ಬೀದರ್ (Bidar): ಲೋಕಸಭಾ ಚುನಾವಣೆಗೆ (Loksabha Election) ಕಾಂಗ್ರೆಸ್ (Congress) ಅಭ್ಯರ್ಥಿಗಳ ಹೆಸರನ್ನು ಎರಡು-ಮೂರು ದಿನಗಳಲ್ಲಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Siddaramaiah) ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವದೆಹಲಿಯಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.
ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಸಂಭವಿಸಿದ ಸ್ಫೋಟದ ತನಿಖೆ ಪ್ರಗತಿಯಲ್ಲಿದೆ. ಸುಳಿವು ಸಿಕ್ಕಿದೆ. ಅದರ ವಿವರ ಮಾಧ್ಯಮದವರ ಜತೆ ಹಂಚಿಕೊಳ್ಳುವುದಿಲ್ಲ. ಇಷ್ಟರಲ್ಲೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದರು.
ಬಸವಕಲ್ಯಾಣದ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮಾರ್ಚ್ ವರೆಗಿನ ಪೆಂಡಿಂಗ್ ಬಿಲ್ ಪಾವತಿಗೆ ರಾಜ್ಯ ಸರ್ಕಾರದಿಂದ 50 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಜಿಲ್ಲಾಧಿಕಾರಿ ಖಾತೆಗೆ ಹಣ ಜಮೆ ಆಗಿದೆ. ಅಗತ್ಯಕ್ಕೆ ಅನುಗುಣವಾಗಿ ಕಾಲಕಾಲಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿ ಸಿಎಂ ಆಗಬೇಕೆಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ (Dr.H.Mahadevappa) ಅವರು ಬಾಬಾ ಸಾಹೇಬ್ ಅಂಬೇಡ್ಕರ್ (Ambedkar) ಅವರ ಮಾತನ್ನು ಪುನರುಚ್ಚರಿಸಿದ್ದಾರೆ ಎಂದರು.
#Karnataka #bidar #siddaramaiah #loksabhaelection #congress #candidateslist






