ಇನ್ನೇನು ಕೆಲವೇ ದಿನಗಳಲ್ಲಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ರಾಜ್ಯದ ಮೂಲೆ ಮೂಲೆಗೆ ತೆರಳಿ ಮತಯಾಚನೆ ಮಾಡ್ತಿದ್ದಾರೆ. ಚುನಾವಣೆಗೆ ದಿನಗಳು ಹತ್ತಿರ ಬರ್ತಿದ್ದಂತೆ ರಾಜಕೀಯ ನಾಯಕರ ಮಧ್ಯೆ ಟಾಕ್ ವಾರ್ ಶುರುವಾಗಿದೆ. ಇದೀಗ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಪಕ್ಷ ಹಾ ಗೂ ಸಿದ್ದರಾಮಯ್ಯನವರ ವಿರುದ್ಧ ಕಿಡಿಕಾರಿದ್ದಾರೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯ ಬಿಜೆಪಿ ಸಮಾವೇಶದಲ್ಲಿ ಮಾತ್ನಾಡಿದ ಅಮಿತ್ ಶಾ, ಲಿಂಗಾಯತ ಸಮುದಾಯವು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ಅವರ ಟಾರ್ಗೆಟ್.
![](https://pratidhvani.com/wp-content/uploads/2023/04/sidda_amit.jpg)
ಸಿದ್ದರಾಮಯ್ಯ ಯಾವಾಗಲೂ ಲಿಂಗಾಯತರನ್ನು (Lingayat) ಅವಮಾನಿಸುತ್ತಿದ್ದಾರೆ ವಾಗ್ದಾಳಿ ನಡೆಸಿದ್ದಾರೆ. ʻಈ ಹಿಂದೆಯೂ ಕಾಂಗ್ರೆಸ್ ವೀರೇಂದ್ರ ಪಾಟೀಲ್ ಅವರನ್ನು ಅವಮಾನಿಸಿತ್ತು. ಇದೀಗ ಅದೇ ಕಾಂಗ್ರೆಸ್ನ ಸಿದ್ದರಾಮಯ್ಯ ಅವಮಾನಿಸುತ್ತಿದ್ದಾರೆ ಅಂತ ಅಮಿತ್ ಶಾ ಹೇಳಿದ್ದಾರೆ. ವೇದಿಕೆಯಲ್ಲಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ನೋಡುತ್ತಾ ʻಲಿಂಗಾಯತರಿಗೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ. ಯತ್ನಾಳ್ ಅವರೇ ಅದರಲ್ಲಿ ಹೊಸದೇನಿದೆ? ಕಾಂಗ್ರೆಸ್ನವರು ನಿಜಲಿಂಗಪ್ಪರಿಗೂ ಅಪಮಾನ ಮಾಡಿದ್ದಾರೆ, ವೀರೇಂದ್ರ ಪಾಟೀಲ್ರಿಗೂ ಅಪಮಾನ ಮಾಡಿದ್ದಾರೆ, ಯಡಿಯೂರಪ್ಪರನ್ನು ಕುರ್ಚಿಯಿಂದ ಕೆಳಗೆ ಇಳಿಸುವ ಕೆಲಸ ಮಾಡಿದ್ದರು ಎಂದು ಅಂತ ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದರು.
![](https://pratidhvani.com/wp-content/uploads/2023/04/siddaramaiah-amit-shah-1516953695.jpg)