏನು ಬೇಕಾದ್ರೂ ಹೇಳಲಿ.ಅವರ ಆರೋಪದಲ್ಲಿ ಯಾವುದೇ ಉರುಳಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ಜನರ ಹೊಟ್ಟೆ ತುಂಬಿಸಿ, ಬದುಕು ಕಟ್ಟುತ್ತಿವೆ. ಆಮೂಲಕ ದೇಶದ ಅಭಿವೃದ್ಧಿಗೆ ಕಾರಣವಾಗಿವೆ. ಆರ್ಥಿಕವಾಗಿ ಸಬಲವಾಗಿರುವವರು ದೊಡ್ಡ ಕಂಪನಿಯ ಉದ್ಯೋಗಸ್ಥ ಮಹಿಳೆಯರು ನಮಗೆ ಸಾರಿಗೆ ಭತ್ಯೆ ಸಿಗುತ್ತಿದೆ.ನಮಗೆ ಶಕ್ತಿ ಯೋಜನೆ ಅಗತ್ಯವಿಲ್ಲ ಎಂದು ಹೇಳಿದ್ದಾರೆ.ಈ ಬಗ್ಗೆ ಮಂತ್ರಿಗಳ ಜತೆ ಚರ್ಚೆ ಮಾಡುತ್ತೇವೆ ಎಂದು ನಾನು ಹೇಳಿದ್ದೆ. ನಮ್ಮ ಯಾವುದೇ ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ.ಈ ಯೋಜನೆಯನ್ನು ನಾವು ಮಂಗಳೂರಿನಲ್ಲೇ ಘೋಷಣೆ ಮಾಡಿದ್ದು, ಇದನ್ನು ನಿಲ್ಲಿಸುವುದಿಲ್ಲ. ಮುಂದಿನ ಅವಧಿಯ ಐದು ವರ್ಷವೂ ಈ ಯೋಜನೆ ಮುಂದುವರಿಯಲಿದೆ.

ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ವೃದ್ಧಾಪ್ಯ ವೇತನ, ವಿಧವಾ ಪಿಂಚಣಿ, ಉಳುವವನಿಗೆ ಭೂಮಿ, ಬಡವರಿಗೆ ನಿವೇಶನ, ಮನೆ ನೀಡುವ ಕಾರ್ಯಕ್ರಮ ಜಾರಿ ಮಾಡಿದ್ದು, ಇಂದಿಗೂ ಈ ಯೋಜನೆಗಳು ಜಾರಿಯಲ್ಲಿವೆ. ಯಾವುದನ್ನೂ ನಾವು ಹಿಂಪಡೆದಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ನಮ್ಮ ಕಾರ್ಯಕ್ರಮ ನಿಲ್ಲಿಸಲು ಆಗಿಲ್ಲ. ನಮ್ಮ ಕಾರ್ಯಕ್ರಮಗಳು ಬದುಕು ಕಟ್ಟುವ ಕಾರ್ಯಕ್ರಮ. ಬಿಜೆಪಿಯವರು ಕೇವಲ ಭಾವನೆ ಮೇಲೆ ರಾಜಕೀಯ ಮಾಡುತ್ತಾರೆ” ಎಂದು ತಿಳಿಸಿದರು.

ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಗ್ಗೆ ಕೇಳಿದಾಗ, “ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿದ್ದಾರೆ. ಮಧ್ಯಪ್ರದೇಶ, ಹರಿಯಾಣದಲ್ಲೂ ಘೋಷಣೆ ಮಾಡಿದ್ದಾರೆ. ಈಗ ಮಹಾರಾಷ್ಟ್ರದಲ್ಲಿ ಘೋಷಣೆ ಮಾಡುತ್ತಿದ್ದಾರೆ. ನಮ್ಮ ಯೋಜನೆ ನಕಲು ಮಾಡುತ್ತಿರುವುದಕ್ಕೆ ಅವರಿಗೆ ಮುಜುಗರವಾಗುತ್ತಿದೆ. ಹೀಗಾಗಿ ಟೀಕೆ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

ಕರ್ನಾಟಕದ ಆರ್ಥಿಕತೆ ಸಧೃಢವಾಗಿದೆ:ಗ್ಯಾರಂಟಿ ಯೋಜನೆ ನಿಭಾಯಿಸಲು ಆಗುತ್ತಿಲ್ಲ ಎಂಬ ಆರೋಪದ ಬಗ್ಗೆ ಕೇಳಿದಾಗ, “ನಿಭಾಯಿಸಲು ಆಗುತ್ತಿಲ್ಲ ಎಂದು ಹೇಳಿದವರು ಯಾರು? ದೇಶದ ಆರ್ಥಿಕತೆಗಿಂತ ನಮ್ಮ ರಾಜ್ಯದ ಆರ್ಥಿಕತೆ ಸಧೃಢವಾಗಿದೆ” ಎಂದರು.

ಅಧಿಕಾರಿಗಳ ತಪ್ಪು ಸರಿಮಾಡುತ್ತೇವೆ:ವಕ್ಫ್ ಆಸ್ತಿ ರಾಷ್ಟ್ರೀಕರಣ ಮಾಡಬೇಕು ಎಂಬ ಯತ್ನಾಳ್ ಅವರ ಪತ್ರದ ಬಗ್ಗೆ ಕೇಳಿದಾಗ, “ಮಾನಸಿಕ ಅಸ್ವಸ್ಥರ ಹೇಳಿಕೆ ಬಗ್ಗೆ ಮಾತನಾಡುವುದಿಲ್ಲ. ಈ ವಿಚಾರವಾಗಿ ರೈತರಿಗೆ ಮೊದಲು ನೋಟಿಸ್ ನೀಡಿದ್ದು ಬಿಜೆಪಿ ಸರ್ಕಾರ. ನಾವು ಯಾವುದೇ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅಧಿಕಾರಿಗಳು ಮಾಡಿರುವ ತಪ್ಪನ್ನು ನಾವು ಸರಿಪಡಿಸುತ್ತೇವೆ” ಎಂದು ತಿಳಿಸಿದರು.

Tags: "Kumaraswamy sheds tearsChannapatnamChannapatnam by-electionCongress PartyDCM D.K.Shivakumar Question.Nikhil Kumaraswamyshed tears during elections
Previous Post

ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ಸ್ಥಗಿತಗೊಳಿಸಲ್ಲ – ಡಿಸಿಎಂ ಡಿಕೆಶಿ ಸ್ಪಷ್ಟನೆ !

Next Post

ಮಿಸ್ಟರ್ ಕುಮಾರಸ್ವಾಮಿ ಚನ್ನಪಟ್ಟಣಕ್ಕೆ ನಿನ್ನ ಕೊಡುಗೆ ಏನು ?! ಹೆಚ್.ಡಿ.ಕೆ ವಿರುದ್ಧ ಡಿಕೆ ಏಕವಚನ ಪ್ರಯೋಗ !

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
Next Post
ಮಿಸ್ಟರ್ ಕುಮಾರಸ್ವಾಮಿ ಚನ್ನಪಟ್ಟಣಕ್ಕೆ ನಿನ್ನ ಕೊಡುಗೆ ಏನು ?! ಹೆಚ್.ಡಿ.ಕೆ ವಿರುದ್ಧ ಡಿಕೆ ಏಕವಚನ ಪ್ರಯೋಗ !

ಮಿಸ್ಟರ್ ಕುಮಾರಸ್ವಾಮಿ ಚನ್ನಪಟ್ಟಣಕ್ಕೆ ನಿನ್ನ ಕೊಡುಗೆ ಏನು ?! ಹೆಚ್.ಡಿ.ಕೆ ವಿರುದ್ಧ ಡಿಕೆ ಏಕವಚನ ಪ್ರಯೋಗ !

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada