• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಂದಿರುವ ಯೋಗವನ್ನು ಕನ್ನಡ ಚಿತ್ರರಂಗ ಉಳಿಸಿಕೊಂಡು ಹೋಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
March 4, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಅಧಿಕಾರ ದರ್ಪ ಇದ್ದ ಕಾರಣಕ್ಕೇ ರಾಜೇಂದ್ರ ಸಿಂಗ್ ಬಾಬು ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿದ್ದು, ನನಗೆ ಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ; ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಡಿಸಿಎಂ

ADVERTISEMENT

“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

Yatnal: ಅಧ್ಯಕ್ಷರೇ ಬರೀ ನಿಮ್ ಮಾರಿ ನೋಡ್ಕೊತಾ ಕೂರ್ಬೇಕಾ..! #utkhadar #speekar #budgetsession #pratidhvani

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

“ಚಿತ್ರರಂಗದ ಬಗ್ಗೆ ನಿಮ್ಮ ಮಾತುಗಳು ಒರಟಾಗಿವೆ ಎನ್ನುವ ಬಿಜೆಪಿ, ಚಿತ್ರರಂಗದವರ ಟೀಕೆಯ ಬಗ್ಗೆ ಕೇಳಿದಾಗ, “ನನಗೆ ಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ. ನಾನು ನೇರವಾಗಿ ಹೇಳುತ್ತೇನೆ. ನೀವು (ಮಾಧ್ಯಮದವರು), ಅವರು ಬಂಡೆ ಎಂದು ಕರೆಯುತ್ತಾರೆ. ಹಾಗಾದರೆ ನಾನು ಬಂಡೆಯೇ? ನಾನು ಬಂಡೆಯಂತೇ ಕಾಣುತ್ತೇನೆಯೇ? ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಇದು ನನ್ನ ಮಾತಿನ ಶೈಲಿ. ಶೈಲಿ ಸರಿ ಇಲ್ಲದಿದ್ದರೆ ಸರಿಪಡಿಸಿಕೊಳ್ಳುತ್ತೇನೆ, ಆದರೆ ಸತ್ಯ ಹೇಳಿದ್ದೇನೆ” ಎಂದರು.

ಹುಬ್ಬಳ್ಳಿಗೆ ಏಕೆ ಹೋದರು; ಬೆಂಗಳೂರಿಗೆ ನೀರು ತರುವ ಹೋರಾಟವಿದು

ಮೇಕೆದಾಟು ಹೋರಾಟ ಕಾಂಗ್ರೆಸ್ ರೂಪಿಸಿದ ಹೋರಾಟ, ಇದರಲ್ಲಿ ಚಿತ್ರರಂಗದವರು ಹೇಗೆ ಭಾಗವಹಿಸಲು ಸಾಧ್ಯ ಎಂಬ ಪ್ರಶ್ನೆಗಳ ಬಗ್ಗೆ ಕೇಳಿದಾಗ, “ರಾಜ್ಯದ ನೆಲ, ಜಲ ಭಾಷೆ ರಕ್ಷಣೆಗೆ ಹೋರಾಟ ಮಾಡಬೇಕು. ಹಾಗಾದರೆ ಕಳಸಾ- ಬಂಡೂರಿ ಹೋರಾಟಕ್ಕೆ ಚಿತ್ರರಂಗದವರು ಏಕೆ ಹುಬ್ಬಳ್ಳಿಗೆ ಹೋದರು? ರಾಜಕುಮಾರ್ ಅವರು ಪಕ್ಷ ಬೇಧ ಮರೆತು ಹೋರಾಟಕ್ಕೆ ಏಕೆ ಬರುತ್ತಿದ್ದರು? ಹಾಗಾದರೆ ಈಗಿನ ಚಿತ್ರರಂಗದ ಜವಾಬ್ದಾರಿ ಏನು? ರಾಜಕುಮಾರ್ ಅವರು ಇವರಿಗೆ ಮಾದರಿ ಅಲ್ಲವೇ ಎಂದು ಪ್ರಶ್ನಿಸಿದರು.

ದುನಿಯಾ ವಿಜಯ್(Duniya Vijay), ಪ್ರೇಮ್(Prem), ಸಾಧು ಕೋಕಿಲ(Sadhu Kokila) , ಸಾ.ರಾ. ಗೋವಿಂದು (SA RA Govind) ಮತ್ತಿತರರು ಹೋರಾಟದಲ್ಲಿ ಭಾಗವಹಿಸಿದ್ದರು. ಇವರೆಲ್ಲಾ ಕಾಂಗ್ರೆಸ್ ಪಕ್ಷದಿಂದ ಬಂದಿದ್ದರೇ? ನನ್ನ ಮನೆಗೆ ನೀರು ತರಲು ಹೋರಾಟ ಮಾಡಲಿಲ್ಲ. ಇಡೀ ಬೆಂಗಳೂರಿಗೆ ನೀರು ತರಲು ಹೋರಾಟ ಮಾಡಿದ್ದೇವೆ. ಬೆಂಗಳೂರಲ್ಲಿ ಚಿತ್ರರಂಗದವರೂ ಇದ್ದಾರೆ. ಬರೀ ಕಾಂಗ್ರೆಸ್ ಕಾರ್ಯಕರ್ತರು ಇಲ್ಲ. ಚಿತ್ರಂಗದವರು ಬರದೇ ಇದ್ದರೂ ಹೋರಾಟ ಮಾಡುತ್ತೇವೆ. ರಾಜಕೀಯವಾಗಿ ಯಾರ್ಯಾರದ್ದು ಏನೆನಿದೆ ಎಂದು ನನಗೆ ತಿಳಿದಿಲ್ಲವೇ? ಇನ್ನಾದರೂ ಬುದ್ದಿ ಕಲಿಯಿರಿ ಎಂದಷ್ಟೇ ಹೇಳುತ್ತಿದ್ದೇನೆ. ತಗೊಳ್ಳೋದು ಬಿಡೋದು ಅವರಿಗೆ ಬಿಟ್ಟದ್ದು” ಎಂದರು.

KarnatakaAssembly: FIRಬಗ್ಗೆ ಸದನದಲ್ಲಿ ವೇದವ್ಯಾಸ ಕಾಮತ್ ಆಕ್ರೋಶ- ಡಿಕೆ ಖಡಕ್ ಕೌಂಟರ್..!#dkshivakumar

ಅಧಿಕಾರ ದರ್ಪ ಇದ್ದ ಕಾರಣಕ್ಕೆ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿದ್ದು

ಅಧಿಕಾರದ ದರ್ಪದಿಂದ ಹೀಗೆ ಹೇಳಿದ್ದಾರೆ ಎನ್ನುವ ಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಹೇಳಿಕೆ ಬಗ್ಗೆ ಕೇಳಿದಾಗ, ರಾಜೇಂದ್ರ ಸಿಂಗ್ ಬಾಬು ನನ್ನ ಗೆಳೆಯ. ಅವರನ್ನು ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಮಾಡಿದ್ದೆವು. ಅಧಿಕಾರ ದರ್ಪ ಇದ್ದ ಕಾರಣಕ್ಕೇ ಅವರನ್ನು ಆ ಸ್ಥಾನದಲ್ಲಿ ಕೂರಿಸಿದ್ದು. ಪಕ್ಷಕ್ಕೆ ಹಾಗೂ ಚಿತ್ರರಂಗಕ್ಕೆ ಸಹಾಯ ಮಾಡಲಿ ಎಂದು ಅವರಿಗೆ ಸ್ಥಾನ ನೀಡಲಾಗಿತ್ತು. ಇದಾದ ನಂತರ ಅವರು ಒಂದು ದಿನವೂ ಪಕ್ಷದ ಕೆಲಸಕ್ಕೆ ಬರಲಿಲ್ಲ. ದರ್ಪ ಸುಮ್ಮನೆ ಬರುವುದಿಲ್ಲ. ಜನರು ಕೊಟ್ಟ ಅಧಿಕಾರದಿಂದ ಬರುತ್ತದೆ. ಆ ಅಧಿಕಾರದಿಂದಲೇ ರಾಜೇಂದ್ರ ಸಿಂಗ್ ಬಾಬು ಅವರಂಥವರಿಗೆ ಅಧಿಕಾರ ಕೊಟ್ಟಿದ್ದದ್ದು” ಎಂದು ಹೇಳಿದರು.

“ನನಗೆ ಯಾವುದೇ ರೀತಿಯ ವರ್ಣನೆಯ ಅಗತ್ಯವಿಲ್ಲ. ಚಿತ್ರರಂಗದವರ ಉತ್ತಮ ವೇದಿಕೆಯನ್ನು, ಬದುಕು, ಬೆಳವಣಿಗೆಯನ್ನು ಅವರೇ ಉಳಿಸಿಕೊಳ್ಳಬೇಕಲ್ಲವೇ? ಶಿವಕುಮಾರ್, ಸಿದ್ದರಾಮಯ್ಯ ಅವರ ಮನೆ ಕಾರ್ಯಕ್ರಮಕ್ಕೆ ಬರಬೇಡಿ. ನಿಮ್ಮ ಕಾರ್ಯಕ್ರಮ, ನೀವು ಕಾರ್ಯಕ್ರಮಕ್ಕೆ ಬಂದು ಉಳಿಸಿ, ಬೆಳೆಸಿಕೊಂಡು ಹೋಗಿ ಎಂದು ಹೇಳಿದ್ದೇನೆ. ಎಲ್ಲಾ ಸೇರಿ ಸಂಘಟನೆ ಆಗಬೇಕಲ್ಲವೇ?” ಎಂದು ಹೇಳಿದರು.

ಹೊಸ ಭಾಷೆ ಕಲಿಸಿಕೊಡಲಿ

ನಟ್ಟು- ಬೋಲ್ಟ್ ಪದ ಶಿವಕುಮಾರ್ ಅವರ ಸಂಸ್ಕಾರ ತೋರಿಸುತ್ತದೆ ಎನ್ನುವ ನಾಗಾಭರಣ ಮಾತಿನ ಬಗ್ಗೆ ಕೇಳಿದಾಗ, “ನನ್ನ ಹಳ್ಳಿ ಭಾಷೆಯಲ್ಲಿ ಉತ್ತರ ನೀಡಿದ್ದೇನೆ. ಅವರ ಬಳಿ ಹೊಸ ಭಾಷೆಯಿದ್ದರೆ ಕಲಿಸಿಕೊಡಲಿ, ಅದೇ ರೀತಿ ಮಾತನಾಡುತ್ತೇನೆ” ಎಂದು ತಿವಿದರು.

ಸರಿಯಾಗಿ ಆಹ್ವಾನ ನೀಡಿಲ್ಲ ಎಂದು ನಾಗಭರಣ ಹೇಳಿದ್ದರ ಬಗ್ಗೆ ಕೇಳಿದಾಗ, “ಆಹ್ವಾನ ನೀಡದೇ ಇದ್ದರೇ ತಪ್ಪು. ಇದು ಬೇರೆ ವಿಚಾರ. ಮನೆ ಹಬ್ಬವನ್ನು ಎಲ್ಲರೂ ಸೇರಿ ಆಚರಿಸಬೇಕಲ್ಲವೇ? ಟೀಕೆ ಮಾಡಲಿ, ಬಯ್ಯಲಿ, vಹೋರಾಟ ಮಾಡಲಿ, ಜೈಕಾರ ಕೂಗಲಿ. ತಲೆ ಕೆಡಿಕೊಳ್ಳುವುದಿಲ್ಲ, ಅದು ನನಗೆ ಸಂತಸದ ವಿಚಾರವೇ” ಎಂದರು.

ಚಿತ್ರರಂಗ ಸಾಯುತ್ತಿದೆ

“ನಾನು ಸಹ ಸಿನಿಮಾ ರಂಗದಿಂದಲೇ ಬಂದವನು. ಇಂದು ಕನ್ನಡ ಚಿತ್ರರಂಗ ಸಾಯುತ್ತಿದೆ. ಹೊಸ ಸಿನಿಮಾಗಳು ಬರುತ್ತಿಲ್ಲ. ನಾನು ಇದೇ ರಂಗಕ್ಕೆ ಸೇರಿದವನು. ಈ ಹಿಂದೆ ಇಂದಿರಾಗಾಂಧಿ (Indira Gandhi) ಅವರ ಹೆಸರಿನಲ್ಲಿ ಟೂರಿಂಗ್ ಟಾಕೀಸ್ ನಡೆಸುತ್ತಿದ್ದೆ. ಈಗ ನಮ್ಮ ಒಡೆತನದ 23 ಸಿನಿಮಾ ಪ್ರದರ್ಶನ ಪರದೆಗಳು ಬೆಂಗಳೂರಿನಲ್ಲಿವೆ” ಎಂದು ಹೇಳಿದರು.

“ನಮ್ಮ ಕನ್ನಡ ಚಿತ್ರರಂಗ ಇತ್ತೀಚೆಗೆ ಒಂದೆರಡು ಸಿನಿಮಾಗಳಿಂದ ಬಾಲಿವುಡ್ಗಿಂತ ಕೊಂಚ ಎತ್ತರಕ್ಕೆ ಬೆಳೆದಿದೆ. ಚಿತ್ರಗಳ ಗುಣಮಟ್ಟ ಹಾಲಿವುಡ್ ಗುಣಮಟ್ಟಕ್ಕೆ ಬೆಳೆಯುತ್ತಿದೆ. ಒಂದಷ್ಟು ಜನ ಇದಕ್ಕಾಗಿ ಶ್ರಮ ಪಡುತ್ತಿದ್ದಾರೆ. ಈ ಹೆಜ್ಜೆ ಗುರುತುಗಳು ಉಳಿಯಬೇಕು, ಇನ್ನೂ ಎತ್ತರಕ್ಕೆ ಚಿತ್ರರಂಗವನ್ನು ತೆಗೆದುಕೊಂಡು ಹೋಗಬೇಕು ಎಂಬುದು ನನ್ನ ಉದ್ದೇಶ ಮತ್ತು ಆಶಯವಾಗಿದೆ” ಎಂದರು.

“ಮುಂದಿನ ವರ್ಷ ಬೆಂಗಳೂರಿನಲ್ಲಿ ಐಫಾ (IIFI) ಪ್ರಶಸ್ತಿ ನೀಡುವ ಕುರಿತು ಆಲೋಚನೆ ಮಾಡಿದ್ದೇನೆ. ಇದರ ಬಗ್ಗೆ ಈಗಾಗಲೇ ಎರಡು ಸುತ್ತಿನ ಮಾತುಕಥೆ ನಡೆದಿದೆ. ಪ್ರಶಸ್ತಿ ನೀಡುವ ತಂಡ ಈಗಾಗಲೇ ಬಂದು ನನ್ನ ಬಳಿ ಮಾತುಕಥೆ ನಡೆಸಿದೆ. ಇತ್ತೀಚೆಗೆ ಅಬುದಾಬಿಗೆ ಹೋದಾಗಲೂ ಚರ್ಚೆ ನಡೆಸಿದ್ದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

Tags: BJPcongressDK ShivakumarDuniya Vijayfilm industrykannada cinemapremR AshokRajendra singh babuSadhu KokilaSara Govindsiddaramaiah
Previous Post

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಶಾಸಕರ ಜತೆ ಪ್ರತ್ಯೇಕ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಅಧ್ಯಕ್ಷರೇ ಬರೀ ನಿಮ್ ಮಾರಿ ನೋಡ್ಕೊತಾ ಕೂರ್ಬೇಕಾ..!

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

ಅಧ್ಯಕ್ಷರೇ ಬರೀ ನಿಮ್ ಮಾರಿ ನೋಡ್ಕೊತಾ ಕೂರ್ಬೇಕಾ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada