• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್ ನಿಭಾಯಿಸಲು ಸರ್ಕಾರಕ್ಕೆ HD ಕುಮಾರಸ್ವಾಮಿ ಅವರಿಂದ ಹತ್ತು ಸಲಹೆ

Any Mind by Any Mind
May 8, 2021
in ಕರ್ನಾಟಕ
0
ಕೋವಿಡ್ ನಿಭಾಯಿಸಲು ಸರ್ಕಾರಕ್ಕೆ HD ಕುಮಾರಸ್ವಾಮಿ ಅವರಿಂದ ಹತ್ತು ಸಲಹೆ
Share on WhatsAppShare on FacebookShare on Telegram

ರಾಜ್ಯದಲ್ಲಿ ಕರೊನಾ ವೈಸ್‌ ಸೋಂಕು ಪ್ರಕರಣಗಳು ಮಿತಿಮೀರುತ್ತಿವೆ. ಅತಿಯಾದ ಪ್ರಕರಣಗಳ ಕಾರಣಕ್ಕೆ ಆಸ್ಪತ್ರೆ, ಆರೋಗ್ಯ ವ್ಯವಸ್ಥೆ, ಸರ್ಕಾರದ ಮೇಲೆ ತಡೆಯಲಾರದ ಒತ್ತಡ ಸೃಷ್ಟಿಯಾಗುತ್ತಿದೆ. ಮಹಾಮಾರಿ ವಿರುದ್ಧ ಎಷ್ಟು ಸೆಣಸಿದರೂ ಇನ್ನೂ ಸೆಣಸಬೇಕಾದದ್ದು ಈಗಿನ ಅನಿವಾರ್ಯತೆ. ಕೋವಿಡ್‌ ಅನ್ನು ಹೇಗೆ ತಡೆಯಬೇಕು, ಯಾವ ರೀತಿ ಇದರಿಂದ ಪಾರಾಗಬೇಕು ಎಂಬುದರ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಹೊಸ ಆಲೋಚನೆ, ಹೊಸ ಅವಕಾಶಗಳ ಬಗ್ಗೆ ಯೋಚಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ನನಗೆ ಪರಿಚಿತರಿರುವ  ತಜ್ಞರು, ವೈದ್ಯರು, ಸಲಹೆಗಾರರ ಗುಂಪಿನೊಂದಿಗೆ ಚರ್ಚೆ ಮಾಡಿ ಸರ್ಕಾರಕ್ಕೆ ಪ್ರಮುಖ ಎನಿಸುವ ಹತ್ತು ಸಲಹೆಗಳನ್ನು ಇಲ್ಲಿ ಪಟ್ಟಿ ಮಾಡಿದ್ದೇನೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂಬ ಆಶಾ ಭಾವ ನನ್ನದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ADVERTISEMENT

ಕುಮಾರಸ್ವಾಮಿ ನೀಡಿದ ಸಲಹೆಗಳು

1. ಫೀವರ್‌ ಕ್ಲಿನಿಕ್‌ಗಳು

ಪ್ರತಿ ವಾರ್ಡ್‌, ಗ್ರಾಮ ಪಂಚಾಯಿತಿ ಮಟ್ಟದಲ್ಲಿ 3-4 ಫೀವರ್‌ ಕ್ಲಿನಿಕ್‌ಗಳನ್ನು ಆರಂಭಿಸಬೇಕು. ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಇರುವವರಿಂದ ಆಸ್ಪತ್ರೆಗಳ ಮೇಲೆ ಬೀಳುತ್ತಿರುವ ಒತ್ತಡವನ್ನು ಈ ಮೂಲಕ ನಿಯಂತ್ರಿಸಬಹುದು. ಮತ್ತು, ಸೋಂಕಿತರನ್ನು ಪತ್ತೆಹಚ್ಚಲೂ ಈ ಫೀವರ್‌ ಕ್ಲಿನಿಕ್‌ಗಳು ನೆರವಾಗಬಲ್ಲವು.

2. ಸಿಬ್ಬಂದಿ ನಿಯೋಜನೆ

ವೈದ್ಯಕೀಯೇತರ ಬೋಧನಾ ಸಿಬ್ಬಂದಿ ಮತ್ತು ‘ರಾಷ್ಟ್ರೀಯ ಹೆಲ್ತ್‌ ಮಿಷನ್‌’ನ ಸಿಬ್ಬಂದಿಯನ್ನು ಕೋವಿಡ್‌ ನಿಯಂತ್ರಣಾ ವ್ಯವಸ್ಥೆಗೆ ನಿಯೋಜಿಸಬೇಕು. ಸಿಬ್ಬಂದಿ ಕೊರತೆ ಅನುಭವಿಸುತ್ತಿರುವ ಆಸ್ಪತ್ರೆಗಳು ಮತ್ತು ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಇವರ ಸೇವೆಯನ್ನು ಅಗತ್ಯವಾಗಿ ಬಳಸಿಕೊಳ್ಳಬೇಕು.

