ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, 101 ಆರೋಪಿಗಳ ಪೈಕಿ 98 ಆರೋಪಿಗಳಿಗೆ ಕೋರ್ಟ್ ಜೀವವಾಧಿ ಶಿಕ್ಷೆ ವಿಧಿಸಿದೆ. 2014ರ ಆಗಸ್ಟ್ 28ರಂದು ದಲಿತರ ಮೇಲೆ ಹಲ್ಲೆ ನಡೆಸಿ ಮನೆಗಳನ್ನ ಧ್ವಂಸಗೊಳಿಸಲಾಗಿತ್ತು.

ಈ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡಿತ್ತು. ಘಟನೆ ಸಬಂಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ 117 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.117 ಮಂದಿ ಪೈಕಿ 16 ಆರೋಪಿಗಳು ಮೃತಪಟ್ಟಿದ್ದು, ಅಕ್ಟೋಬರ್ 21ರಂದು ಉಳಿದ 101 ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದೆ.ಇದೀಗ 101ರಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5 ಸಾವಿರ ದಂಡವನ್ನು ವಿಧಿಸಿದೆ.
ಇನ್ನುಳಿದ ಮೂವರಿಗೆ ಕಠಿಣ ಶಿಕ್ಷೆ ಹಾಗೂ ತಲಾ 2 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.