ಮೈಸೂರು : ಕಳೆದ 7 ದಶಕಗಳ ಕಾಲ ಸಿನಿ ಪ್ರಿಯರನ್ನು ರಂಜಿಸಿದ್ದ ಲಕ್ಷ್ಮೀ ಚಿತ್ರಮಂದಿರ ಇನ್ನು ಮುಂದೆ ಇತಿಹಾಸ ಸೇರಲಿದೆ. ಮೈಸೂರಿನ ಲಕ್ಷ್ಮಿ ಥಿಯೇಟರ್ ಇತಿಹಾಸ ಪುಟ ಸೇರಿದ್ದು, ಮಂಗಳವಾರದಿಂದ ಚಿತ್ರಮಂದಿರ ಕಟ್ಟಡ ನೆಲಸಮ ಮಾಡುವ ಕಾರ್ಯ ಆರಂಭವಾಗಿದೆ. ಕೊರೊನಾದಿಂದ ಕಂಗೆಟ್ಟ ಚಿತ್ರಮಂದಿರು ಮಾಲೀಕರು ಮುಚ್ಚಲು ನಿರ್ಧರಿಸಿದ್ದಾರೆ. ಉದ್ಯಮ ನಷ್ಟದಿಂದ ಲಕ್ಷ್ಮೀ ಚಿತ್ರಮಂದಿರ ಮುಚ್ವುವ ನಿರ್ಧಾರ ಕೈಗೊಳ್ಳಲಾಗಿತ್ತು. 1949 ರಿಂದ ಇಲ್ಲಿಯವರಿಗೆ ಸಿನಿ ಪ್ರಿಯರ ರಂಜಿಸುತ್ತಿದ್ದ ಚಿತ್ರಮಂದಿರ. ಇನ್ನು ಮುಂದೆ ನೆನಪಿನಲ್ಲಿ ಮಾತ್ರ ಉಳಿಯಲಿದೆ.
ಕೊರೊನಾ ಎಫೆಕ್ಟ್.. ಥಿಯೇಟರ್ ಲಾಸ್..!
ಕೊರೋನಾ ಲಾಕ್ಡೌನ್ನಿಂದ ಮನೋರಂಜನ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ. ಸಿನಿಮಾ ನಿರ್ದೇಶಕರಿಗೆ, ನಿರ್ಮಾಪಕರಿಗೆ ಹಾಗೂ ಚಿತ್ರಮಂದಿರ ಮಾಲೀಕರಿಗೆ ಕೋಟಿ ಕೋಟಿ ನಷ್ಟವಾಗುತ್ತಿದೆ. ಮೂರ್ನಾಲ್ಕು ವರ್ಷದಿಂದ ನಿರಂತರ ನಷ್ಟದಿಂದಲೇ ಚಿತ್ರಮಂದಿರ ನಡೆಯುತ್ತಿತ್ತು. ಲಕ್ಷ್ಮಿ ಚಿತ್ರಮಂದಿರಕ್ಕೆ ಸುಬ್ರಮಣ್ಯಂ ಎಂಬುವವರು ಮಾಲೀಕರು. ಡಾ.ರಾಜ್,ವಿಷ್ಣುವರ್ಧನ್, ಅಂಬರೀಶ್, ರವಿಚಂದ್ರನ್ರಂತಹ ನಟರ ಹಿಟ್ ಚಿತ್ರಗಳ ಪ್ರದರ್ಶನ ಇಲ್ಲಿ ನಡೆದಿದೆ. ಅಲ್ಲದೇ 50ಕ್ಕೂ ಹೆಚ್ಚು ಚಿತ್ರಗಳು ಶತದಿನೋತ್ಸವ ಆಚರಣೆ ಮಾಡಿದೆ. ಮತ್ತೊಂದು ವಿಶೇಷವೆಂದರೆ ಇಲ್ಲಿ ಹೊಸಬರ ಸಿನಿಮಾಗಳಿಗೂ ಅವಕಾಶ ನೀಡುತ್ತಿದ್ದರು ಲಕ್ಷೀ ಚಿತ್ರಮಂದಿರದ ಮಾಲೀಕರು. ಆದ್ರೆ ಕಳೆದ ಒಂದೂವರೆ ವರ್ಷದಿಂದ ಚಿತ್ರಮಂದಿರವನ್ನ ಬಂದ್ ಮಾಡಿದ್ರು. ಈಗ ಕಂಪ್ಲೀಟ್ ನೆಲಸಮ ಮಾಡಲಾಗಿದೆ . ‘ರಿವೈಂಡ್ ಕನ್ನಡ’ ಚಿತ್ರವೇ ಲಕ್ಷೀ ಚಿತ್ರಮಂದಿರದಲ್ಲಿ ಪ್ರದರ್ಶನಗೊಂಡ ಕೊನೆ ಚಿತ್ರವಾಗಿದೆ.







