• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಈ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ, ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ರಾಜಕೀಯ
0
ಶತ್ರು ಭೈರವಿ ಯಾಗದ ಆರೋಪ ಮಾಡಿರುವ ಡಿಕೆಶಿ; ಕೇರಳ ಸರ್ಕಾರ ಹೇಳಿದ್ದೇನು?
Share on WhatsAppShare on FacebookShare on Telegram

ಬೆಂಗಳೂರು, ಜೂನ್ 04: “ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ. ಉತ್ತರ ಭಾರತದ ರಾಜ್ಯಗಳಲ್ಲೂ ಮೋದಿ ಹಾಗೂ ರಾಮಮಂದಿರದ ಅಲೆ ಇಲ್ಲವಾಗಿದೆ ಎಂಬುದನ್ನು ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಲೋಕಸಭೆ ಚುನಾವಣೆ ಫಲಿತಾಂಶ ಕುರಿತಂತೆ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ರಾಜ್ಯ ಹಾಗೂ ದೇಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಂತಾಗಿದೆ. ದೇಶದಲ್ಲಿ ಭಾವನೆ ಸೋತಿದ್ದು, ಬದುಕು ಗೆದ್ದಿದೆ. ಬಿಜೆಪಿಯವರು 400 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಅದು ಸಾಧ್ಯವಾಗಿಲ್ಲ. ಅಯೋದ್ಯೆಯಲ್ಲೇ ಬಿಜೆಪಿ ಸೋತಿದೆ.

ಮಂಜುನಾಥ್ ಅವರಿಗೆ ಅಭಿನಂದನೆಗಳು:

ರಾಜ್ಯದಲ್ಲಿ ನಾವು 1 ಸ್ಥಾನದಿಂದ 9 ಸ್ಥಾನಗಳಿಗೆ ಏರಿಕೆ ಕಂಡಿದ್ದೇವೆ. ನಾವು 14 ಸ್ಥಾನಗಳ ನಿರೀಕ್ಷೆಯಲ್ಲಿದ್ದೆವು. ನನ್ನ ಕ್ಷೇತ್ರದಲ್ಲಿ ಡಾ. ಮಂಜುನಾಥ್ ಅವರ ಗೆಲುವಿಗೆ ವೈಯಕ್ತಿಕವಾಗಿ ಅವರಿಗೆ ಅಭಿನಂದಿಸುತ್ತೇನೆ. ಅವರ ಪಕ್ಷ ಗೆಲ್ಲುವುದಕ್ಕಿಂತ ಇಲ್ಲಿ ವ್ಯಕ್ತಿ ಗೆದ್ದಿದ್ದಾರೆ. ಬಹಳ ಲೆಕ್ಕಾಚಾರದಲ್ಲಿ ಅವರನ್ನು ಬಿಜೆಪಿಯಿಂದ ಸ್ಪರ್ಧಿಸುವಂತೆ ಮಾಡಿದ್ದರು. ಇಷ್ಟು ದೊಡ್ಡ ಅಂತರದ ಸೋಲಿನ ನಿರೀಕ್ಷೆ ಮಾಡಿರಲಿಲ್ಲ. ನನ್ನ ತಮ್ಮ ಉತ್ತಮ ಕೆಲಸ ಮಾಡಿದ್ದು, ಆಡಳಿತ ವಿರೋಧಿ ಅಲೆ ಇರಲಿಲ್ಲ. ಆದರೆ ಮಂಜುನಾಥ್ ಅವರಿಗೆ ಅವಕಾಶ ನೀಡಬೇಕು ಎಂದು ಜನ ಅವರನ್ನು ಗೆಲ್ಲಿಸಿದ್ದಾರೆ.

ನನ್ನ ಕ್ಷೇತ್ರದಲ್ಲಿ 60 ಸಾವಿರ ಮತಗಳ ಮುನ್ನಡೆ ಪಡೆಯುವ ನಿರೀಕ್ಷೆ ಇತ್ತು. ಆದರೆ ಇಷ್ಟೊಂದು ಅಂತರದ ಸೋಲುವ ನಿರೀಕ್ಷೆ ಮಾಡಿರಲಿಲ್ಲ. ಈ ಫಲಿತಾಂಶದ ಮೂಲಕ ಜನ ಕೊಟ್ಟಿರುವ ಸಂದೇಶ ಅರಿಯುತ್ತೇನೆ. ಪ್ರಜ್ಞಾವಂತ ಮತದಾರರ ತೀರ್ಪು ಪ್ರಶ್ನಿಸುವುದಿಲ್ಲ. ನಮಗೆ ಇನ್ನೂ ಹೆಚ್ಚಿನ ಸ್ಥಾನ ಬರಬೇಕಾಗಿತ್ತು. ಯಾಕೆ ಕಡಿಮೆ ಬಂದಿದೆ ಎಂದು ಚಿಂತನೆ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳಿಂದ ಹೆಚ್ಚಿನ ಸೀಟು ನಿರೀಕ್ಷೆ ಮಾಡಿದ್ದೆವು. ಜನ ಯಾವ ವಿಚಾರದಲ್ಲಿ ನಮ್ಮನ್ನು ಒಪ್ಪಿಲ್ಲ ಎಂಬುದನ್ನು ಪರಿಶೀಲಿಸಿ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ.

ಮೋದಿ ಅವರ ಜನಪ್ರಿಯತೆ ಕುಗ್ಗಿರುವುದು ಸಾಬೀತಾಗಿದೆ. ಹಿಂದಿ ಭಾಷಿಗರ ಭಾಗದಲ್ಲೂ ಕುಗ್ಗಿರುವುದು ಸ್ಪಷ್ಟವಾಗಿದೆ. ಬಿಜೆಪಿಗೆ ಸಂಪೂರ್ಣ ಬಹುಮತ ಇಲ್ಲ ಎಂಬುದನ್ನು ಎಲ್ಲರೂ ಒಪ್ಪಬೇಕು. ನನ್ನ ಕ್ಷೇತ್ರದಲ್ಲಿ ನನಗೆ ಹಿನ್ನಡೆಯಾಗಿದ್ದಂತೆ ಅಯೋಧ್ಯೆಯಲ್ಲೂ ಬಿಜೆಪಿ ಹಿನ್ನಡೆ ಅನುಭವಿಸಿದೆ. ಕಳೆದ ಬಾರಿ 303 ಕ್ಷೇತ್ರ ಗೆದ್ದಿದ್ದ ಬಿಜೆಪಿ 243 ಸ್ಥಾನಕ್ಕೆ ಕುಸಿದಿದೆ. ಬಿಜೆಪಿ ನಿಚ್ಚಳ ಬಹುಮತ ಪಡೆದಿಲ್ಲ. ಎನ್ ಡಿ ಎ ಕೂಡ ಹೇಳಿಕೊಂಡಿದ್ದ ಸಾಧನೆ ಮಾಡಿಲ್ಲ. ಬೇರೆ ಪಕ್ಷಗಳ ಮೇಲೆ ಅವಲಂಬಿತವಾಗಿವೆ.

ಕಾಂಗ್ರೆಸ್ ಮುಕ್ತ ಭಾರತ ಅಸಾಧ್ಯ ಎಂಬುದು ಸಾಬೀತಾಗಿದೆ:

10 ವರ್ಷಗಳ ನಂತರ ಕಾಂಗ್ರೆಸ್ ಪಕ್ಷ 100ರ ಗಡಿ ದಾಟಿದ್ದು, ಜನರು ಮತ್ತೆ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡಲು ಸಾಧ್ಯವಿಲ್ಲ ಎಂಬುದನ್ನು ಈ ಚುನಾವಣೆ ಮನದಟ್ಟು ಮಾಡಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಿರಂತರ ಪರಿಶ್ರಮ ಹೋರಾಟದಿಂದ ಪಕ್ಷ ಚೇತರಿಕೆ ಕಂಡಿದೆ. ಪ್ರಿಯಾಂಕಾ ಗಾಂಧಿ ಅವರ ಕೊಡುಗೆ ಸಾಕಷ್ಟು ಇದೆ. ಕಾಂಗ್ರೆಸ್ ಪಕ್ಷದ ಮತ ಪ್ರಮಾಣ ಕೂಡ ಹೆಚ್ಚಾಗಿದೆ. ಹಳೇ ಮೈಸೂರು ಭಾಗದಲ್ಲಿ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಲೋಕಸಭೆ ಚುನಾವಣೆ ಮತ ಪ್ರಮಾಣ ಕುಸಿದಿದ್ದು, ಮೊದಲಿನಿಂದಲೂ ಈ ರೀತಿ ವ್ಯತ್ಯಾಸ ಕಂಡು ಬಂದಿದೆ. ಎಸ್ ಎಂ ಕೃಷ್ಣ ಅವರ ಸರಕಾರ ಇದ್ದಾಗಲೂ ಹೀಗೆ ಆಗಿತ್ತು. ಅದು ಈ ರಾಜ್ಯದ ರಾಜಕೀಯ ಗುಣ. ಈ ಬಾರಿ ಬದಲಾಗಬಹುದು ಅಂದುಕೊಂಡಿದ್ದೆವು. ಆದರೆ ಆಗಲಿಲ್ಲ.

ನನ್ನ ಕ್ಷೇತ್ರದಲ್ಲಿ 60 ಸಾವಿರ ಮುನ್ನಡೆ ನಿರೀಕ್ಷೆ ಇತ್ತು. ಆದರೆ 26 ಸಾವಿರ ಮಾತ್ರ ಬಂದಿದೆ. ಚನ್ನಪಟ್ಟಣದಲ್ಲಿ ಅವರಿಗೆ ಉಲ್ಟಾ ಬಂದಿದೆ. ಇದರಿಂದ ನಾವು ಪಾಠ ಕಲಿಯುತ್ತೇವೆ. ವೈಯಕ್ತಿಕವಾಗಿ ಕೆಲವು ಅನುಮಾನಗಳಿವೆ. ಆದರೂ ಜನರ ತೀರ್ಪನ್ನು ಗೌರವಿಸುತ್ತೇನೆ. ಕಲ್ಯಾಣ ಕರ್ನಾಟಕದಲ್ಲಿ ಜನ ನಮಗೆ ಆಶೀರ್ವಾದ ನೀಡಿದ್ದಾರೆ. ಮನ್ಸೂರ್ ಅಲಿ ಖಾನ್ ಅವರು ಕೊನೆ ಹಂತದಲ್ಲಿ ಸೋಲನುಭವಿಸಿದ್ದಾರೆ. ರಾಜಕೀಯದಲ್ಲಿ ಇದು ಸರ್ವೇ ಸಾಮಾನ್ಯ. ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳುತ್ತೇವೆ.

ಗ್ಯಾರಂಟಿ ಯೋಜನೆ ಕೈಹಿಡಿಯಲಿಲ್ಲವೇ, ಈ ಫಲಿತಾಂಶದಿಂದ ತೃಪ್ತಿಯಾಗಿದ್ದೀರಾ ಎಂದು ಕೇಳಿದಾಗ, “ಈಗಲೇ ಆ ರೀತಿ ಹೇಳಲು ಸಾಧ್ಯವಿಲ್ಲ. ಕನಿಷ್ಠ 14 ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲಲಿದೆ ಎಂದು ಭಾವಿಸಿದ್ದೆವು. ಬೆಂಗಳೂರು, ಮುಂಬೈ ಕರ್ನಾಟಕ ಸೇರಿದಂತೆ ಇನ್ನು ಕೆಲವು ಕಡೆ ನಮಗೆ ನಿರೀಕ್ಷಿತ ಮಟ್ಟದ ಫಲಿತಾಂಶ ಬಂದಿಲ್ಲ. ಯಾವ ವರ್ಗ ಯಾಕೆ ನಮ್ಮಿಂದ ದೂರವಾಗಿದೆ ಎಂದು ಪರಿಶೀಲನೆ ಮಾಡುತ್ತೇವೆ. ಹೀಗಾಗಿ ಗ್ಯಾರಂಟಿ ಯೋಜನೆಗಳು ಸಂಪೂರ್ಣವಾಗಿ ಕೈ ಹಿಡಿದಿಲ್ಲ ಎಂದು ಹೇಳಲು ಸಾಧ್ಯವಿಲ್ಲ” ಎಂದರು.

ಎಕ್ಸಿಟ್ ಪೋಲ್ ಸುಳ್ಳಾಗಿರುವ ಬಗ್ಗೆ ಕೇಳಿದಾಗ, “ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಹೇಳಿದ್ದೆ. ನಮಗೆ ಎರಡಂಕಿ ಸ್ಥಾನ ಬರಲಿದೆ ಎಂದು ಭಾವಿಸಿದ್ದೆವು. ಕೊನೆ ಕ್ಷಣದವರೆಗೂ ನಾವು ಎರಡಂಕಿ ಸ್ಥಾನ ಪಡೆದಿದ್ದೆವು. ಕೆಲವು ಕೆಲಸಗಳಿಗೆ ಮತ ಬರುತ್ತವೆ ಎಂದು ಭಾವಿಸಿದ್ದೆವು. ಆದರೆ ನಿರೀಕ್ಷಿತ ಮಟ್ಟದಲ್ಲಿ ಮತ ಬಂದಿಲ್ಲ” ಎಂದರು.

ಕೇಂದ್ರದಲ್ಲಿ ಅತಂತ್ರದ ಪರಿಸ್ಥಿತಿ ಬಗ್ಗೆ ಕೇಳಿದಾಗ, “ಬಿಜೆಪಿಗೆ ನಿರೀಕ್ಷಿತ ಸಂಖ್ಯಾಬಲ ಸಿಕ್ಕಿಲ್ಲ. ಅವರು ಈ ಸೋಲನ್ನು ಸ್ವೀಕರಿಸಬೇಕು. ಮಹಾರಾಷ್ಟ್ರದಲ್ಲಿ ಅವರು ಮಾಡಿದ ಕುತಂತ್ರವನ್ನು ಜನ ಒಪ್ಪಿಲ್ಲ. ಉತ್ತರ ಪ್ರದೇಶದಲ್ಲೂ ರಾಮಮಂದಿರ, ಮೋದಿ ಗಾಳಿ ಇಲ್ಲ. ಭಾವನೆಗಿಂತ ಬದುಕು ಈ ಚುನಾವಣೆಯಲ್ಲಿ ಗೆದ್ದಿದೆ. ನಮ್ಮ ನಾಯಕರು ಸಭೆ ಮಾಡುತ್ತಿದ್ದಾರೆ. ಭಾರತೀಯ ರಾಜಕಾರಣದಲ್ಲಿ ಯಾವಾಗ ಏನುಬೇಕಾದರೂ ನಡೆಯಬಹುದು” ಎಂದರು.

ರಾಹುಲ್ ಗಾಂಧಿ ಅವರು ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಕೇಳಿದಾಗ “ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರು ಪ್ರಿಯಾಂಕಾ ಗಾಂಧಿ ಅವರು ನಿರಂತರ ಪ್ರಚಾರ ಮಾಡಿದ್ದಾರೆ” ಎಂದರು.

ಡಿ.ಕೆ ಸಹೋದರರ ವಿರುದ್ಧ ಬಿಜೆಪಿ ಹಾಗೂ ಕುಮಾರಸ್ವಾಮಿ ಅವರ ಮಿಷನ್ ಸಕ್ಸಸ್ ಆಗಿದೆಯಾ ಎಂದು ಕೇಳಿದಾಗ, “ಯಶಸ್ಸು ಆಗಿರಬಹುದು, ಮಂಜುನಾಥ್ ಅವರನ್ನು ಸ್ಪರ್ಧೆ ಮಾಡಿಸಿದ್ದು ಅವರ ಯಶಸ್ಸಿಗೆ ಕಾರಣ. ಅದನ್ನು ನಾವು ಒಪ್ಪಿದ್ದೇವೆ. ಇದು ಮಂಜುನಾಥ್ ಅವರ ಗೆಲುವು. ಅವರ ಪಕ್ಷಗಳ ಗೆಲುವಲ್ಲ” ಎಂದರು.

ಪಕ್ಷ ಅಭ್ಯರ್ಥಿಗಳ ಆಯ್ಕೆಯಲ್ಲಿ ಎಡವಿತಾ ಎಂದು ಕೇಳಿದಾಗ, “ಉತ್ತಮ ಅಭ್ಯರ್ಥಿಗಳನ್ನು ನಾವು ಕಣಕ್ಕಿಳಿಸಿದ್ದೆವು. ಎಲ್ಲಾ ಅಭ್ಯರ್ಥಿಗಳು ಸರಿಯಾಗಿದ್ದರು. ಎಲ್ಲಾ ಕಾರ್ಯಕರ್ತರೂ ಉತ್ತಮವಾಗಿ ಕೆಲಸ ಮಾಡಿದ್ದರು. ನಾನು ಯಾವುದೇ ಕಾರ್ಯಕರ್ತರನ್ನು ದೂರುವುದಿಲ್ಲ. ಜನರ ತೀರ್ಪು ಗೌರವಿಸುತ್ತೇನೆ” ಎಂದರು.

ಕೇಂದ್ರದಲ್ಲಿ ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ನಿಮ್ಮ ಸಹಾಯ ಕೇಳಿದ್ದಾರಾ ಎಂದು ಪ್ರಶ್ನಿಸಿದಾಗ, “ಇಲ್ಲ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ” ಎಂದರು.

Tags: BJPcongresslokasabha electionmanjunath
Previous Post

ಬೆನ್ನಿನ ಮೇಲೆ ಮೊಡವೆಗಳಾಗಿದ್ದರೆ, ಈ ಸಿಂಪಲ್ ಮನೆಮದ್ದುಗಳನ್ನ ಬಳಸಿ.!

Next Post

Chandrababu Naidu ಪ್ರಧಾನಿ Nitheesh ಉಪಪ್ರಧಾನಿ

Related Posts

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?
ಕರ್ನಾಟಕ

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

by ಪ್ರತಿಧ್ವನಿ
December 17, 2025
0

ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ರಾಜ್ಯ ಸರ್ಕಾರ ಮಾಸಿಕ ಸಂಭಾವನೆ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ವಿಧಾನ ಪರಿಷತ್ ನಲ್ಲಿ...

Read moreDetails

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025
ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post

Chandrababu Naidu ಪ್ರಧಾನಿ Nitheesh ಉಪಪ್ರಧಾನಿ

Please login to join discussion

Recent News

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
December 17, 2025
ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?
Top Story

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

by ಪ್ರತಿಧ್ವನಿ
December 17, 2025
Top Story

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

December 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada