• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, September 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

“ಲಖೀಂಪುರ ಖೇರಿ ಘಟನೆ ಆಕಸ್ಮಿಕವಲ್ಲ, ಯೋಜಿತ ಪಿತೂರಿ” – ನ್ಯಾಯಾಲಯಕ್ಕೆ SIT ವರದಿ

Any Mind by Any Mind
December 14, 2021
in ದೇಶ
0
“ಲಖೀಂಪುರ ಖೇರಿ ಘಟನೆ ಆಕಸ್ಮಿಕವಲ್ಲ, ಯೋಜಿತ ಪಿತೂರಿ” – ನ್ಯಾಯಾಲಯಕ್ಕೆ SIT ವರದಿ
Share on WhatsAppShare on FacebookShare on Telegram

ಲಖಿಂಪುರ ಖೇರಿ ಘಟನೆ ಯೋಜಿತ ಪಿತೂರಿ ಎಂದು ವಿಶೇಷ ತನಿಖಾ ತಂಡ (SIT) ವರದಿ ತಿಳಿಸಿದೆ. ಮೂರು ತಿಂಗಳ ಹಿಂದೆ ಲಖೀಂಪುರ ಖೇರಿ ಟಿಕುನಿಯಾ ಪ್ರದೇಶದಲ್ಲಿ ರೈತರು ಪ್ರತಿಭಟನೆ ಮಾಡುವ ವೇಳೆ ಕೇಂದ್ರ ಸಚಿವ ಅಜಯ್ ಮಿಶ್ರ ಅವರ ಪುತ್ರ ಆಶಿಶ್ ಮಿಶ್ರ ರೈತರ ಮೇಲೆ ಮಹೀಂದ್ರ ಎಸ್ಯುವಿ ಕಾರು ಹತ್ತಿಸಿ ರೈತರ ಸಾವಿಗೆ ಕಾರಣರಾಗಿದ್ದರು. ಈ ಪ್ರಕರಣದ ಸಂಭಂದ ತನಿಖೆ ನಡೆಸಿದ ಎಸ್ ಐ ಟಿ ಈಗ ವರದಿಯನ್ನು ಬಹಿರಂಗ ಪಡಿಸಿದ್ದು, “ಈ ಒಂದು ಘಟನೆ ಆಕಸ್ಮಿಕವಲ್ಲ, ಯೋಜಿತ ಪಿತೂರಿ”ಎಂದು ತಿಳಿಸಿದೆ.

ADVERTISEMENT

ಸೋಮವಾರ ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ, ಈ ಘಟನೆ ಆಕಸ್ಮಿಕವಾಗಿ ಸಂಭವಿಸಿದೆ ಎಂಬುದನ್ನು ಎಸ್ಐಟಿ ಸಂಪೂರ್ಣವಾಗಿ ನಿರಾಕರಿಸಿದ್ದು,ಕೊಲ್ಲುವ ಉದ್ದೇಶದಿಂದಲೇ ಉದ್ದೇಶಪೂರ್ವಕ ಕೃತ್ಯ ಎಸಗಲಾಗಿದೆ ಎಂದು ಹೇಳಿದೆ.

12 ಮಂದಿ ಅಪರಾಧಿಗಳ ವಿರುದ್ಧ ಹಲವು ಸೆಕ್ಷನ್ಗಳನ್ನು ಮಾರ್ಪಡಿಸುವಂತೆ ಕೋರ್ಟ್ ಗೆ SIT ಅರ್ಜಿ

ಆರೋಪಿಗಳ ವಿರುದ್ಧ ಸೆಕ್ಷನ್ಗಳಲ್ಲಿ 307 (ಕೊಲೆಗೆ ಯತ್ನ), 326 (ಅಪಾಯಕಾರಿ ಆಯುಧಗಳು ಗಂಭೀರವಾದ ಗಾಯವನ್ನು ಉಂಟುಮಾಡುವುದು) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಸೇರಿವೆ. ಇದರೊಂದಿಗೆ ಹೆಚ್ಚಿದ ಸೆಕ್ಷನ್ಗಳಡಿ ಆರೋಪಿಯನ್ನು ವಶಕ್ಕೆ ನೀಡುವಂತೆ ಕೋರಿ ತನಿಖಾ ತಂಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಲಖೀಂಪುರ ಖೇರಿಯ ಟಿಕುನಿಯಾ ಘಟನೆಯಲ್ಲಿ 4 ರೈತರು ಮತ್ತು ಒರ್ವ ಪತ್ರಕರ್ತನ ಹತ್ಯೆಗೆ ಕಾರಣವಾಗಿದ್ದ ಆಶಿಶ್ ಮಿಶ್ರಾ ,ಅಂಕಿತ್ ದಾಸ್ ಮತ್ತು ಸುಮಿತ್ ಜೈಸ್ವಾಲ್ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಲಖೀಂಪುರ ಖೇರಿಯ ಜೈಲಿಗೆ ಕಳುಹಿಸಿದೆ.

ಲಂಖೀಪುರದಲ್ಲಿ ನಡೆದ ಘಟನೆ ನಿರ್ಲಕ್ಷ್ಯದ ಚಾಲನೆಯಿಂದ ಸಂಭವಿಸಿದ ಅಪಘಾತವಲ್ಲ ಎಂದು ಎಸ್‌ಐಟಿ ಮುಖ್ಯ ತನಿಖಾಧಿಕಾರಿ ವಿದ್ಯಾರಾಮ್ ದಿವಾಕರ್ ಸ್ಪಷ್ಟಪಡಿಸಿದ್ದಾರೆ. ಪ್ರತಿಭಟನೆ ವೇಳೆ ಜನಸಮೂಹವನ್ನು ಹತ್ತಿಕ್ಕಲು ಸಂಚು, ಚೆನ್ನಾಗಿ ಯೋಚಿಸಿದ ಪಿತೂರಿಯಂತೆ ಕೊಲೆಯ ಯತ್ನದ ಪ್ರಕರಣವಿದೆ ಎಂದು ತಿಳಿಸಿದೆ. ಆರೋಪಿಗಳ ಬಂಧನಕ್ಕೆ ಕೋರಿ ಎಸ್‌ಐಟಿ ಸೋಮವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಮಂಗಳವಾರ ಆರೋಪಿಗಳಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಏನಿದು ಪ್ರಕರಣ?

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ ಇಡೀ ದೇಶದ ಗಮನ ಸೆಳೆದಿತ್ತು. ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ವೇಳೆ ನಾಲ್ವರು ರೈತರು ಮತ್ತು ಒರ್ವ ಪತ್ರಕರ್ತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದರು. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರಿಗೆ ಸೇರಿದ ಎಸ್ಯುವಿ ವಾಹನ ರೈತರ ಮೇಲೆ ಹರಿದಿತ್ತು. ಈ ಹಿನ್ನೆಲೆಯಲ್ಲಿ ಅವರ ಮಗ ಆಶಿಶ್ ಮಿಶ್ರಾ ಸೇರಿದಂತೆ 12 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ.

Tags: flood situationNirmala Sitaramanನ್ಯಾಯಾಲಯಯೋಜಿತ ಪಿತೂರಿಲಖೀಂಪುರ ಖೇರಿ
Previous Post

ಕರೋನ ಲಸಿಕಾ ಪ್ರಮಾಣ ಪತ್ರದಲ್ಲಿ ಪ್ರಧಾನಿ ಚಿತ್ರವಿದ್ದರೆ ತಪ್ಪೇನು? ಕೇರಳ ಹೈಕೋರ್ಟ್ ಪ್ರಶ್ನೆ

Next Post

ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ : ಆದರೂ ಈ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರ ಅಸಾಧ್ಯ!

Related Posts

ಭ್ರಷ್ಟಾಚಾರ – ವ್ಯವಸ್ಥೆಯ ಬೇರುಗಳಲ್ಲಿರುವ ವೈರಾಣು
Top Story

ಭ್ರಷ್ಟಾಚಾರ – ವ್ಯವಸ್ಥೆಯ ಬೇರುಗಳಲ್ಲಿರುವ ವೈರಾಣು

by ನಾ ದಿವಾಕರ
September 17, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಭಾರತದ ರಾಜಕೀಯ ವಲಯದಲ್ಲಿ ಹಾಗೂ ಸಾಮಾಜಿಕ ಜೀವನದಲ್ಲಿ ಅಧಿಕಾರ ದುರುಪಯೋಗ, ಹಣಕಾಸು ಭ್ರಷ್ಟಾಚಾರ, ಅತ್ಯಾಚಾರ ಮತ್ತಿತರ ರಾಜಕೀಯ...

Read moreDetails
ಮಕ್ಕಳಲ್ಲಿ ವೈಜ್ಞಾನಿಕ ‌ಮನೋಭಾವನೆ ಬೆಳೆಸುವಂತೆ‌ ಶಿಕ್ಷಕರಿಗೆ‌ ಸಚಿವ‌ ಪ್ರಿಯಾಂಕ್ ಖರ್ಗೆ ಕರೆ..

ಮಕ್ಕಳಲ್ಲಿ ವೈಜ್ಞಾನಿಕ ‌ಮನೋಭಾವನೆ ಬೆಳೆಸುವಂತೆ‌ ಶಿಕ್ಷಕರಿಗೆ‌ ಸಚಿವ‌ ಪ್ರಿಯಾಂಕ್ ಖರ್ಗೆ ಕರೆ..

September 16, 2026
ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

September 15, 2026
ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

September 15, 2026
T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

September 15, 2026
Next Post
ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ : ಆದರೂ ಈ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರ ಅಸಾಧ್ಯ!

ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ : ಆದರೂ ಈ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರ ಅಸಾಧ್ಯ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada