ಬೆಂಗಳೂರು: ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಆರೋಪದಡಿ ಆರೀಫ್ ಎಂಬ ವ್ಯಕ್ತಿಯನ್ನು ಆಂತರಿಕ ಭದ್ರತಾ ವಿಭಾಗ (ಐ.ಎಸ್.ಡಿ) ಹಾಗೂ ರಾಷ್ಟ್ರೀಯ ತನಿಖಾ ದಳದ (ಎನ್’ಐಎ) ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ನಗರದ ಥಣಿಸಂದ್ರದಲ್ಲಿ ವಶಕ್ಕೆ ಪಡೆದಿದ್ದಾರೆ.
ನಗರದ ಸಾಫ್ಟ್’ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೀಫ್, ಕಳೆದ ಎರಡು ವರ್ಷಗಳಿಂದ ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದ ಆರೀಫ್, ಅಲ್ ಖೈದಾಗೆ ಸಂಬಂಧಿಸಿದ ಟೆಲಿಗ್ರಾಂ ಮತ್ತಿತರ ಗ್ರೂಪ್’ಗಳಲ್ಲಿ ಸಕ್ರಿಯನಾಗಿದ್ದ ಎನ್ನಲಾಗಿದೆ.
![](https://pratidhvani.com/wp-content/uploads/2023/02/torrorist-1024x683.jpg)
ಮಾರ್ಚ್ ತಿಂಗಳಲ್ಲಿ ಸಿರಿಯಾ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ. ಈ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿವಶಕ್ಕೆ ಪಡೆಯಲಾಗಿದೆ. ಆರೀಫ್ ಮನೆಯಲ್ಲಿದ್ದ ಲ್ಯಾಪ್ ಟಾಪ್ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ ಎಂದು ಎನ್ಐಎ ಮೂಲಗಳು ಹೇಳಿವೆ.