ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ GRAAM (Government Reforms Assessment and Monitoring Authority) ಸಮೀಕ್ಷಾ ವರದಿ ಕುರಿತು ಬಿಜೆಪಿ ನಾಯಕ ಲಹರ್ ಸಿಂಗ್ ಸಿರೋಯಾ ಮಹತ್ವದ ಪ್ರಶ್ನೆಗಳನ್ನು ಎತ್ತಿದ್ದು, ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕರ್ನಾಟಕದ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಕುರ್ಚಿ ಕದನದ ನಡುವೆಯೇ ಈ ಪ್ರಶ್ನೆಗಳು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ.

2025ರ ಆಗಸ್ಟ್ನಲ್ಲಿ ಸಿದ್ದರಾಮಯ್ಯ ಸರ್ಕಾರದ ಇವ್ಯಾಲ್ಯುವೇಶನ್ & ಮಾನಿಟರಿಂಗ್ ಅಥಾರಿಟಿ (EMA) ನಡೆಸಿದ ಸಮೀಕ್ಷೆಯ ವಿಶ್ವಾಸಾರ್ಹತೆ ಕುರಿತು ಲಹರ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದಾರೆ. GRAAM ಅಧ್ಯಕ್ಷರಾದ ಡಾ. ಆರ್. ಬಾಲಸುಬ್ರಹ್ಮಣಿಯನ್ ಅವರ ಪಾತ್ರ, ಸಮೀಕ್ಷಾ ವರದಿ ಹಿಂಪಡೆಯುವ ನಿರ್ಧಾರ ಸೇರಿದಂತೆ ಹಲವು ಅಂಶಗಳನ್ನು ಅವರು ಪ್ರಶ್ನಿಸಿದ್ದಾರೆ. ಅಲ್ಲದೇ 6 ಮಹತ್ವದ ಪ್ರಶ್ನೆಗಳನ್ನು ಕೇಳಿದ್ದಾರೆ.

*ನಿಮ್ಮ ಸಮೀಕ್ಷೆಯ ವೆಬ್ಸೈಟ್ನಲ್ಲಿದ್ದ ವರದಿಯನ್ನು ‘ಮತ ಚೋರಿ’ ಆರೋಪಗಳ ಮೊದಲು ನಡೆಸಲಾಗಿತ್ತು ಎಂದು ಹೇಳಿ ತೆಗೆದುಹಾಕಿದ ಕಾರಣವೇನು?
*GRAAM ಅಧ್ಯಕ್ಷ ಡಾ. ಆರ್. ಬಾಲಸುಬ್ರಹ್ಮಣಿಯನ್ ಹಾರ್ವರ್ಡ್, ಕೊರ್ನೆಲ್ ಶಿಕ್ಷಣ ಹೊಂದಿರುವವರಾಗಿ ಸಮೀಕ್ಷೆ ನಡೆಸಲು ಯೋಗ್ಯರಲ್ಲರಾ?
*ಡಾ. ಬಾಲಸುಬ್ರಹ್ಮಣಿಯನ್ ಪ್ರಧಾನಮಂತ್ರಿ ಮೋದಿಯ ಕುರಿತು ಪುಸ್ತಕ ಬರೆದಿದ್ದರೆ, ಅವರ ವೃತ್ತಿಪರತೆ ಮೇಲೆ ಪ್ರಭಾವವಾಯಿತೆ? ಹಾಗಾದರೆ ನೆಹರು-ಗಾಂಧಿ ರಾಜವಂಶದ ಬಗ್ಗೆ ಪುಸ್ತಕಗಳನ್ನು ಬರೆದವರೆಲ್ಲರೂ ಭ್ರಷ್ಟ ವೃತ್ತಿಪರರೇ? ಅಥವಾ ಹೊಗಳುಭಟ್ಟರೇ..?

*ಡಾ. ಬಾಲಸುಬ್ರಹ್ಮಣಿಯನ್ ಪ್ರಧಾನಮಂತ್ರಿ ಮೋದಿಯ ಕುರಿತು ಪುಸ್ತಕ ಬರೆದಿದ್ದರೆ, ಅವರ ವೃತ್ತಿಪರತೆ ಮೇಲೆ ಪ್ರಭಾವವಾಯಿತೆ? ಹಾಗಾದರೆ ನೆಹರು-ಗಾಂಧಿ ರಾಜವಂಶದ ಬಗ್ಗೆ ಪುಸ್ತಕಗಳನ್ನು ಬರೆದವರೆಲ್ಲರೂ ಭ್ರಷ್ಟ ವೃತ್ತಿಪರರೇ? ಅಥವಾ ಹೊಗಳುಭಟ್ಟರೇ..?
*ಡಾ. ಬಾಲಸುಬ್ರಮಣಿಯನ್ (ಅವರು ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ದಶಕಗಳಿಂದ ಕೆಲಸ ಮಾಡಿದ್ದಾರೆ) ಅವರ ಸೈದ್ಧಾಂತಿಕ ಸಂಬಂಧದ ಬಗ್ಗೆ ಸಿದ್ದರಾಮಯ್ಯ ಅವರಿಗೆ ತಿಳಿದಿದ್ದರೆ, ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಮತ್ತು ಈಗ, ಲೋಕಸಭಾ ಚುನಾವಣೆಗೆ ಮೊದಲು ಮತ್ತು ನಂತರ ಅವರ ಎರಡನೇ ಅವಧಿಯಲ್ಲಿ ಸರ್ಕಾರದ ಅನೇಕ ಕಾರ್ಯಕ್ರಮಗಳನ್ನು ಅಧ್ಯಯನ ಮಾಡಲು ಮತ್ತು ಮುನ್ಸೂಚನೆ ನೀಡಲು ವಿವಿಧ ಸರ್ಕಾರಿ ಇಲಾಖೆಗಳು GRAAM ಗೆ ಗುತ್ತಿಗೆಗಳನ್ನು ಏಕೆ ನೀಡಿವೆ..?

*2013-2018 ರ ನಡುವೆ ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಡಾ. ಬಾಲಸುಬ್ರಮಣಿಯನ್ ಅವರ ನೇತೃತ್ವದಲ್ಲಿ GRAAM ನಡೆಸಿದ ಸಮೀಕ್ಷೆಗಳು ಮತ್ತು ಅಧ್ಯಯನಗಳ ಪಟ್ಟಿಯನ್ನು ತನಿಖಾ ತಾಣ ದಿ ಫೈಲ್ ಬಿಡುಗಡೆ ಮಾಡಿದೆ. ಆದರೆ ಈಗ ಈ ಯಾವುದೇ ಸಮೀಕ್ಷೆಗಳು ಮತ್ತು ಅಧ್ಯಯನಗಳನ್ನು ಕೇಂದ್ರ ಅಥವಾ ರಾಜ್ಯ ಚುನಾವಣಾ ಆಯೋಗವು ನಡೆಸುತ್ತಿಲ್ಲ ಯಾಕೆ?
*ಹಿಂದೆ ಕರ್ನಾಟಕ ಕಾಂಗ್ರೆಸ್ ಸರ್ಕಾರ GRAAM ವರದಿಗಳನ್ನು ಏಕೆ ಸ್ವೀಕರಿಸಿ, ಈಗ ಅದು ಸಮಸ್ಯಾತ್ಮಕವಾಗಿದೆ ಎನ್ನುತ್ತಿರುವಿದೇಕೆ? ಪ್ರಧಾನಿ ಮೋದಿ ಮೇಲಿನ ಕರ್ನಾಟಕ ಕಾಂಗ್ರೆಸ್ನ ದ್ವೇಷವೇ ಅವರನ್ನು ಮುನ್ನಡೆಸುತ್ತಿದೆಯೇ ಅಥವಾ ಡಿಕೆ ಶಿವಕುಮಾರ್ ಇಂದ ಸಿದ್ದರಾಮಯ್ಯ ಅವರ ಕುರ್ಚಿಯನ್ನು ಉಳಿಸಬೇಕಾದ ರಾಹುಲ್ಗಾಂಧಿಯವರ ಮೇಲೆ ಭಯವೇ..? ಎಂದು ಬಿಜೆಪಿ ನಾಯಕ ಲಹರ್ ಸಿಂಗ್ ಸಿರೋಯಾ ಪ್ರಶ್ನಿಸಿದ್ದಾರೆ.













