• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಿಂಬೆ ಬೆಳೆಗಾರರಿಗೆ ಸಿಹಿ ಸುದ್ದಿ : APMC ಮಾರುಕಟ್ಟೆಯಲ್ಲಿ ಉತ್ತರ ದರಕ್ಕೆ ನಿಂಬೆಹಣ್ಣು ಖರೀದಿ!

ರಾಕೇಶ್ ಬಿಜಾಪುರ್ by ರಾಕೇಶ್ ಬಿಜಾಪುರ್
May 3, 2022
in ಕರ್ನಾಟಕ, ವಿಶೇಷ
0
ನಿಂಬೆ ಬೆಳೆಗಾರರಿಗೆ ಸಿಹಿ ಸುದ್ದಿ : APMC ಮಾರುಕಟ್ಟೆಯಲ್ಲಿ ಉತ್ತರ ದರಕ್ಕೆ ನಿಂಬೆಹಣ್ಣು ಖರೀದಿ!
Share on WhatsAppShare on FacebookShare on Telegram

ADVERTISEMENT

ದೇಶದಲ್ಲಿ ಪ್ರತಿದಿನ ಬೆಳಗಾದರೆ ಸಾಕು ಬೆಲೆ ಹೆಚ್ಚಳ, ಬೆಲೆ ಹೆಚ್ಚಳ ಅನ್ನೋದನ್ನು ಕಾಣುತ್ತೇವೆ. ಅಡಿಗೆ ಎಣ್ಣೆಯಿಂದ ಹಿಡಿದು ಅಗತ್ಯ ವಸ್ತುಗಳ ಬೆಲೆ ಗಗನಕ್ಕೆರುತ್ತಿವೆ. ಇದೀಗ ಬೆಲೆ ಏರಿಕೆ ಸಾಲಿಗೆ ನಿಂಬೆ ಹಣ್ಣು ಸೇರ್ಪಡೆಯಾಗಿದೆ. ಈ ಹಿಂದೆ 50 ಪೈಸೆಗೆ ಒಂದು ನಿಂಬೆ ಮಾರಾಟವಾಗುತ್ತಿತ್ತು. ಆದರೆ ಇದೀಗ ಒಂದು ನಿಂಬೆ ಹಣ್ಣಿನ ಬೆಲೆ 8 ರಿಂದ 10 ರೂಪಾಯಿ ತಲುಪಿದ್ದು, ಬೇಸಿಗೆ ಕಾಲದಲ್ಲಿ ಜನ ಮತ್ತಷ್ಟು ಬೆವರುವಂತಾಗಿದೆ. ಜನರಿಗೆ ಇದು ಹೊರೆಯಾದರೆ ರೈತಾಪಿ ವರ್ಗ ಸಂತಸ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಅತೀ ಹೆಚ್ಚು ನಿಂಬೆ ಬೆಳೆಯುವ ಪ್ರದೇಶವಾದ ವಿಜಯಪುರ ಜಿಲ್ಲೆ ನಿಂಬೆ ಬೆಳೆಗಾರರಿಗೆ ಅದೃಷ್ಟ ಖುಲಾಯಿಸಿದೆ. ಕಳೆದ 15 ದಿನಗಳಿಂದ ಉತ್ತಮ ದರ ಕಾಣುತ್ತಿದೆ. ಕಳೆದ ವಾರ ಒಂದು ಮೂಟೆ ಉತ್ತಮ ಗುಣಮಟ್ಟದ ನಿಂಬೆಗೆ 10 ಸಾವಿರ ರೂಪಾಯಿಗೆ ಮಾರಾಟವಾಗಿದೆ. ವಿಜಯಪುರ ನಗರದ ಎಪಿಎಂಸಿ ಮಾರುಕಟ್ಟೆಗಳಲ್ಲಿ, ರೈತರ ಜಮೀನಿಗೆ ತೆರಳಿ ಅಲ್ಲಿಯೇ ನಿಂಬೆ ಖರೀಧಿ ಮಾಡುವವರು ನಿಂಬೆಗೆ ಹೆಚ್ಚಿನ ಬೆಲೆ ನೀಡುತ್ತಿದ್ದಾರೆ. ಇಂದು ಎಪಿಎಂಸಿಯ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ನಡೆದ ಬಹಿರಂಗ ಹರಾಜಿನಲ್ಲಿ 1000 ನಿಂಬೆಯಿರೋ ಒಂದು ಮೂಟೆಗೆ 8 ಸಾವಿರ ರೂಪಾಯಿಗೆ ಮಾರಾಟವಾಯಿತು. ಅಂದರೆ ಒಂದು ನಿಂಬೆ ಹಣ್ಣಿನ ಬೆಲೆ 8 ರೂಪಾಯಿಗೆ ಮಾರಾಟವಾಯಿತು. ಇದು ಗ್ರಾಹಕರ ಕೈ ಸೇರಬೇಕಾದರೆ 12 ರಿಂದ 14 ರೂಪಾಯಿ ಆಗುತ್ತೆ.

ವಿಜಯಪುರ ಜಿಲ್ಲೆ ಇಂಡಿ, ಚಡಚಣ, ಸಿಂದಗಿ, ದೇವರ ಹಿಪ್ಪರಗಿ, ಬಸವನಬಾಗೇವಾಡಿ ಸೇರಿದಂತೆ ಇತರೆ ಭಾಗಗಳಲ್ಲಿ ನಿಂಬೆಯನ್ನು ಹೆಚ್ಚಾಗಿ ಬೆಳೆಯುತ್ತಾರೆ. ರಾಜ್ಯದಲ್ಲಿ ಒಟ್ಟು 40 ಸಾವಿರ ನಿಂಬೆ ಬೆಳೆಗಾರರು ಇದ್ದಾರೆ. ಅದರಲ್ಲಿ ವಿಜಯಪುರ ಜಿಲ್ಲೆಯಯವರೇ 25,000 ರೈತರಿದ್ಧಾರೆ. ರಾಜ್ಯದಲ್ಲಿ 21,000 ಹೆಕ್ಟೇರ್ ಪ್ರದೇಶದಲ್ಲಿ ನಿಂಬೆ ಬೆಳೆಯಲಾಗುತ್ತಿದ್ದರೆ, ಇದರಲ್ಲಿ ವಿಜಯಪುರ ಜಿಲ್ಲೆಯಲ್ಲೇ 16,000 ಹೆಕ್ಟೇರ್ ಪ್ರದೇಶದಲ್ಲಿ ನಿಂಬೆ ಬೆಳೆಯಿದೆ. ಸದ್ಯ ಇಡೀ ರಾಜ್ಯದಲ್ಲಿ ನಿಂಬೆ ಬೇಡಿಕೆಗಿಂತ ಪೂರೈಕೆ ಕಡಿಮೆಯಿರೋ ಕಾರಣ ಬೆಲೆಯಲ್ಲಿ ಏರಿಕೆಯಾಗಿದೆ. ಜೊತೆಗೆ ಈ ಹಿಂದೆ ಹವಾಮಾನ ವೈಪ್ಯರಿತ್ಯ, ಅಕಾಲಿಕ ಮಳೆ ಹಾಗೂ ರೋಗಬಾಧೆಗೂ ನಿಂಬೆ ಈಡಾಗಿದ್ರದಿಂದ ಈಗಾ ಇಳುವರಿ ಕಡಿಮೆಯಾಗಿದೆ. ಈ ಭಾಗದಲ್ಲಿ ಬೆಳೆಯುವ ನಿಂಬೆಗೆ ಗುಜರಾತ್, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ಬೇಸಿಗೆ ಕಾಲ ಆರಂಭವಾಗಿದ್ದು ತಂಪು ಪಾನೀಯ ಹಾಗೂ ಆಹಾರದಲ್ಲಿ ಹೆಚ್ಚಾಗಿ ನಿಂಬೆಯನ್ನು ಬಳಕೆ ಮಾಡುತ್ತಿರೋದಕ್ಕೆ, ಬೇಡಿಕೆಯೂ ಹೆಚ್ಚಾಗಿದೆ. ಈ ಕಾರಣದಿಂದ ನಿಂಬೆಗೆ ಬೆಲೆ ಏರಿಕೆಯಾಗಿದೆ.

ಕಳೆದ ವರ್ಷ ನಿಂಬೆ ಬೆಳಗಾರರು ಅಕ್ಷರಸಹ ಕಣ್ಣಿರು ಹಾಕುವ ಪರಿಸ್ಥಿತಿ ಇತ್ತು. ಅಕಾಲಿಕ ಮಳೆ, ಕರೋನಾ ಲಾಕಡೌನ್ ದಿಂದಾಗ ರಸ್ತೆಯ ಮೇಲೆ ನಿಂಬೆ ಹಣ್ಣು ಚಲ್ಲಿದ್ದರು. ತೋಟದಿಂದ ಮಾರುಕಟ್ಟೆಗೆ ನಿಂಬೆ ತಂದರೆ ಅದರ ಬಾಡಿಗೆ ಹಣ ಸಹ ಬರೋದಿಲ್ಲ ಎಂದು ಎಷ್ಟೋ ರೈತರ ನಿಂಬೆಯನ್ನು ಕಿತ್ತಿ ಬಿಸಾಡಿದ್ದರು. ಆದರೆ ಈ ಸಲ ಪರಿಸ್ಥಿತಿ ಭಿನ್ನವಾಗಿದ್ದು, ಐದು ಚಿಲ ನಿಂಬೆಹಣ್ಣನ್ನು ಮಾರುಕಟ್ಟೆಗೆ ತಂದು ಮಾರಾಟ‌ ಮಾಡಿ ಆ ಹಣದಿಂದ ಒಂದು ಗ್ರಾಂ ಬಂಗಾರ ತೆಗೆದುಕೊಂಡು ಮನೆಗೆ ಹೋಗುತ್ತಿದ್ದಾರೆ. ಬೆಳೆಗಾರರ ಪಾಲಿಗೆ ಬೆಲೆ ಹೆಚ್ಚಳ ವರವಾದರೆ ಗ್ರಾಹಕರ ಪಾಲಿಕೆ ಸಂಕಷ್ಟ ತಂದಿದೆ.

Tags: apmcBJPCongress PartyCovid 19ನಿಂಬೆ ಬೆಳೆಗಾರರುಬಿಜೆಪಿ
Previous Post

ಕನ್ನಡ ರತ್ನ ಡಾ. ಪುನೀತ್ ರಾಜ್‍ಕುಮಾರ್‌ಗೆ ‘ಬಸವಶ್ರೀ ಪ್ರಶಸ್ತಿ’ ಪ್ರದಾನ

Next Post

ದೇಶದಲ್ಲಿ 2568 ಸೋಂಕು ಪತ್ತೆ: 20 ಮಂದಿಗೆ ಕೊರೊನಾಗೆ ಬಲಿ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ಮುಂಬೈ ನಂತರ ಗುಜರಾತ್‌ ನಲ್ಲಿ ಎಕ್ಸ್‌ ವಿ ವೈರಸ್‌ ಪತ್ತೆ!

ದೇಶದಲ್ಲಿ 2568 ಸೋಂಕು ಪತ್ತೆ: 20 ಮಂದಿಗೆ ಕೊರೊನಾಗೆ ಬಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada