• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕನ್ನಡ ಕಲಿಯುವ ವಾತಾವರಣ ನಿರ್ಮಿಸಿದಾಗ ಭಾಷೆ ಬೆಳೆಯಲು ಸಾಧ್ಯ:ಮುಖ್ಯಮಂತ್ರಿ ಸಿದ್ದರಾಮಯ್ಯ

Any Mind by Any Mind
November 1, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ , ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ADVERTISEMENT

100 ಕನ್ನಡ ಸಾಧಕರಿಗೆ ಪ್ರಶಸ್ತಿ:

1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1 ರಂದು ಮೈಸೂರು ರಾಜ್ಯ , ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕ ವೆಂದು ಮರುನಾಮಕರಣಗೊಂಡಿತು.. ಈ ಸುವರ್ಣ ಸಂಭ್ರಮವನ್ನು 2023ರ ನವೆಂಬರ್ 1 ರಂದು 51 ನೇ ವರ್ಷ ಎಂದು ಕರ್ನಾಟಕ ನಾಮಕರಣಗೊಂಡ ದಿನವೆಂದು ವರ್ಷಪೂರ್ತಿ ಆಚರಿಸಬೇಕೆಂದು ನಿರ್ಧರಿಸಲಾಯಿತು. ಇಡೀ ರಾಜ್ಯದಲ್ಲಿ ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು ‘ಹೆಸರಾಯಿತು ಕರ್ನಾಟಕ , ಉಸಿರಾಯಿತು ಕನ್ನಡ’ ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡವನ್ನು ಸಂಭ್ರಮಿಸಲಾಯಿತು ಎಂದರು. ಕನ್ನಡ ನಾಡಿನ ಏಕೀಕರಣಕ್ಕೆ, ಏಳಿಗೆಗೆ 100 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.

ಕನ್ನಡ ಭಾಷೆಯ ಬಗ್ಗೆ ಅಭಿಮಾನವಿರಲಿ :ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ. 1983ರ ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿದ್ದೆ. ಕನ್ನಡವನ್ನು ಕಾಯಲು ಸಮಿತಿ ಬೇಕೆನ್ನುವ ಪರಿಸ್ಥಿತಿ ಕರ್ನಾಟಕದಲ್ಲಿ ಉಂಟಾಗಿದೆ. ಇಂದಿಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಂದು ಈ ಸಮಿತಿ ಕಾರ್ಯನಿರ್ವಹಿಸುತ್ತಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸುವ ವಿಷಯದಲ್ಲಿ ಉದಾರತನವಿರಬೇಕೇ ಹೊರತು ಭಾಷೆ ಸಂಸ್ಕೃತಿಯ ಬಗ್ಗೆ ಅಭಿಮಾನವಿರಬೇಕು.

ಬೇರೆ ಭಾಷೆ ಕಲಿತರೂ, ಕನ್ನಡ ತಾಯಿಭಾಷೆಯನ್ನು ಮರೆಯಬಾರದು. ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಎಂಬ ಸ್ಥಾನಮಾನ ದೊರೆತಿದೆ. ಕನ್ನಡಕ್ಕೆ ಸೂಕ್ತ ಗೌರವ ಸಿಗುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ತಾಯಿಯ ಪ್ರತಿಮೆಯನ್ನು ಸಧ್ಯದಲ್ಲಿಯೇ ಸ್ಥಾಪಿಸಲಾಗುವುದು ಎಂದರು.

ವಾಟಾಳ್ ನಾಗರಾಜ್ ರವರು ಎಂದಿಗೂ ಅಧಿಕಾರಕ್ಕೆ ಹಪಹಪಿಸಿದವರಲ್ಲ:

ಪ್ರತಿ ವರ್ಷದ ನವೆಂಬರ್ 1 ಕನ್ನಡ ಹಬ್ಬದ ದಿನ. ಶ್ರೀ ವಾಟಾಳ್ ನಾಗರಾಜ್ ಅವರು ಇದೇ ರೀತಿ 100 ರಾಜ್ಯೋತ್ಸವಗಳನ್ನು ಆಚರಿಸುವಂತಾಗಲಿ ಎಂದು ಶುಭ ಕೋರಿದರು.ಕನ್ನಡಪರ ಹೋರಾಟಗಾರರಾದ ಇವರು ದೀರ್ಘ ಕಾಲದಿಂದ ಕನ್ನಡ ನಾಡು, ನುಡಿ, ನೆಲ,ಜಲಗಳ ಸಂರಕ್ಷಣೆಗೆ ಶ್ರಮಿಸಿದ್ದಾರೆ. ರಾಜಕೀಯವಾಗಿ ಬೇರೆ ಪಕ್ಷಗಳಿಂದ ಆಹ್ವಾನ ಬಂದಿದ್ದರೂ, ಕನ್ನಡ ಚಳವಳಿ ಪಕ್ಷ ಬಿಟ್ಟು ಬೇರೆಡೆಗೆ ಅವರು ಮುಖ ಮಾಡಲಿಲ್ಲ.ನನ್ನನ್ನೂ ಸೇರಿದಂತೆ, ಕೆಂಗಲ್ ಹನುಮಂತಯ್ಯ , ವೀರೇಂದ್ರ ಪಾಟೀಲ್, ದೇವರಾಜ ಅರಸು , ಗುಂಡೂರಾಯರು ಸೇರಿದಂತೆ ಹಲವು ರಾಜಕೀಯ ಧುರೀಣರಿಗೆ ಆಪ್ತರಾಗಿದ್ದರೂ, ಎಂದಿಗೂ ಅಧಿಕಾರಕ್ಕೆ ಹಪಹಪಿಸಿದವರಲ್ಲ. ಮಾತೃಭಾಷೆ, ನೆಲ ಜಲದ ಬಗ್ಗೆ ಬದ್ಧತೆಯಿರುವ ವಾಟಾಳ್ ನಾಗರಾಜ್ ಅವರ ಬಗ್ಗೆ ಅಪಾರ ಗೌರವಾದರವಿದೆ. ನನ್ನ ವಿದ್ಯಾರ್ಥಿದೆಸೆಯಿಂದಲೂ ಅವರ ಭಾಷೆಯನ್ನು ಕೇಳುತ್ತಾ ಬಂದಿದ್ದೇನೆ ಎಂದು ಸ್ಮರಿಸಿದರು. ವಾಟಾಳ್ ನಾಗರಾಜ್ ಅವರನ್ನು ‘ನಾಯಕರು’ ಎಂದು ತಾನು ಸಂಭೋದಿಸುತ್ತಿದ್ದು, ಜನ ಅವರನ್ನು ನಾಯಕರಾಗಿ ಕಂಡಿದ್ದಾರೆ ಎಂದರು.

Tags: bengaluruChief Minister Siddaramaiahenvironment for learning KannadaI will not allow Kannada to be debased.language can growVatal Nagaraj was never a power grabber
Previous Post

ವಯನಾಡ್ ಭೂಕುಸಿತ ಸಂತ್ರಸ್ತರಿಗೆ ನೆರವು ನಿರಾಕರಣೆ: ಕೇಂದ್ರ ಸರ್ಕಾರದ ವಿರುದ್ಧ ಪಿಣರಾಯಿ ವಾಗ್ದಾಳಿ

Next Post

ಕಾರ್ಮಿಕರೊಂದಿಗೆ ಬಂಗಲೆಗೆ ಬಣ್ಣ ಬಳಿದು, ಮಡಿಕೆ ತಯಾರಿಸಿದ ರಾಹುಲ್‌ ಗಾಂಧಿ;

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post

ಕಾರ್ಮಿಕರೊಂದಿಗೆ ಬಂಗಲೆಗೆ ಬಣ್ಣ ಬಳಿದು, ಮಡಿಕೆ ತಯಾರಿಸಿದ ರಾಹುಲ್‌ ಗಾಂಧಿ;

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada