
ಬೆಂಗಳೂರು: ಕಟ್ಟಡ ಕಾರ್ಮಿಕರ ನಿಧೀಯನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿದ್ದಕ್ಕೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿರುವುದ ಟೀಕೆ ಮಾಡಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಪರಾಕಿ ನೀಡಿದ್ದಾರೆ.

ಟ್ವಿಟರ್ನಲ್ಲಿ ಅವರು ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದು, ಕಾರ್ಮಿಕರ ಕಲ್ಯಾಣ ನಿಧಿ ಬಳಕೆಯ ಬಗ್ಗೆ ವೃತಾ ಆರೋಪ ಮಾಡುತ್ತಿರುವ ಅಶೋಕ್ ಅವರೇ ನೀವು ಇನ್ನೂ ನಿದ್ದೆಯಿಂದ ಎದ್ದಂತೆ ಕಾಣುತ್ತಿಲ್ಲ! ಇನ್ನಾದರೂ ಸ್ವಲ್ಪ ನಿದ್ದೆಯಿಂದ ಎದ್ದು ಕೇಳಿಸಿಕೊಳ್ಳಿ ವಿವರವಾಗಿ ಕೇಳಿಸಿಕೊಳ್ಳಿ ಎಂದು ವ್ಯಂಗ್ಯವಾಡಿದ್ದಾರೆ.
ಕಳೆದ ಸಲ ನಿಮ್ಮದೇ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಮಾಡಿಹೋದ ಎಡವಟ್ಟುಗಳನ್ನು ನಾವು ಆಡಿಟ್ ಮಾಡಿಸಿದಾಗ ಬಯಲಾದ ಸಂಗತಿಗಳನ್ನೆ ಘನ ನ್ಯಾಯಪೀಠ ಪುನರುಚ್ಚರಿಸಿದೆ ಹೊರತು ಮತ್ತೇನಿಲ್ಲ! ಮಂಡಳಿಯ ನಿಧಿಯಲ್ಲಿ ಕಾರುಗಳನ್ನು ಖರೀದಿ ಮಾಡಿದ್ದು ನಮ್ಮ ಸರ್ಕಾರ ಅಲ್ಲ ಸ್ವಾಮಿ, ನಿಮ್ಮದೇ ಬಿಜೆಪಿ ಸರ್ಕಾರ ಎಂದು ಹೇಳಿದ್ದಾರೆ.
ಕೋವಿಡ್ ಸಮಯದಲ್ಲಿ ಇಂದಿರಾ ಕ್ಯಾಂಟೀನ್ ಗಳಿಗೆ ಮಂಡಳಿಯ ಹಣ ವೆಚ್ಚ ಮಾಡಿದ್ದು ಸಹ ನೀವೇ. ಯಾಕೆಂದರೆ ಆಗ ಅಧಿಕಾರದಲ್ಲಿದ್ದಿದ್ದು ನಿಮ್ಮದೇ ಬಿಜೆಪಿ ಸರ್ಕಾರ ಅಲ್ಲವೇ? ನರೇಗಾ ಯೋಜನೆಗೆ ಮಂಡಳಿಯ ನಿಧಿ ಬಳಕೆ ಮಾಡಿಕೊಳ್ಳಿ ಎಂದು ಅಧಿಸೂಚನೆ ಹೊರಡಿಸಿದ್ದು ಸಹ ತಮ್ಮದೇ ಕೇಂದ್ರ ಬಿಜೆಪಿ ಸರ್ಕಾರ ಎಂಬುದು ತಮಗೆ ತಿಳಿದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಕಾರ್ಮಿಕರ ಕಲ್ಯಾಣ ನಿಧಿ ಬಳಕೆಯ ಬಗ್ಗೆ ವೃತಾ ಆರೋಪ ಮಾಡುತ್ತಿರುವ ವಿರೋಧ ಪಕ್ಷದ ನಾಯಕರಾದ @RAshokaBJP ಅವರೇ ನೀವು ಇನ್ನೂ ನಿದ್ದೆಯಿಂದ ಎದ್ದಂತೆ ಕಾಣುತ್ತಿಲ್ಲ!
— Santosh Lad Official (@SantoshSLadINC) September 28, 2024
ಸ್ವಲ್ಪ ನಿದ್ದೆಯಿಂದ ಎದ್ದು ಕೇಳಿಸಿಕೊಳ್ಳಿ,
ಕಳೆದ ಸಲ ನಿಮ್ಮದೇ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಮಾಡಿಹೋದ ಎಡವಟ್ಟುಗಳನ್ನು ನಾವು ಆಡಿಟ್ ಮಾಡಿಸಿದಾಗ ಬಯಲಾದ… https://t.co/WT2CpQXizf
ಇನ್ನು ಕಳೆದ ಅವಧಿಯ ನಿಮ್ಮ ಸರ್ಕಾರದಲ್ಲಿ ಕಾರ್ಮಿಕರಲ್ಲದವರಿಗೆಲ್ಲ ಕಾರ್ಮಿಕ ಕಾರ್ಡ್ ಮಾಡಿಕೊಟ್ಟು ಕಾರ್ಮಿಕರ ಕಲ್ಯಾಣ ನಿಧಿಯನ್ನು ನುಂಗಿದ್ದು ಮರೆತು ಹೋದಿರಾ ಆರ್ ಅಶೋಕ್ ಅವರೇ?ಅಧಿಕಾರ ಕಳೆದುಕೊಂಡ ಹತಾಶೆ, ಆಟಕ್ಕುಂಟು ಲೆಕ್ಕಕ್ಕಿಲ್ಲದ ಪರಿಸ್ಥಿತಿ ನಿಮಗೆ ಹೀಗೆಲ್ಲ ಮಾತಾಡಿಸುತ್ತಿದೆ ಎಂಬುದು ನಮಗೂ ಅರ್ಥವಾಗುತ್ತದೆ ಎಂದು ತಿಳಿಸಿದ್ದಾರೆ.
ದಯವಿಟ್ಟು ನ್ಯಾಯ ಪೀಠ ಹೇಳಿರುವ ಅಂಶಗಳನ್ನೊಮ್ಮೆ ಓದಿಕೊಳ್ಳಿ. ಆಗ ನಿಮ್ಮದೇ ಬಿಜೆಪಿ ಸರ್ಕಾರ ಮಾಡಿಹೋದ ಕರ್ಮಗಳೆಲ್ಲ ನಿಮ್ಮ ಮುಖಕ್ಕೇ ರಾಚದಿದ್ದರೆ ಹೇಳಿ! ಎಂದು ವಿವರಿಸಿದ್ದಾರೆ.