ಪೆಗಾಸಸ್ ಸ್ಪೈವೇರ್ ಬಳಕೆಯ ಕುರಿತು ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು. ಯುವ ಕಾಂಗ್ರೇಸ್ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ನೇತೃತ್ವದಲ್ಲಿ ಪ್ರತಿಭಟನಾಕಾರರು ಮಳೆಯ ನಡುವೆಯೂ ಸಂಸತ್ ಭವನದತ್ತ ಮೆರವಣಿಗೆ ನಡೆಸಿದರು.
ಅನೇಕ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಐವೈಸಿ ಹೇಳಿಕೆಯಲ್ಲಿ ತಿಳಿಸಲಾಗಿದೆ. ಆಪಾದಿತ ಸ್ನೂಪಿಂಗ್ ಅನ್ನು ಟೀಕಿಸಿದ ಬಿ.ವಿ. ಶ್ರೀನಿವಾಸ್ ಅವರು ಮಾತನಾಡಿ, ಭಾರತದ “ಬ್ರಿಟಿಷ್ ಆಳ್ವಿಕೆ ದಿನಗಳಲ್ಲಿ, ಅವರ ವ್ಯವಹಾರವು‘ ಬೇಹುಗಾರಿಕೆ ’ಆಗಿತ್ತು, ಇಂದಿಗೂ ಬಿಜೆಪಿ ಬೇಹುಗಾರಿಕೆ ’ವ್ಯವಹಾರ ಮುಂದುವರೆಸಿದ್ದಾರೆ ಎಂದು ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.
ಶ್ರೀನಿವಾಸ್ ಜೆಪಿಸಿ ಮತ್ತು ಸುಪ್ರೀಂ ಕೋರ್ಟ್-ಮೇಲ್ವಿಚಾರಣೆಯ ತನಿಖೆಗೆ ಒತ್ತಾಯಿಸಿದರು, “ಬೇಹುಗಾರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಜನರಿಗೆ ಶಿಕ್ಷೆಯಾಗದಿದ್ದರೆ” ಐವೈಸಿ ತನ್ನ ಪ್ರತಿಭಟನೆಯನ್ನು ಮುಂದುವರಿಸಲಿದೆ ಎಂದು ಹೇಳಿದ್ದಾರೆ.
ಪತ್ರಕರ್ತರು, ನ್ಯಾಯಾಧೀಶರು, ಹೋರಾಟಗಾರರು ಮತ್ತು ವಿರೋಧ ಪಕ್ಷದ ನಾಯಕರ ಮೇಲೆ ಪ್ರಧಾನ ಮಂತ್ರಿ ಕಛೇರಿ ಬೇಹುಗಾರಿಕೆ ನಡೆಸುತ್ತಿರುವುದರ ವಿರುದ್ಧ ಕರ್ನಾಟಕ ಯೂತ್ ಕಾಂಗ್ರೇಸ್ ಅಧ್ಯಕ್ಷ ರಕ್ಷ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೇಸ್ನ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಯಾದವ್ , ಕಾರ್ಯದರ್ಶಿ ಸುರಭಿ ದ್ವಿವೇದಿ ಇದ್ದರು.