3. ಆಯುಷ್‌ ಕಾಲೇಜು, ಆಸ್ಪತ್ರೆಗಳ ಸೇವೆ ಬಳಕೆ 

ಸೋಂಕಿನ ಲಕ್ಷಣವಿಲ್ಲದ ಅಥವಾ ಕಡಿಮೆ ಲಕ್ಷಣಗಳಿರುವ ಕೋವಿಡ್‌ ರೋಗಿಗಳಿಗೆ ರಾಜ್ಯದ ಆಯುಷ್‌ ಕಾಲೇಜುಗಳು ಮತ್ತು ಆಸ್ಪತ್ರೆಗಳು ಚಿಕಿತ್ಸೆ ನೀಡಬೇಕು. ಅವುಗಳು ತಮ್ಮಲ್ಲಿ ಲಭ್ಯವಿರುವ ಸಿಬ್ಬಂದಿಯ ನೆರವಿನಿಂದಲೇ ಆರೋಗ್ಯ ಸೇವೆ ನೀಡಿದರೆ, ಇತರೆ ಆಸ್ಪತ್ರೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಬಹುದು. ಎಲ್ಲರಿಗೂ ಆರೋಗ್ಯ ಸೇವೆ ಸಿಗುವಂತೆ ಮಾಡಬಹುದು.   

4. ನಿಗಾ ಕೇಂದ್ರಗಳು

ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳು, ಹೋಟೆಲ್‌ಗಳನ್ನು ಸೋಂಕು ಲಕ್ಷಣ ರಹಿತರ ಆರೈಕೆ ಮತ್ತು ನಿಗಾ ಕೇಂದ್ರಗಳಾಗಿ ಪರಿವರ್ತಿಸಬೇಕು. ಲಕ್ಷಣಗಳು ಕಾಣಿಸಿಕೊಂಡು, ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರನ್ನು  ಮಾತ್ರ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ವರ್ಗಾಯಿಸಬೇಕು.

5. ಹಾಸಿಗೆ ನೀಡಬೇಕಾದ್ದನ್ನು ಯಾರು ನಿರ್ಧರಿಸಬೇಕು?

ವಾರ್ಡ್‌, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿರುವ ಕ್ಲಿನಿಕ್‌ಗಳು ಮತ್ತು ಆರೋಗ್ಯ ಸಿಬ್ಬಂದಿ ಮಾತ್ರ ಹಾಸಿಗೆಗಾಗಿ ವಾರ್‌ ರೂಂಗಳಿಗೆ ಶಿಫಾರಸು ಮಾಡಬೇಕು. ಹಾಸಿಗೆ ಒದಗಿಸುವ ಅಧಿಕಾರ, ಹೊಣೆಗಾರಿಕೆಯನ್ನು ಅವರಿಗೇ ನೀಡಬೇಕು. ಹಾಸಿಗೆ ನೀಡಬೇಕೇ ಬೇಡವೇ ಎಂಬುದನ್ನು ಡೇಟಾ ಎಂಟ್ರಿ ಆಪರೇಟರ್‌ಗಳು ನಿರ್ಧರಿಸಬಾರದು.

6. ಆಸ್ಪತ್ರೆಗೊಬ್ಬ ಅಧಿಕಾರಿ

ಎಲ್ಲಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವ್ಯವಸ್ಥಾಪನೆ ಮೇಲೆ ನಿಗಾ ವಹಿಸಲು ಐಎಎಸ್‌ ಮತ್ತು ಕೆಎಎಸ್‌ ಶ್ರೇಣಿಯ ಅಧಿಕಾರಿಗಳನ್ನು ನೇಮಿಸಬೇಕು. ಅವರು ರೋಗಿಗಗಳ ಹಾಸಿಗೆ, ಔಷಧ, ಆರೈಕೆ, ಆಹಾರ ಪೂರೈಕೆ ವ್ಯವಸ್ಥೆಯನ್ನು ನಿಭಾಯಿಸಬೇಕು. ಅದರ ಜೊತೆಗೇ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರೂ ಸೇರಿದಂತೆ ಆರೋಗ್ಯ ಸಿಬ್ಬಂದಿಯ ಅಗತ್ಯಗಳನ್ನು ಪೂರೈಸಬೇಕು.

7. ಆಸ್ಪತ್ರೆ ಅಧಿಕಾರಿಯ ಹೊಣೆಗಾರಿಕೆಗಳು

ನಿರ್ದಿಷ್ಟ ಆಸ್ಪತ್ರೆಗೆ ನಿಯೋಜಿಸಲಾದ ಅಧಿಕಾರಿಯು ಪ್ರತಿನಿತ್ಯ ತನ್ನ ಜವಾಬ್ದಾರಿಯ ಆಸ್ಪತ್ರೆಗೆ ಕಡ್ಡಾಯವಾಗಿ ಭೇಟಿ ನೀಡುವಂತೆ ತಾಕೀತು ಮಾಡಬೇಕು. ರೋಗಿಗಳು ಮತ್ತು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯ ಬೇಕು ಬೇಡಗಳ ಮೇಲೆ ಅಧಿಕಾರಿಗಳು ಗಮನಹರಿಸಬೇಕು. ಸಮಸ್ಯೆ ಬಗೆಹರಿಸುವ ಅಧಿಕಾರ, ಹೊಣೆಗಾರಿಕೆ, ಸಂಪನ್ಮೂಲವನ್ನು ಸರ್ಕಾರ ನೀಡಬೇಕು.

8. ಸ್ವಯಂ ಸೇವಕರು, ಯುವಕರಿಗೆ ಕರೆ

ಕೋವಿಡ್‌ ವಿರುದ್ಧ ಅವಿರತವಾಗಿ ಹೋರಾಡುತ್ತಿರುವ, ನಾಗರಿಕರ ಪ್ರಾಣ ರಕ್ಷಣೆಯ ಕಾರ್ಯದಲ್ಲಿ ಸೆಣಸುತ್ತಿರುವ ಅರೋಗ್ಯ ವ್ಯವಸ್ಥೆಯ ನೆರವಿಗೆ ಬರುವಂತೆ ಯುವಕರಿಗೆ, ಸ್ವಯಂ ಸೇವಕರಿಗೆ ಸರ್ಕಾರ ಕರೆ ನೀಡಬೇಕು. ಅವರ ಸೇವೆ ಪಡೆಯುವ ಜೊತೆಗೆ, ಕೋವಿಡ್‌ ವಿರುದ್ಧ ಹೋರಾಟಕ್ಕೆ ಉಪಯುಕ್ತ ಎನಿಸುವ ಅವರ ಚಿಂತನೆಗಳನ್ನೂ ಸರ್ಕಾರ ಪ್ರೋತ್ಸಾಹಿಸಬೇಕು.

9. ಲಸಿಕೆ ಮತ್ತು ಜಾಗೃತಿ

ಫೀವರ್‌ ಕ್ಲಿನಿಕ್‌ಗಳ ಹಂತದಲ್ಲಿಯೂ ಲಸಿಕೆ ಲಭ್ಯವಾಗಬೇಕು. ಮತ್ತು, ಲಸಿಕೆಯು ಕೋವಿಡ್‌ ಅನ್ನು ನಿಯಂತ್ರಿಸಬಲ್ಲದು ಎಂದು ಜಾಗೃತಿ ಮೂಡಿಸುವ ಕಾರ್ಯವೂ ಇಲ್ಲಿಂದಲೇ ಆರಂಭವಾಗಬೇಕು.

10. ಅರ್ಹರು ಕಾಯಂ ಆಗಬೇಕು

ಆರೋಗ್ಯ ಇಲಾಖೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಸಿಬ್ಬಂದಿಯಲ್ಲಿ ಅರ್ಹರನ್ನು ಸರ್ಕಾರ ಕೂಡಲೇ ಕಾಯಂಗೊಳಿಸಬೇಕು.

Previous Post

ಮೋದಿ ಸರ್ಕಾರ ತನ್ನ ಮೂಲಭೂತ ಜವಾಬ್ದಾರಿ & ಕರ್ತವ್ಯವನ್ನು ಮರೆತು ಜನತೆಯನ್ನು ವೈಫಲ್ಯಕ್ಕೆ ದೂಡಿದೆ: ಸೋನಿಯಾ ಗಾಂಧಿ

Next Post

ಆಳುವ ಯೋಗ್ಯತೆ ಇಲ್ಲದಿದ್ದರೆ ಹೊರಟುಬಿಡಿ ಪ್ಲೀಸ್…

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಆಳುವ ಯೋಗ್ಯತೆ ಇಲ್ಲದಿದ್ದರೆ ಹೊರಟುಬಿಡಿ ಪ್ಲೀಸ್…

ಆಳುವ ಯೋಗ್ಯತೆ ಇಲ್ಲದಿದ್ದರೆ ಹೊರಟುಬಿಡಿ ಪ್ಲೀಸ್...

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada