• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಾಯಕತ್ವ ಬದಲಾವಣೆ; ಲಿಂಗಾಯತರು, ಬ್ರಾಹ್ಮಣರ ನಡುವೆ ತೀವ್ರ ಪೈಪೋಟಿ; ಚುನಾವಣೆ ಅಸ್ತ್ರವಾಗಿ ದಲಿತ ಸಿಎಂ

ನಚಿಕೇತು by ನಚಿಕೇತು
July 25, 2021
in ಕರ್ನಾಟಕ, ರಾಜಕೀಯ
0
ನಾಯಕತ್ವ ಬದಲಾವಣೆ; ಲಿಂಗಾಯತರು, ಬ್ರಾಹ್ಮಣರ ನಡುವೆ ತೀವ್ರ ಪೈಪೋಟಿ; ಚುನಾವಣೆ ಅಸ್ತ್ರವಾಗಿ ದಲಿತ ಸಿಎಂ
Share on WhatsAppShare on FacebookShare on Telegram

ನಾಳೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ. ಒಂದೆಡೆ ಬಿಎಸ್ ಯಡಿಯೂರಪ್ಪ ಅವರಿಗೆ ತನ್ನ ಸರ್ಕಾರ ಎರಡು ವರ್ಷಗಳು ಪೂರೈಸಿರುವ ಖುಷಿ, ಇನ್ನೊಂದೆಡೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧಿಕಾರ ತ್ಯಜಿಸಬೇಕು ಎಂಬ ಬೇಜಾರು. ಇದರ ನಡುವೇ ಸಂಜೆ ವೇಳೆಗೆ ಸಿಎಂ ಯಡಿಯೂರಪ್ಪ ರಾಜೀನಾಮೆ ಬಳಿಕ ಯಾರು ಮುಖ್ಯಮಂತ್ರಿ ಆಗಬೇಕು? ಎಂಬ ಸ್ಪಷ್ಟ ಸಂದೇಶ ಹೈಕಮಾಂಡ್ ರವಾನಿಸಲಿದೆ. ಇಂದು ಸಂಜೆ ಒಳಗೆ ಸಂದೇಶ ಬರುವ ಸಾಧ್ಯತೆ ದಟ್ಟವಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಕೊನೆಯ ಸುತ್ತಿನ ಪೈಪೋಟಿ ಶುರುವಾಗಿದೆ.

ADVERTISEMENT


75 ವರ್ಷ ಮೇಲ್ಪಟ್ಟ ಕಾರಣ ಬಿ.ಎಸ್ ಯಡಿಯೂರಪ್ಪರನ್ನು ಬದಲಾವಣೆ ಮಾಡೋದಾದರೆ ನಮ್ಮದೇನು ಅಭ್ಯಂತರವಿಲ್ಲ. ಬದಲಿಗೆ ಸಿಎಂ ಸ್ಥಾನಕ್ಕೆ ನಮ್ಮದೇ ಸಮುದಾಯದ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ, ಅರವಿಂದ್ ಬೆಲ್ಲದ್ರನ್ನು ಆಯ್ಕೆ ಮಾಡಿ ಎಂದು ಲಿಂಗಾಯತ ಸಮುದಾಯದ ಪ್ರಮುಖರು ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಹೆಸರೂ ಕೂಡ ಸಿಎಂ ಸ್ಥಾನಕ್ಕೆ ಕೇಳಿ ಬಂದಿದೆ.


ಈ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಜೆ ವೇಳೆಗೆ ಹೈಕಮಾಂಡ್ನಿಂದ ಸಂದೇಶ ಬರದಲಿದೆ ಎಂದಿದ್ದಾರೆ. ದೆಹಲಿಯಿಂದ ಸಂದೇಶ ಬಂದ ಕೂಡಲೇ ಮುಂದಿನ ಸಿಎಂ ಯಾರು ಎಂದು ಗೊತ್ತಾಗಲಿದೆ ಎಂದು ಗೌಪ್ಯತೆ ಕಾಪಾಡಿಕೊಂಡಿದ್ದಾರೆ. ಈಗ ಸ್ವಾಮೀಜಿಗಳು ಯಾವುದೇ ಸಮಾವೇಶ ಮಾಡೋದು ಬೇಡ, ಎಲ್ಲವೂ ಅಂತಿಮವಾಗಿದೆ ಎಂದು ಯಡಿಯೂರಪ್ಪ ಸ್ಪಷ್ಟ ಸಂದೇಶ ಸಾರಿದ್ದಾರೆ.


ನಾನು ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತ. ಕೇಂದ್ರ ವರಿಷ್ಠರು ನೀಡುವ ಜವಾಬ್ದಾರಿ ನಿಭಾಯಿಸುವೆ. ಯಾರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಹೈಕಮಾಂಡ್ಗೆ ಗೊತ್ತಿದೆ. ಎಲ್ಲರ ಜೊತೆಗೂ ಸಮಾಲೋಚನೆ ಮಾಡಿಯೇ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಯಡಿಯೂರಪ್ಪರನ್ನೇ ಸಿಎಂ ಆಗಿ ಮುಂದುವರಿಸಿದರೂ, ಈ ಸ್ಥಾನಕ್ಕೆ ಬೇರೆ ಯಾರನ್ನು ತಂದು ಕೂರಿಸಿದರೂ ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.


ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಪಟ್ಟ ಪಕ್ಕಾ ಎಂಬ ಚರ್ಚೆಯೂ ಜೋರಾಗಿದೆ. ಹೀಗಾಗಿ ಈ ನಡುವೆ ಹೊಸ ಬೆಳವಣಿಗೆಯೊಂದು ನಡೆದಿದೆ. ಹುಬ್ಬಳ್ಳಿಯ ಪ್ರಹ್ಲಾದ್ ಜೋಷಿ ನಿವಾಸಕ್ಕೆ ಭೇಟಿ ನೀಡಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಹತ್ವದ ಚರ್ಚೆ ನಡೆಸಿದ್ದಾರೆ. ದಿಢೀರ್ ಭೇಟಿ ನೀಡಿ ಪ್ರಹ್ಲಾದ್ ಜೋಷಿ ಜೊತೆ ಒಂದು ಗಂಟೆಗಳ ಕಾಲ ಬೊಮ್ಮಾಯಿ ಮಾತುಕತೆ ನಡೆಸಿರುವುದು ಭಾರೀ ಕುತೂಹಲ ಕೆರಳಿಸಿದೆ.


ಇನ್ನು, ತುಂಬಾ ದಿನಗಳ ನಂತರ ಜೋಷಿಯವರನ್ನ ಭೇಟಿಯಾಗುತ್ತಿದ್ದೇನೆ. ಜೋಷಿಯವರೇ ಕರೆ ಮಾಡಿ ಭೇಟಿಯಾಗುವಂತೆ ಸೂಚಿಸಿದ್ದರು. ಈ ವೇಳೆ ಮಳೆ ಹಾನಿ ಬಗ್ಗೆ ಚರ್ಚಿಸಿದ್ದೇವೆ. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಬೊಮ್ಮಾಯಿ ಗೌಪ್ಯತೆ ಕಾಪಾಡಿಕೊಂಡಿದ್ದಾರೆ.


ಪ್ರಹ್ಲಾದ್ ಜೋಷಿ ಕೂಡ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಬೊಮ್ಮಾಯಿ ಮೂಲಕ ತನ್ನ ಸ್ಪಷ್ಟ ಸಂದೇಶ ಕಳುಹಿಸಿದ್ದಾರೆ. ಬೊಮ್ಮಾಯಿ ಸಿಎಂ ಯಡಿಯೂರಪ್ಪ ಆಪ್ತ ಬಣದಲ್ಲಿ ಗುರುತಿಸಿಕೊಂಡ ಕಾರಣ ಜೋಷಿ ಹೀಗೆ ಮಾಡಿದ್ದರು ಎಂಬುದು ಟಾಕ್.


ಹೀಗೆ ಮುಖ್ಯಮಂತ್ರಿ ಸ್ಥಾನಕ್ಕೆ ಲಿಂಗಾಯತ ಮತ್ತು ಬ್ರಾಹ್ಮಣರ ನಡುವೆ ತೀವ್ರ ಪೈಪೋಟಿ ನಡೆಯುತ್ತಿರುವಾಗಲೇ ದಲಿತ ಸಿಎಂ ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಇದೇ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಮಾಜದ ನಾಯಕರಾದ ಶ್ರೀರಾಮುಲು ಅವರನ್ನು ಹೈಕಮಾಮಡ್ ನಾಯಕರು ದೆಹಲಿಗೆ ಕರೆಸಿಕೊಂಡು ಚರ್ಚಿಸಿದ್ದಾರೆ. ಹೀಗಾಗಿ ದಲಿತ ಸಿಎಂ ಮಾಡಲು ಹೈಕಮಾಂಡ್ ಮುಂದಾಗಿದ್ಯಾ ಎಂಬ ಚರ್ಚೆ ಶುರುವಾಗಿದೆ. ರಾಜ್ಯದಲ್ಲಿ ದಲಿತ ಸಿಎಂ ಮಾಡುವ ತೀರ್ಮಾನ ಹೈಕಮಾಂಡ್ನದ್ದು ಎಂದು ಯಡಿಯೂರಪ್ಪ ಜಾರಿಕೊಂಡಿದ್ದಾರೆ.
2023ರ ವಿಧಾನಸಭಾ ಚುನಾವಣೆ ದೃಷ್ಟಿಯಿಂದಲೇ ಹೈಕಮಾಂಡ್ ಭಾರೀ ತಂತ್ರಗಾರಿಕೆ ಹೆಣೆಯುತ್ತಿದೆ. ರಾಜ್ಯದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಮತಗಳು ನಿರ್ಣಾಯಕ ಆಗುವ ಶ್ರೀರಾಮುಲರನ್ನು ಸಿಎಂ ಮಾಡಬಹುದು ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಮತಬ್ಯಾಂಕ್ ಆಗಿರುವ ದಲಿತರನ್ನು ಸೆಳೆಯುವ ಎಲ್ಲಾ ತಂತ್ರಗಳನ್ನು ಮಾಡುತ್ತಿದ್ದಾರೆ.


ಇತ್ತೀಚೆಗೆ ದಲಿತ ಸಮುದಾಯಕ್ಕೆ ಸೇರಿದ ಗೆಹ್ಲೋಟ್ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ದಲಿತ ಸಮುದಾಯಕ್ಕೆ ಸೇರಿರುವ ಎ ನಾರಾಯಣಸ್ವಾಮಿಯವರನ್ನು ಕೇಂದ್ರದಲ್ಲಿ ಸಚಿವರನ್ನಾಗಿ ಮಾಡಲಾಗಿದೆ. ಇದೀಗ ಮುಂದಿನ ಎರಡು ವರ್ಷಗಳ ಕಾಲ ದಲಿತರನ್ನೇ ಸಿಎಂ ಮಾಡಿ 2023ರ ವಿಧಾನಸಭಾ ಚುನಾವಣೆ ಗೆಲ್ಲೋ ಪ್ಲಾನ್ ಬಿಜೆಪಿಯದ್ದು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿಎಂ ಪುತ್ರ ವಿಜಯೇಂದ್ರಗೆ ದೆಹಲಿಯಲ್ಲಿ ಸಿಕ್ಕ ಸೂಚನೆ ಏನು?

Next Post

ಉತ್ತರ ಕರ್ನಾಟಕ: ಮಳೆ ಕಡಿಮೆಯಾದರೂ ತಗ್ಗದ ನದಿ ನೀರಿನ ಹರಿವು; ಆತಂಕದಲ್ಲಿ ಜನರು

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಉತ್ತರ ಕರ್ನಾಟಕ: ಮಳೆ ಕಡಿಮೆಯಾದರೂ ತಗ್ಗದ ನದಿ ನೀರಿನ ಹರಿವು; ಆತಂಕದಲ್ಲಿ ಜನರು

ಉತ್ತರ ಕರ್ನಾಟಕ: ಮಳೆ ಕಡಿಮೆಯಾದರೂ ತಗ್ಗದ ನದಿ ನೀರಿನ ಹರಿವು; ಆತಂಕದಲ್ಲಿ ಜನರು

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada