• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಲಖೀಂಪುರ ಖೇರಿ ಪ್ರಕರಣದ ಪ್ರಮುಖ ಸಾಕ್ಷಿಯ ಮೇಲೆ ಬಿಜೆಪಿ ಬೆಂಬಲಿಗರಿಂದ ಹಲ್ಲೆ; ಆರೋಪ

Any Mind by Any Mind
March 11, 2022
in ದೇಶ
0
ಲಖೀಂಪುರ ಖೇರಿ ಪ್ರಕರಣದ ಪ್ರಮುಖ ಸಾಕ್ಷಿಯ ಮೇಲೆ ಬಿಜೆಪಿ ಬೆಂಬಲಿಗರಿಂದ ಹಲ್ಲೆ; ಆರೋಪ
Share on WhatsAppShare on FacebookShare on Telegram

ರೈತ ಪ್ರತಿಭಟನೆಕಾರರನ್ನು ಕಾರು ಹತ್ತಿಸಿ ಕೊಲೆಗೈಯಲಾಗಿದೆ ಎಂದು ಆರೋಪಿಸಲಾಗಿರುವ ಲಖಿಂಪುರ ಖೇರಿ ಘಟನೆಯ ಪ್ರಮುಖ ಸಾಕ್ಷಿಯ ಮೇಲೆ ಬಿಜೆಪಿ ಬೆಂಬಲಿಗರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ADVERTISEMENT

ಲಖಿಂಪುರದ ಎಂಟೂ ಕ್ಷೇತ್ರಗಳನ್ನೂ ಗೆದ್ದು ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ ಬಹುಮತ ಪಡೆದ ವಿಜಯೋತ್ಸವ ಆಚರಣೆ ನಡೆಸುವ ವೇಳೆ ಬಿಜೆಪಿ ಬೆಂಬಳಿಗರು ಈ ದಾಳಿ ಸಂಘಟಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವರದಿಗಳ ಪ್ರಕಾರ, ಪ್ರಕರಣದ ಪ್ರಮುಖ ಸಾಕ್ಷಿ ದಿವ್ಜೋತ್ ಸಿಂಗ್ ಮೇಲೆ ವಿಜಯೋತ್ಸವ ಆಚರಿಸುತ್ತಿದ್ದ ಬಿಜೆಪಿ ಬೆಂಬಲಿಗರು ಗುರುವಾರ ರಾತ್ರಿ ದಾರುಣ ದಾಳಿ ನಡೆಸಿದ್ದಾರೆ.

Also Read : ಲಖೀಂಪುರದ ಸಂದೇಶ ಸ್ಪಷ್ಟ- ಪ್ರಜಾಸತ್ತೆ ಶಿಥಿಲವಾಗುತ್ತಿದೆ

ಈ ವಿಷಯವನ್ನು ವಕೀಲ ಪ್ರಶಾಂತ್ ಭೂಷಣ್ ಶುಕ್ರವಾರ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದಾರೆ. ಲಖಿಂಪುರ-ಖೇರಿ ಪ್ರಕರಣದ ಪ್ರಧಾನ ಆರೋಪಿ ಆಶಿಶ್ ಮಿಶ್ರಾ ಅವರಿಗೆ ನೀಡಲಾದ ಜಾಮೀನಿನ ವಿರುದ್ಧದ ಮನವಿಯ ವಿಚಾರಣೆಯನ್ನು ಸಿಜೆಐ ರಮಣ ಅವರು ಮಾರ್ಚ್ 15 ಕ್ಕೆ ಮುಂದೂಡುವುದಕ್ಕೂ ಮುನ್ನ ಭೂಷಣ್ ಈ ವಿಷಯವನ್ನು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ. ಅದಾಗ್ಯೂ, ಆಶಿಶ್ ಮಿಶ್ರಾ ಜಮೀನಿನ ವಿರುದ್ಧದ ಮನವಿಯ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ. 

ದಿವಜೋತ್ ಸಿಂಗ್ ಅವರಿಗೆ ಬಿಜೆಪಿ ಕಾರ್ಯಕರ್ತರು ಅಮಾನುಷವಾಗಿ ಥಳಿಸಿದ್ದಾರೆ ಎಂದು ಆರೋಪಿಸಿರುವ ಟ್ವೀಟ್ ಒಂದಕ್ಕೆ ಖೇರಿ ಪೊಲೀಸರು ಪ್ರತಿಕ್ರಿಯಿಸಿದ್ದು, ಈ ಘಟನೆಯ ಬಗ್ಗೆ ತಿನ್ಸುಕಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ.

ದಾಳಿಕೋರರ ವಿರುದ್ಧ ಐಪಿಸಿ ಸೆಕ್ಷನ್ 147 (ಗಲಭೆ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ದಿ.ಕ್ವಿಂಟ್ ಸುದ್ದಿ ವೆಬ್ ಪೋರ್ಟಲ್ ವರದಿ ಮಾಡಿದೆ.

ಅದಾಗ್ಯೂ, ಶುಕ್ರವಾರ ಬೆಳಗಿನ ಜಾವದವರೆಗೆ, ಪ್ರಕರಣಕ್ಕೆ ಸಂಬಂಧಿಸಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ದಿ. ಕ್ವಿಂಟ್ ವರದಿಯಲ್ಲಿ ಹೇಳಿದೆ. 

ಕಳೆದ ವರ್ಷದ ಅಕ್ಟೋಬರ್ 3 ರಂದು ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕಾರು ಹರಿಸಿ ಭೀಕರ ಮಾರಣಹೋಮ ನಡೆಸಲಾಗಿತ್ತು. ಕೇಂದ್ರ ಸಚಿವರ ಪುತ್ರನ ಬೆಂಗಾವಲು ಕಾರನ್ನು ಹರಿಸಲಾಗಿದ್ದು, ಆ ವೇಳೆ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಕಾರಿನಲ್ಲೇ ಇದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದರು.

Also Read : ಉತ್ತರಪ್ರದೇಶ ಫಲಿತಾಂಶ: ದಲಿತರು, ಮುಸ್ಲಿಮರು, ರೈತರು ಮತಗಳು ಎಲ್ಲಿ ಹೋದವು?

ಈ ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಜನರು ಕಾರಿನಡಿಗೆ ಸಿಲುಕಿ ಸಾವನ್ನಪ್ಪಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪ ಹೊರಿಸಲಾಗಿತ್ತು. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಈ ಘಟನೆ ರೈತ ಹೋರಾಟಗಾರರ ತೀವ್ರ ಆಕ್ರೋಶ ಹುಟ್ಟು ಹಾಕಿತ್ತು. ಈ ಘಟನೆಯು ಬಿಜೆಪಿಗೆ ನಕರಾತ್ಮಕ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಎಲ್ಲಾ ಅಂದಾಜನ್ನು ಚುನಾವಣಾ ಫಲಿತಾಂಶ ಬುಡಮೇಲುಗೊಳಿಸಿದ್ದು, ಲಖಿಂಪುರ ಖೇರಿಯ ಎಲ್ಲಾ ಎಂಟು ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಈ  ವಿಜಯೋತ್ಸವವನ್ನು ಆಚರಿಸುತ್ತಾ ಬಿಜೆಪಿ ಬೆಂಬಲಿಗರು ಪ್ರಕರಣದ ಪ್ರಮುಖ ಸಾಕ್ಷಿಯ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಪ್ರಮುಖ ಸಾಕ್ಷಿಬಿಜೆಪಿರೈತ ಪ್ರತಿಭಟನೆಲಖೀಂಪುರ ಖೇರಿಲಖೀಂಪುರ ಖೇರಿಲಖೀಂಪುರ ಖೇರಿ ಘಟನೆಲಖೀಂಪುರ ಹಿಂಸಾಚಾರಲಖೀಂಪುರ್ ಖೇರಿ ಹಿಂಸಾಚಾರಲಖೀಂಪುರ್‌ ಹಿಂಸಾಚಾರಲಖೀಂಪುರ್‌ಖೇರಿವಿಜಯೋತ್ಸವ ಆಚರಣೆಸಾಕ್ಷಿ ದಿವ್ಜೋತ್ ಸಿಂಗ್
Previous Post

ಪಂಚರಾಜ್ಯ ಚುನಾವಣೆ | ಗದ್ದುಗೆ ಹಿಡಿದ ಪ್ರಧಾನಿ ಮೋದಿಗೆ ಸವಾಲೊಡ್ಡಲಿದೆಯೇ ಕಚ್ಚಾ ತೈಲ ಬೆಲೆ?

Next Post

ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ಮೇಲೆ 6 ದಿನಗಳ ಕಾಲ ಅತ್ಯಾಚಾರವೆಸಗಿದ ಕಾಮುಕರು!

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ಮೇಲೆ 6 ದಿನಗಳ ಕಾಲ ಅತ್ಯಾಚಾರವೆಸಗಿದ ಕಾಮುಕರು!

ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ಮೇಲೆ 6 ದಿನಗಳ ಕಾಲ ಅತ್ಯಾಚಾರವೆಸಗಿದ ಕಾಮುಕರು!

Please login to join discussion

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada