ಶಿವಮೊಗ್ಗ (Shivamogga) : ಲೋಕಸಭೆ ಚುನಾವಣೆಗೆ (Loksabha Election) ಬಿಜೆಪಿಯ 2ನೇ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಲಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರು, ನಾನು ಇಂದು ನವದೆಹಲಿಗೆ (Newdelhi) ಪ್ರಯಾಣ ಬೆಳೆಸಲಿದ್ದೇನೆ. ಸಂಜೆ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ (Modi) ಪಾಲ್ಗೊಳ್ಳಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (J.P.Nadda) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಎರಡನೇ ಪಟ್ಟಿಯ ಅಂತಿಮಗೊಳಿಸುವಿಕೆಯು ಇಂದು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.
ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಶಿವರಾಜ್ಕುಮಾರ್ (Shivarajkumar) ಪತ್ನಿ ಹಾಗೂ ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ (S.Bangarappa) ಅವರ ಪುತ್ರಿ ಗೀತಾ ಶಿವರಾಜಕುಮಾರ್ (Geetha Shivarajkumar) ಕಣಕ್ಕಿಳಿದಿರುವ ಕುರಿತು ಪ್ರತಿಕ್ರಿಯಿಸಿ, ಸಂತೋಷ, ಅಭ್ಯರ್ಥಿ ಯಾರಾದರೂ ನಿಲ್ಲಲ್ಲೇಬೇಕಲ್ಲ ಎಂದು ಹೇಳಿದರು.
ಹಲವು ಹಾಲಿ ಸಂಸದರಿಗೆ ಟಿಕೆಟ್ ಸಿಗದಿರುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.
ಜೆಡಿಎಸ್ಗೆ (JDS) ಸೀಟು ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ಜೊತೆ ಸೀಟು ಹಂಚಿಕೆ ವಿಚಾರ ಇನ್ನೂ ಚರ್ಚೆಯಲ್ಲಿದೆ. ಇಂದು ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದರು.
#Karnataka #bengaluru #bsyediyurappa #loksabhaelection #bjp #jds