ತೆಲಂಗಾಣದಲ್ಲಿ ಭರ್ಜರಿಯಾಗಿ ಜಯಭೇರಿ ಬಾರಿ ಮುಖ್ಯಮಂತ್ರಿ ಆಗಿರುವ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿ ನಿಂತಿದೆ. ರೇವಂತ ರೆಡ್ಡಿ ನೇತೃತ್ವದ ತೆಲಂಗಾಣ ಕಾಂಗ್ರೆಸ್ ಸರ್ಕಾರ ತೆಲಂಗಾಣ ರಾಜ್ಯದ ರೈತರಿಗೆ ಬಂಪರ್ ಗಿಫ್ಟ್ ನೀಡಿದೆ. 2 ಲಕ್ಷ ರೂಪಾಯಿವರೆಗಿನ ರೈತರ ಬೆಳೆ ಸಾಲ ಮನ್ನ ಮಾಡಲು ಸಿಎಂ ರೇವಂತ್ ರೆಡ್ಡಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆ ಒಪ್ಪಿಗೆ ನೀಡಿದೆ. ಈ ಮಹತ್ವದ ನಿರ್ಧಾರದಿಂದ ತೆಲಂಗಾಣ ಸರ್ಕಾರದ ಬೊಕ್ಕಸಕ್ಕೆ 31 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ ಎನ್ನಲಾಗಿದೆ..
![](https://pratidhvani.com/wp-content/uploads/2024/06/hd-kumaraswamy-78944556.webp)
ಕರ್ನಾಟಕದಲ್ಲಿ ಜೆಡಿಎಸ್ ಕೂಡ ಇದೇ ರೀತಿಯ ಘೋಷಣೆ ಮಾಡಿತ್ತು. ಬಹುಮತ ಬಾರದೆ ಇದ್ದರೂ ರೈತರ ಬಗ್ಗೆ ಕಾಳಜಿ ಹೊಂದಿದ್ದ ಕುಮಾರಸ್ವಾಮಿ, ಕಾಂಗ್ರೆಸ್ ಜೊತೆಗಿನ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದಾಗ, ಇದೇ ರೀತಿ ಎರಡು ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡಿದ್ದರು. ಇದಕ್ಕಾಗಿ ಬರೋಬ್ಬರಿ 52 ಸಾವಿರ ಕೋಟಿ ರೂಪಾತಿ ಹಣವನ್ನು ಹೊಂದಿಸಿದ್ದರು. ಕರ್ನಾಟಕದಲ್ಲಿ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದು ಜೆಡಿಎಸ್ ಪಕ್ಷವೇ ಆಗಿದ್ದರೂ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಕೂಡ ಪಾಲುದಾರ ಪಕ್ಷ ಆಗಿದ್ದರಿಂದ ಸಾಲ ಮನ್ನಾದಲ್ಲಿ ಕಾಂಗ್ರೆಸ್ ಪಾಲು ಇತ್ತು ಎನ್ನಬಹುದು.
![](https://pratidhvani.com/wp-content/uploads/2024/06/images-13-1.jpeg)
ಇದೀಗ ಕಾಂಗ್ರೆಸ್ ಸರ್ಕಾರದಲ್ಲಿ ಸಾಲ ಮನ್ನಾ ಮಾಡುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ. ಈಗಾಗಲೇ ಗ್ಯಾರಂಟಿಗಳನ್ನು ಕೊಟ್ಟು ಸರ್ಕಾರದ ಬೊಕ್ಕಸ ತುಂಬಿಸಲು ಬೇರೆ ಬೇರೆ ಕಡೆ ತೆರಿಗೆ ಹೆಚ್ಚಳ ಮಾಡುತ್ತಿದೆ. ಇದೀಗ ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿರುವ ನಿಲುವು ಸ್ವಾಗತಾರ್ಹ. ತೆಲಂಗಾಣ ಮಾದರಿಯಲ್ಲೇ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸರ್ಕಾರದಲ್ಲಿ ಬೊಕ್ಕಸ ತುಂಬಿದ್ದರೆ, ನೀವು ಹೇಳುವಂತೆ ರಾಜ್ಯದಲ್ಲಿ ಯಾವುದೇ ಆರ್ಥಿಕ ಸಂಕಷ್ಟ ಇಲ್ಲದಿದ್ರೆ ತೆಲಂಗಾಣದಂತೆ ಸಾಲ ಮನ್ನಾ ಮಾಡಿರುವಂತೆ ರಾಜ್ಯದಲ್ಲೂ ಸಾಲ ಮನ್ನಾ ಮಾಡಿ ಎಂದು ಒತ್ತಾಯಿಸಿದ್ದಾರೆ.
![](https://pratidhvani.com/wp-content/uploads/2024/06/revanthreddy-1717857749.jpg)
ರಾಜ್ಯ ಸರ್ಕಾರ ಸಾಲಮನ್ನಾ ಮಾಡುವ ಸ್ಥಿತಿಯಲ್ಲಿ ಇದೆಯಾ..? ಅನ್ನೋದನ್ನು ಸರ್ಕಾರದಲ್ಲಿ ಹಣಕಾಸು ಸಚಿವರಾಗಿರುವ ಸಿಎಂ ಸಿದ್ದರಾಮಯ್ಯನವರೇ ಸ್ಪಷ್ಟಪಡಿಸಬೇಕಿದೆ. ಆದರೆ ಪಂಚ ಗ್ಯಾರಂಟಿಗಳನ್ನು ಕೊಟ್ಟಿರುವ ಸರ್ಕಾರ ರೈತರ ಪರವಾಗಿ ನಿಲ್ಲುತ್ತಾ ಅನ್ನೋದು ಅನುಮಾನ. ಆದರೆ ಅನ್ನ ಬೆಳೆವ ರೈತರಿಗೆ ಸಪೋರ್ಟ್ ಮಾಡಬೇಕು ಎನ್ನುವುದು ಪ್ರತಿಧ್ವನಿ ಆಶಯ. ಗ್ಯಾರಂಟಿಗಳನ್ನು ಕೊಟ್ಟ ಮಾತ್ರಕ್ಕೆ ಜನರು ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸುತ್ತಾರೆ ಅನ್ನೋದು ಸುಳ್ಳಾಗಿದೆ. ಹೀಗಾಗಿ ಗ್ಯಾರಂಟಿ ಮುಂದುವರಿಯುತ್ತಾ ಇಲ್ವಾ ಅನ್ನೋ ಬಗ್ಗೆಯೂ ಸಾಕಷ್ಟು ಅನುಮಾನಗಳು ಮೂಡಿದೆ. ಈಗಾಗಲೇ ಕೆಲವು ಕಡೆ ಹಣ ಬಂದಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಸರ್ಕಾರ ರೈತರ ನೆರವಿಗಾದರೂ ನಿಂತರೆ ಅನ್ನದಾತ ಉಸಿರಾಡಲಿದ್ದಾನೆ.
ಕೃಷ್ಣಮಣಿ