• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ನಾಯಕತ್ವ ಬದಲಾವಣೆ: ಮುಗಿಯದ ಗೊಂದಲ, ದಿನಕ್ಕೊಂದು ತಿರುವು

Shivakumar by Shivakumar
June 12, 2021
in ಕರ್ನಾಟಕ, ರಾಜಕೀಯ
0
ಬಿಜೆಪಿ ನಾಯಕತ್ವ ಬದಲಾವಣೆ: ಮುಗಿಯದ ಗೊಂದಲ, ದಿನಕ್ಕೊಂದು ತಿರುವು
Share on WhatsAppShare on FacebookShare on Telegram

ಒಂದು ಕಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕರೋನಾ ಬಿಕ್ಕಟ್ಟಿನ ಅತೀವ ಕಾರ್ಯದೊತ್ತಡದ ನಡುವೆಯೂ ದಿಢೀರನೇ ತವರು ಕ್ಷೇತ್ರ ಶಿಕಾರಿಪುರಕ್ಕೆ ತೆರಳಿದ್ದರೆ, ಮತ್ತೊಂದು ಕಡೆ ಅವರ ವಿರೋಧಿ ಬಣದ ಮುಂಚೂಣಿ ನಾಯಕರೆಂದೇ ಗುರುತಿಸಿಕೊಂಡಿರುವ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ಹೆಸರು ಕೇಳಿಬರುತ್ತಿರುವ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ತೆರಳಿದ್ದಾರೆ!

ADVERTISEMENT

ಆಡಳಿತ ಪಕ್ಷದ ಈ ಬೆಳವಣಿಗೆ ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿದ್ದು, ರಾಜ್ಯ ಬಿಜೆಪಿಯ ನಾಯಕತ್ವ ಬದಲಾವಣೆಯ ಹಾವುಏಣಿಯ ಆಟ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಲೇ ಇದೆ.

ನಾಯಕತ್ವ ಬದಲಾವಣೆಯ ಚರ್ಚೆ ಬಿರುಸುಗೊಂಡಿರುವ ನಡುವೆಯೇ ಕಳೆದ ಭಾನುವಾರ ಸ್ವತಃ ಸಿಎಂ ಯಡಿಯೂರಪ್ಪ ಆ ಬಗ್ಗೆ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿ, ಪಕ್ಷದ ದೆಹಲಿಯ ವರಿಷ್ಠರು ಹೇಳಿದರೆ ಆ ಕ್ಷಣದಲ್ಲೇ ರಾಜೀನಾಮೆ ನೀಡಲು ಸಿದ್ಧ ಮತ್ತು ಪಕ್ಷದಲ್ಲಿ ತಮ್ಮನ್ನು ಬಿಟ್ಟರೆ ಮತ್ತೊಬ್ಬ ನಾಯಕರಿಲ್ಲ ಎಂಬುದು ಸುಳ್ಳು. ಸಾಕಷ್ಟು ಪರ್ಯಾಯ ನಾಯಕರಿದ್ದಾರೆ ಎಂದು ಹೇಳುವ ಮೂಲಕ ಇಡೀ ಚರ್ಚೆಗೆ ಹೊಸ ಆಯಾಮ ನೀಡಿದ್ದರು.

ಅದಾದ ಬಳಿಕ ಹಲವು ಹಿರಿಯ ಸಚಿವರು, ಸಿಎಂ ಆಪ್ತರು ಅವರ ಪರ ಹೇಳಿಕೆ ನೀಡಿ, ನಾಯಕತ್ವ ಬದಲಾವಣೆಯ ಕುರಿತ ಹೇಳಿಕೆಗಳಿಗೆ ವರಿಷ್ಠರು ಕೂಡಲೇ ಕಡಿವಾಣ ಹಾಕಬೇಕು ಮತ್ತು ಯಡಿಯೂರಪ್ಪ ನಾಯಕತ್ವದಲ್ಲಿ ಕರೋನಾ ಸಂಕಷ್ಟದಂತಹ ಬಿಕ್ಕಟ್ಟಿನ ಹೊತ್ತಲ್ಲಿ ಸುಸೂತ್ರ ಸರ್ಕಾರ ನಡೆಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದರು. ಮತ್ತೊಂದು ಕಡೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಸಿಎಂ ಬೆಂಬಲಿಸಿ ಹೇಳಿಕೆ ನೀಡಿ, ಯಡಿಯೂರಪ್ಪ ಪರ ಶಾಸಕರ ಸಹಿ ಸಂಗ್ರಹ ಮಾಡುವುದಾಗಿ ಘೋಷಿಸಿದ್ದರು.

ಆದರೆ, ರೇಣುಕಾಚಾರ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಹ್ಲಾದ್ ಜೋಷಿ, ಕೆ ಎಸ್ ಈಶ್ವರಪ್ಪ, ಆರ್ ಅಶೋಕ್ ಮುಂತಾದವರು ಯಡಿಯೂರಪ್ಪ ನೇತೃತ್ವದಲ್ಲಿ ತಮ್ಮ ಸರ್ಕಾರ ಮುಂದುವರಿಯಲಿದೆ ಮತ್ತು ಈ ಅವಧಿಯನ್ನು ಅವರ ನೇತೃತ್ವದಲ್ಲೇ ಪೂರೈಸಲಾಗುವುದು. ಹಾಗಾಗಿ ಇಂತಹ ವಿಷಯದಲ್ಲಿ ಸಹಿ ಸಂಗ್ರಹದಂತಹ ಪ್ರಯತ್ನವನ್ನು ಮಾಡುವುದು ಸರಿಯಲ್ಲ ಎಂದು ಹೇಳಿದ್ದರು. ಆ ನಡುವೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕೂಡ ಪ್ರತಿಕ್ರಿಯಿಸಿ, ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಆವರೆಗಿನ ಎಲ್ಲಾ ವಿದ್ಯಮಾನಗಳಿಗೆ ತೆರೆ ಎಳೆದಿದ್ದರು.

ಆದರೆ ಅದಾದ ಬೆನ್ನಲ್ಲೇ ಶಾಸಕ ವಿ ಸುನೀಲ್ ಕುಮಾರ್, ನಾಯಕತ್ವ ಬದಲಾವಣೆಯ ವಿಷಯದಲ್ಲಿ ಯಾರೋ ಕೆಲವರ ಅಭಿಪ್ರಾಯವೇ ಬಿಜೆಪಿಯ ಶಾಸಕರ ಅಭಿಮತವಲ್ಲ. ಹಾಗಾಗಿ ಎಲ್ಲಾ ಶಾಸಕರ ಭಾವನೆಗಳಿಗೂ ಬೆಲೆ ಕೊಟ್ಟು ಶಾಸಕರ ಸಭೆ ಕರೆಯಬೇಕು ಎನ್ನುವ ಮೂಲಕ, ಶಾಸಕಾಂಗ ಪಕ್ಷದ ಸಭೆಗೆ ಒತ್ತಾಯಿಸಿದ್ದರು. ಸಹಜವಾಗೇ ಆ ಹೇಳಿಕೆ, ಬಿಜೆಪಿಯಲ್ಲಿ ಎಲ್ಲವೂ ಸರಿಹೋಗಿಲ್ಲ. ನಾಯಕತ್ವ ಬದಲಾವಣೆಯ ಕುರಿತ, ಆರ್ ಎಸ್ ಎಸ್ ಪರಿವಾರ ಹಿನ್ನೆಲೆಯ ಯಡಿಯೂರಪ್ಪ ವಿರೋಧಿ ಬಣದ ಯತ್ನಗಳು ನಿಂತಿಲ್ಲ ಎಂಬ ಸಂದೇಶ ನೀಡಿತ್ತು. ಆ ಹೇಳಿಕೆಯ ಮರುದಿನವೇ ಸ್ವತಃ ಯಡಿಯೂರಪ್ಪ ಬಿಡುವಿಲ್ಲದ ಕಾರ್ಯದೊತ್ತಡದ ನಡುವೆಯೇ ರಾಜಧಾನಿ ತೊರೆದು ಶಿಕಾರಿಪುರಕ್ಕೆ ಎರಡು ದಿನಗಳ ಭೇಟಿಗೆ ಬಂದಿದ್ದಾರೆ.

ನಾಯಕತ್ವ ಬದಲಾವಣೆ ಚರ್ಚೆ ನಡುವೆ ಕುತೂಹಲ ಕೆರಳಿಸಿದ ಸಿಎಂ ಶಿಕಾರಿಪುರ ಭೇಟಿ!

ಶಿಕಾರಿಪುರಕ್ಕೆ ಸಿಎಂ ದೀಢೀರ್ ಭೇಟಿ ನೀಡುತ್ತಲೇ ನಾಯಕತ್ವ ಬದಲಾವಣೆಯ ವಿಷಯ ಮತ್ತೆ ಮುನ್ನೆಲೆಗೆ ಬಂದಿತ್ತು. ಆದರೆ, ಪ್ರವಾಸದ ನಡುವೆ ಹಾಸನದಲ್ಲಿ ಮಾತನಾಡಿದ್ದ ಯಡಿಯೂರಪ್ಪ, ಮುಂದಿನ ಎರಡು ವರ್ಷ ತಾವೇ ಸಿಎಂ ಎಂದಿದ್ದರು. ಆದರೆ, ಅವರು ಶಿವಮೊಗ್ಗ ತಲುಪುವ ಹೊತ್ತಿಗೆ ಸಾಕಷ್ಟು ಬೆಳವಣಿಗೆಗಳು ನಡೆದು, ಶಿವಮೊಗ್ಗದ ಸಿಎಂ ಆಪ್ತ ಮಠಾಧೀಶರು, ಸಿಎಂ ಪರ ಬ್ಯಾಟಿಂಗ್ ಆರಂಭಿಸಿದರು. ಕರೋನಾ ಸಂಕಷ್ಟದ ಹೊತ್ತಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಕರೋನಾಕ್ಕಿಂತ ಭೀಕರ ಸಂಕಷ್ಟ ಎದುರಿಸಬೇಕಾಗುತ್ತದೆ ಎನ್ನುವ ಮೂಲಕ ಮಠಾಧೀಶರು, ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯುವುದು ಸದ್ಯದ ಸ್ಥಿತಿಯಲ್ಲಿ ಅನಿವಾರ್ಯ ಎಂದು ಅಭಿಪ್ರಾಯಪಟ್ಟಿದ್ದರು.

ಅದೇ ಹೊತ್ತಿಗೆ, ಕೇಂದ್ರ ಸಂಪುಟ ವಿಸ್ತರಣೆಯ ಭಾಗವಾಗಿ ಯುವ ಸಂಸದರಿಗೆ ಅವಕಾಶ ನೀಡಲು ಯಡಿಯೂರಪ್ಪ ಪುತ್ರ ಬಿ ವೈ ರಾಘವೇಂದ್ರ ಮತ್ತು ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಲು ವರಿಷ್ಠರು ನಿರ್ಧರಿಸಿದ್ದಾರೆ ಎಂಬ ಸುದ್ದಿ ಹೊರಬಿದ್ದಿತ್ತು.

ಯಡಿಯೂರಪ್ಪ ಅವರನ್ನು ಸಿಎಂ ಕುರ್ಚಿಯಿಂದ ಇಳಿಸುವ ವಿಷಯದಲ್ಲಿ ವರಿಷ್ಠರು ಅಂತಿಮ ತೀರ್ಮಾನಕ್ಕೆ ಬಂದಿದ್ದು, ಅವರನ್ನು ದಕ್ಷಿಣದ ರಾಜ್ಯವೊಂದಕ್ಕೆ ರಾಜ್ಯಪಾಲರಾಗಿ ನೇಮಕ ಮಾಡಲಿದ್ದಾರೆ. ಜೊತೆಗೆ ಅವರ ಹಿರಿಯ ಪುತ್ರ ಸಂಸದ ರಾಘವೇಂದ್ರ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಮತ್ತು ಕಿರಿಯ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯದಲ್ಲಿ ಉಪಮುಖ್ಯಮಂತ್ರಿ ಸ್ಥಾನದೊಂದಿಗೆ ಪ್ರಮುಖ ಖಾತೆಯೊಂದನ್ನು ನೀಡುವ ಹೊಂದಾಣಿಕ ಸೂತ್ರ ರೂಪಿಸಲಾಗಿದೆ. ಅದಕ್ಕೆ ಸ್ವತಃ ಸಿಎಂ ಮತ್ತು ಅವರ ಪುತ್ರರೂ ಒಪ್ಪಿದ್ದಾರೆ. ಹಾಗಾಗಿ ನಾಯಕತ್ವ ಬದಲಾವಣೆ ಸನ್ನಿಹಿತ ಎಂಬ ವಿಶ್ಲೇಷಣೆಗಳೂ ಕೇಳಿಬಂದಿವೆ.

ಇದೀಗ, ಮುಖ್ಯಮಂತ್ರಿ ಹುದ್ದೆಗೆ ವರಿಷ್ಠರ ಆಯ್ಕೆ ಎಂದು ಹೇಳಲಾಗುತ್ತಿರುವ ಪ್ರಭಾವಿ ಲಿಂಗಾಯತ ನಾಯಕ ಹಾಗೂ ಸಂಘಪರಿವಾರ ಬೆಂಬಲಿತ ಅರವಿಂದ್ ಬೆಲ್ಲದ್ ದೆಹಲಿ ದೌಡಾಯಿಸಿರುವುದು ಅಂತಹ ವಿಶ್ಲೇಷಣೆಗಳಿಗೆ ಇನ್ನಷ್ಟು ಪುಷ್ಟಿ ನೀಡಿದೆ. ಜೊತೆಗೆ, ಕಳೆದ ವಾರ ಅರವಿಂದ್ ಬೆಲ್ಲದ್ ಅವರೊಂದಿಗೆ ದೆಹಲಿಗೆ ಹೋಗಿ ನಾಯಕತ್ವ ಬದಲಾವಣೆಯ ವಿಷಯದಲ್ಲಿ ಲಾಬಿ ನಡೆಸಿದ್ದಾರೆ ಎನ್ನಲಾಗುತ್ತಿರುವ ಸಚಿವ ಸಿ ಪಿ ಯೋಗೀಶ್ವರ್ ಕೂಡ ದೆಹಲಿಗೆ ತೆರಳಿದ್ದು, ಬೆಲ್ಲದ್ ಅವರೊಂದಿಗೆ ಅವರೂ ವರಿಷ್ಠರೊಂದಿಗೆ ಮಾತುಕತೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಆದರೆ, ಅರವಿಂದ್ ಬೆಲ್ಲದ್ ಅವರು ಇಂತಹ ಸುದ್ದಿಗಳನ್ನು ತಳ್ಳಿಹಾಕಿದ್ದು, ತಾವು ಕೌಟುಂಬಿಕ ಕಾರ್ಯಕ್ರಮದ ಸಲುವಾಗಿ ದೆಹಲಿಗೆ ಬಂದಿರುವುದಾಗಿಯೂ, ಪಕ್ಷದ ಯಾವುದೇ ನಾಯಕರನ್ನು ಭೇಟಿಯಾಗುವ ಇರಾದೆ ಇಲ್ಲವೆಂದೂ ಸ್ಪಷ್ಟಪಡಿಸಿದ್ದಾರೆ. ಬೆಲ್ಲದ್ ಅವರ ಈ ಸ್ಪಷ್ಟನೆ ನಡುವೆಯೇ, ರಾಜ್ಯದಲ್ಲಿ ಮತ್ತೊಂದು ಸುದ್ದಿ ರೆಕ್ಕೆಪುಕ್ಕ ಪಡೆದಿದ್ದು, ನಾಯಕತ್ವ ಬದಲಾವಣೆ ಶತಸಿದ್ಧ. ಯಡಿಯೂರಪ್ಪ ಮತ್ತು ಅವರ ಪುತ್ರರಿಗೆ ಸ್ಥಾನಮಾನಗಳ ಹೊಂದಾಣಿಕೆಯ ಸೂತ್ರ ಕೂಡ ಅಂತಿಮವಾಗಿದೆ. ಆ ಹಿನ್ನೆಲೆಯಲ್ಲಿ ಸಿಎಂ ಸ್ಥಾನಾಕಾಂಕ್ಷಿ ಬೆಲ್ಲದ್ ಅವರನ್ನು ವರಿಷ್ಠರೇ ಕರೆಸಿಕೊಂಡು ಮಾತುಕತೆ ನಡೆಸುತ್ತಿದ್ದಾರೆ. ಬೆಲ್ಲದ್ ಜೊತೆಗೆ ಡಿಸಿಎಂ ಅಶ್ವಥನಾರಾಯಣ ಅವರ ಹೆಸರೂ ಸಿಎಂ ಸ್ಥಾನಕ್ಕೆ ಕೇಳಿಬರುತ್ತಿದೆ. ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೆಸರೂ ಪಟ್ಟಿಯಲ್ಲಿದೆ.

ಮೂವರೂ ಸಂಘಪರಿವಾರದ ಕಡೆಯವರೇ ಆಗಿರುವುದು ಮತ್ತು ಮೂವರೂ ತಮ್ಮ ತಮ್ಮ ಸಮುದಾಯಗಳಲ್ಲಿ ಮತ್ತು ಪ್ರಾದೇಶಿಕವಾಗಿ ಸಾಕಷ್ಟು ಪ್ರಭಾವ ಹೊಂದಿರುವುದರಿಂದ ಪಕ್ಷದ ಸಂಘಟನೆ ಮತ್ತು ಭವಿಷ್ಯದ ದೃಷ್ಟಿಯಿಂದ ಸೂಕ್ತ ಆಯ್ಕೆಯನ್ನು ಮಾಡುವ ಬಿಕ್ಕಟ್ಟಿನ ಸ್ಥಿತಿ ವರಿಷ್ಠರ ಮುಂದಿದೆ. ಯಡಿಯೂರಪ್ಪ ಅವರಿಗೆ ಸಿಎಂ ಗಿರಿ ತಪ್ಪುವ ಹಿನ್ನೆಲೆಯಲ್ಲಿ ಮಠಾಧೀಶರು ಮತ್ತು ಲಿಂಗಾಯತ ಮುಖಂಡರು ಅವರ ಪರ ನಿಂತು ಬಿಜೆಪಿಯ ವಿರುದ್ಧ ತಿರುಗಿಬೀಳದಂತೆ ನೋಡಿಕೊಳ್ಳುವ ಭಾಗವಾಗಿ ಈಗಾಗಲೇ ಡಿಸಿಎಂ ಅಶ್ವಥನಾರಾಯಣ ಕೂಡ ಸ್ವಾಮೀಜಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಆದರೂ, ಲಿಂಗಾಯತ ಸಮುದಾಯದ ತಮ್ಮ ಮತಬ್ಯಾಂಕ್ ಕೈತಪ್ಪದಂತೆ ನೋಡಿಕೊಳ್ಳಲು ಲಿಂಗಾಯತ ಸಮುದಾಯದ ನಾಯಕರನ್ನೇ ಸಿಎಂ ಕುರ್ಚಿಗೆ ಕೂರಿಸುವ ಅನಿವಾರ್ಯತೆ ಇದೆ. ಆದರೆ, ಅದೇ ಹೊತ್ತಿಗೆ ಸಮುದಾಯದಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದರೂ, ಆಡಳಿತದ ವಿಷಯದಲ್ಲಿ ಅನನುಭವಿ ಎಂಬುದು ಬೆಲ್ಲದ್ ಅವರಿಗೆ ಹಿನ್ನಡೆ ತರಬಹುದು. ಇನ್ನು ಲಿಂಗಾಯತ ಪಕ್ಷ ಎಂಬ ಹಣೆಪಟ್ಟಿ ಹೊತ್ತಿರುವ ಬಿಜೆಪಿ ಒಕ್ಕಲಿಗರಂತಹ ಹಿಂದುಳಿದ ಸಮುದಾಯಕ್ಕೂ ಪ್ರಾತಿನಿಧ್ಯ ನೀಡಲಿದೆ ಎಂಬುದನ್ನು ಸಾಬೀತು ಮಾಡುವ ಮೂಲಕ ಒಕ್ಕಲಿಗ ಮತಬ್ಯಾಂಕ್ ಖಾತರಿಪಡಿಸಿಕೊಳ್ಳಲು ಅಶ್ವಥನಾರಾಯಣ ಆಯ್ಕೆ ಸೂಕ್ತ ಎಂಬ ಮಾತನ್ನೂ ವರಿಷ್ಠರು ಪರಿಶೀಲಿಸುತ್ತಿದ್ದಾರೆ. ಈ ನಡುವೆ ಹಿರಿಯ ನಾಯಕ ಮತ್ತು ಉತ್ತರಕರ್ನಾಟಕದವರು ಎಂಬ ಹಿನ್ನೆಲೆಯಲ್ಲಿ ಪರಿವಾರ ಪ್ರಹ್ಲಾದ್ ಜೋಷಿ ಹೆಸರನ್ನೂ ಮುಂದಿಟ್ಟಿದೆ ಎನ್ನಲಾಗುತ್ತಿದೆ.

ಒಟ್ಟಾರೆ, ಸದ್ಯಕ್ಕೆ ಬಿಜೆಪಿಯ ನಾಯಕತ್ವ ಬದಲಾವಣೆಯ ವಿಷಯ ದಿನದಿಂದ ದಿನಕ್ಕೆ ಊಹಾತೀತ ತಿರುವುಗಳನ್ನು ಪಡೆಯುತ್ತಿದ್ದು, ರಾಜಕೀಯ ವದಂತಿಗಳಿಗೆ ನೀರೆರೆಯುತ್ತಲೇ ಇದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಲೀ, ವರಿಷ್ಠರಾದ ಅಮಿತ್ ಶಾ ಅವರಾಗಲೀ ಈ ವಿಷಯದಲ್ಲಿ ಈವರೆಗೆ ಯಾವ ಪ್ರತಿಕ್ರಿಯೆ ನೀಡದೆ ಮುಗುಮ್ಮಾಗಿರುವುದು ಕೂಡ ಇಂತಹ ಹತ್ತು ಹಲವು ವದಂತಿಗಳಿಗೆ ಇನ್ನಷ್ಟು ಇಂಬು ನೀಡುತ್ತಿದೆ..! ಹಾಗಾಗಿ ಬಿಜೆಪಿಯ ನಾಯಕತ್ವ ಬದಲಾವಣೆ ಎಂಬ ಸಂಗತಿ ದಿನಕ್ಕೊಂದು ತಿರುವು ಪಡೆಯುತ್ತಾ ರೋಚಕ ಪತ್ತೆದಾರಿ ಸಿನಿಮಾದಂತೆ ಸಾಗುತ್ತಲೇ ಇದೆ!

Tags: ಅರವಿಂದ್ ಬೆಲ್ಲದ್ಅರುಣ್ ಸಿಂಗ್ಅಶ್ವಥನಾರಾಯಣಆರ್ ಎಸ್ ಎಸ್ಪ್ರಹ್ಲಾದ್ ಜೋಷಿಬಿ ಎಸ್ ಯಡಿಯೂರಪ್ಪಬಿಜೆಪಿಶಿಕಾರಿಪುರಸಿ ಪಿ ಯೋಗೀಶ್ವರ್
Previous Post

ಪ್ರಶಾಂತ್ ಕಿಶೋರ್ ರನ್ನ ಎನ್‌ಸಿಪಿ ತಂತ್ರಗಾರರನ್ನಾಗಿ ನೇಮಿಸುವ ಬಗ್ಗೆ ಯಾವುದೇ ಚರ್ಚೆ ಇಲ್ಲ: ಎಸ್‌ಸಿಪಿ ಮುಖಂಡ ಮಲಿಕ್ ಸ್ಪಷ್ಟನೆ

Next Post

AIADMK ಯನ್ನು ʼನನ್ನ ರಕ್ತದಿಂದ ಬೇರ್ಪಡಿಸಲು ಸಾಧ್ಯವಿಲ್ಲʼ ಶಶಿಕಲಾ ಸಂಭಾಷಣೆಯ ಆಡಿಯೋ ವೈರಲ್

Related Posts

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
0

ಅಂಕಗಳೊಂದಿಗೆ ಕೌಶಲವಿದ್ದರೆ ಉದ್ಯೋಗಾವಕಾಶ ಬೆಂಗಳೂರು, ಜೂನ್‌ 20: ಯಾವುದೇ ಕೆಲಸದಲ್ಲಿ ಕೌಶಲ್ಯವಿಲ್ಲದಿದ್ದರೆ ಪ್ರಯೋಜನಕ್ಕೆ ಬರುವುದಿಲ್ಲ. ಕಟ್ಟಡ ಕಾರ್ಮಿಕರಿಂದ ಹಿಡಿದು ಎಂಜಿನಿಯರಿಂಗ್‌ ವರೆಗೆ ಎಲ್ಲರಿಗೂ ಕೌಶಲ್ಯ ಅಗತ್ಯ ಎಂದು...

Read moreDetails
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
Next Post
AIADMK ಯನ್ನು ʼನನ್ನ ರಕ್ತದಿಂದ ಬೇರ್ಪಡಿಸಲು ಸಾಧ್ಯವಿಲ್ಲʼ  ಶಶಿಕಲಾ ಸಂಭಾಷಣೆಯ ಆಡಿಯೋ ವೈರಲ್

AIADMK ಯನ್ನು ʼನನ್ನ ರಕ್ತದಿಂದ ಬೇರ್ಪಡಿಸಲು ಸಾಧ್ಯವಿಲ್ಲʼ ಶಶಿಕಲಾ ಸಂಭಾಷಣೆಯ ಆಡಿಯೋ ವೈರಲ್

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada