• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ರಾಜ್‌ಕುಮಾರ್ ಸಿಂಗ್ ಪಕ್ಷಾಂತರ: ಬಿಹಾರ ವಿಧಾನಸಭೆಯಲ್ಲಿ ಎಲ್‌ಜೆಪಿಗೆ ಈಗ ಸದಸ್ಯರೇ‌ ಇಲ್ಲ

by
April 9, 2021
in Uncategorized
0
ರಾಜ್‌ಕುಮಾರ್ ಸಿಂಗ್ ಪಕ್ಷಾಂತರ: ಬಿಹಾರ ವಿಧಾನಸಭೆಯಲ್ಲಿ ಎಲ್‌ಜೆಪಿಗೆ ಈಗ ಸದಸ್ಯರೇ‌ ಇಲ್ಲ
Share on WhatsAppShare on FacebookShare on Telegram

ಲೋಕ ಜನಶಕ್ತಿ ಪಾರ್ಟಿಯ ಏಕೈಕ ಶಾಸಕ ಜೆಡಿಯುಗೆ ಪಕ್ಷಾಂತರವಾಗುವುದರೊಂದಿಗೆ ಬಿಹಾರ ವಿಧಾನಸಭೆಯಲ್ಲಿ ಚಿರಾಗ್ ಪಾಸ್ವಾನ್‌ರ ಪಕ್ಷಕ್ಕೆ ವಿಧಾನಸಭೆಯಲ್ಲಿ ಪ್ರತಿನಿಧಿಯೇ ಇಲ್ಲದಂತಾಗಿದೆ.

ADVERTISEMENT

ಕಳೆದ ವಿಧಾನಸಭಾ ಸಂದರ್ಭದಲ್ಲಿ ಚಿರಾಗ್ ಅವರು ಸೈದ್ಧಾಂತಿಕ ಭಿನ್ನಮತದ ಕಾರಣ ನೀಡಿ ಎನ್‌ಡಿ‌ಎ ತೊರೆದು ಸ್ವತಂತ್ರವಾಗಿ ಸ್ಪರ್ಧಿಸಿದ್ದರು. ಎಲ್‌ಜೆಪಿಯು ಜೆಡಿಯು ಸ್ಪರ್ಧಿಸಿದ್ದ ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನೂ ಕಣಕ್ಕಿಳಿಸಿತ್ತು. ಆ ಮೂಲಕ 243 ವಿಧಾನ ಸಭಾ ಸದಸ್ಯರಿರುವ ಬಿಹಾರದಲ್ಲಿ ಕೇವಲ 43 ಜೆಡಿಯು ಶಾಸಕರು ಆಯ್ಕೆಯಾಗಲು ಕಾರಣವಾಗಿದ್ದರು.

ಆದರೆ ಮಂಗಳವಾರ, ಬೆಗುಸರೈನ ಮತಿಹಾನಿಯಿಂದ ಗೆದ್ದ ಎಲ್‌ಜೆಪಿಯ ಶಾಸಕ ರಾಜ್ ಕುಮಾರ್ ಸಿಂಗ್ ಅವರು ಜೆಡಿಯುಗೆ ಪಕ್ಷಾಂತರವಾಗುವುದರೊಂದಿಗೆ ರಾಜ್ಯದ ಶಾಸಕಾಂಗ ಪರಿಷತ್ತಿನಲ್ಲಿ ಅಥವಾ ವಿಧಾನಸಭೆಯಲ್ಲಿ ಎಲ್‌ಜೆಪಿಗೆ ಸದಸ್ಯರಿಲ್ಲದಂತಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಎನ್‌ಡಿಎ ತೊರೆಯುವ ಆದರೆ ಜೆಡಿಯು ಸ್ಪರ್ಧಿಸಿರುವೆಡೆ ಮಾತ್ರ ಸ್ಪರ್ಧಿಸುವ ಎಲ್‌ಜೆಪಿಯ ನಿರ್ಧಾರಕ್ಕೆ ಬಿಜೆಪಿಯ ಮೌನ ಅನುಮೋದನೆಯೂ ಇತ್ತೆಂದು ಊಹಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಚಿರಾಗ್ ಅವರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡಲಾಗುತ್ತದೆ ಎಂದೇ ನಂಬಲಾಗಿತ್ತು. ಅಲ್ಲದೆ ಅವರ ರಾಮ್ ವಿಲಾಸ್ ಪಾಸ್ವಾನ್ ಅವರು ನಿಧನರಾಗುವುದಕ್ಕಿಂತ ಮೊದಲು ಮೋದಿ ಸಂಪುಟದಲ್ಲಿ ಸಚಿವರಾಗಿಯೇ ಇದ್ದರು.

ವಿಧಾನಸಭಾ ಚುನಾವಣೆಯಲ್ಲಿ ತಮ್ಮ‌ ಪಕ್ಷ ನೀಡಿದ ಕಳಪೆ‌ ಪ್ರದರ್ಶನಕ್ಕೆ ಪಾಸ್ವಾನ್ ಅವರ ನಿರ್ಧಾರವೇ‌ ಕಾರಣ ಎಂದು ನಂಬಿರುವ ನಿತೀಶ್, ತಮ್ಮ‌ ರಾಜಕೀಯ ಸ್ಥಾನಮಾನ ಭದ್ರವಾಗಿರಬೇಕೆಂದರೆ ಬಿಹಾರದಲ್ಲಿ ಎಲ್‌ಜೆಪಿ ಯಾವುದೇ‌ ಪ್ರಭಾವ ಹೊಂದಿರಬಾರದು ಎಂಬ ಉದ್ದೇಶದಿಂದಲೇ ರಾಜ್‌ಕುಮಾರ್ ಸಿಂಗ್ ಅವರನ್ನು ಪಕ್ಷಕ್ಕೆ ಕರೆತಂದಿದ್ದಾರೆ ಎನ್ನಲಾಗುತ್ತಿದೆ.

ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿರುವಂತೆ ನಿತೀಶ್ “ರಾಜ್ಯ ರಾಜಕಾರಣದಲ್ಲಿ ತನ್ನ ಸ್ಥಾನವನ್ನು ಮತ್ತೆ ಭದ್ರಪಡಿಸಲು ಯಶಸ್ವಿಯಾದ ಕಾರಣ, ಕೇಂದ್ರದಲ್ಲಿ ಚಿರಾಗ್ ಪ್ರವೇಶವು ವಿಳಂಬವಾಗುತ್ತಿದೆ”. ಈ ಹಂತದಲ್ಲಿ ನಿತೀಶ್ ಕುಮಾರ್ ಅವರನ್ನು ಅಸಮಾಧಾನಗೊಳಿಸಲು ಬಿಜೆಪಿ ಇಚ್ಛಿಸುವುದಿಲ್ಲ. ಇದು ರಾಮ್ ವಿಲಾಸ್ ಪಾಸ್ವಾನ್ ಅವರ ಮರಣದ ನಂತರ ಖಾಲಿಯಾಗಿದ್ದ ರಾಜ್ಯಸಭಾ ಸ್ಥಾನ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಯವರಿಗೆ ನೀಡಿದ್ದರಲ್ಲೇ ಸ್ಪಷ್ಟವಾಗಿದೆ ಎಂದು ವರದಿ ಹೇಳುತ್ತದೆ.

ಆದರೆ ಎಲ್ಲವೂ‌ ಸಾಧ್ಯವಾಗಿರುವ ಭಾರತದ ರಾಜಕಾರಣದಲ್ಲಿ ಮುಂದೇನಾಗುತ್ತದೆ ಎಂದು ಊಹಿಸಲಾಗುವುದಿಲ್ಲ. ಸುಪ್ರೀಂ ಪವರ್ ತಮ್ಮ ಬಳಿಯೇ ಇರಬೇಕೆಂದು ಬಯಸುವ ಬಿಜೆಪಿ ಯಾವ ಕ್ಷಣದಲ್ಲಿ ಜೆಡಿಯುಗೆ ಕೈ ಕೊಟ್ಟು ಪಾಸ್ವಾನ್‌ರಿಗೆ ಮಾನ್ಯತೆ ಕೊಡುತ್ತದೆ ಎಂದು ಹೇಳಲಾಗುವುದಿಲ್ಲ.

Previous Post

ರಸಗೊಬ್ಬರ ಸಬ್ಸಿಡಿ ಇಳಿಸಿರುವುದೇ ಬೆಲೆ ಏರಿಕೆಗೆ ಕಾರಣ; ಸಿದ್ದರಾಮಯ್ಯ

Next Post

ಕೋವಿಡ್‌ ಲಸಿಕೆಗಳ ಕೊರತೆ: ಮುಂಬೈನಲ್ಲಿ ಮುಚ್ಚಲ್ಪಟ್ಟ 70ಕ್ಕೂ ಹೆಚ್ಚು ಲಸಿಕಾ ಕೇಂದ್ರಗಳು

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಕೋವಿಡ್‌ ಲಸಿಕೆಗಳ ಕೊರತೆ: ಮುಂಬೈನಲ್ಲಿ ಮುಚ್ಚಲ್ಪಟ್ಟ 70ಕ್ಕೂ ಹೆಚ್ಚು ಲಸಿಕಾ ಕೇಂದ್ರಗಳು

ಕೋವಿಡ್‌ ಲಸಿಕೆಗಳ ಕೊರತೆ: ಮುಂಬೈನಲ್ಲಿ ಮುಚ್ಚಲ್ಪಟ್ಟ 70ಕ್ಕೂ ಹೆಚ್ಚು ಲಸಿಕಾ ಕೇಂದ್ರಗಳು

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada