• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಾಜಿ ಸಿಎಂ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ – ನಾಯಕರಿಂದ ಅಭಿನಂದನೆಗಳ ಸುರಿಮಳೆ

Any Mind by Any Mind
September 24, 2021
in ಕರ್ನಾಟಕ
0
ಮಾಜಿ ಸಿಎಂ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ – ನಾಯಕರಿಂದ ಅಭಿನಂದನೆಗಳ ಸುರಿಮಳೆ
Share on WhatsAppShare on FacebookShare on Telegram

ಬಿಜೆಪಿ ನಾಯಕ ಮತ್ತು ಶಿಕಾರಿಪುರ ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇದೇ ಮೊದಲ ಬಾರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಚೊಚ್ಚಲ ಪ್ರಶಸ್ತಿ ಯಡಿಯೂರಪ್ಪ ಅವರಿಗೆ ಲಭಿಸಿದ್ದು ಅನೇಕ ನಾಯದಿಂದ ಅಭಿನಂದನೆಗಳ ಸುರುಮಳೆಯೇ ಬಂದಿದೆ.

ADVERTISEMENT

ಜನರ ಸಂಕಷ್ಟಗಳಿಗೆ ಸದಾ ಕಾಲ ಸ್ಪಂದಿಸಿ, ಸದನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಇಂದಿನ ಜನಪ್ರತಿನಿಧಿಗಳಿಗೆ ಮಾದರಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ‘ ನೀಡಿರುವುದನ್ನು ಬೃಹತ್ ಮತ್ತು ಮಧ್ಯಮ ಜನನ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಸ್ವಾಗತಿಸಿದ್ದಾರೆ.

ಕರ್ನಾಟಕದ ಶಾಸನ ಸಭೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜನಪ್ರತಿನಿಧಿಯೊಬ್ಬರು ಸಾರ್ವಜನಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿರುವುದು ಅತ್ಯಂತ ಸೂಕ್ತ ನಿರ್ಧಾರ ಎಂದು ಬಣ್ಣಿಸಿದ್ದಾರೆ.

ಅದರಲ್ಲೂ ಯಡಿಯೂರಪ್ಪ ಅವರಂತಹ ಮೇರು ವ್ಯಕ್ತಿತ್ವದ ಹಿರಿಯ ನಾಯಕರನ್ನು ಗುರುತಿಸಿ ಪ್ರಶಸ್ತಿ ಕೊಟ್ಟಿರುವುದು ನಮ್ಮನ್ನು ಸೇರಿದಂತೆ ಮುಂದಿನ ‘ಯುವಜನಪ್ರತಿನಿಧಿಗಳಿಗೆ ಇದು ‘ ಮಾದರಿ’ ಆಗಲಿದೆ ಸಚಿವ ನಿರಾಣಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರ ಆಯ್ಕೆ ನಿಜಕ್ಕೂ ಅತ್ಯಂತ ಸೂಕ್ತವಾಗಿದೆ.1983 ರಿಂದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದ ಅವರು,ಅಂದಿನಿಂದ ಇಂದಿನವರೆಗೂ ಜನಪ್ರತಿನಿಧಿಗಳು ಸದನಕ್ಕೆ ಕಡ್ಡಾಯವಾಗಿ ಬಂದು ಜನರ ಸಂಕಷ್ಟಗಳಿಗೆ ಸ್ಪಂಧಿಸಬೇಕು ಎಂಬುದನ್ನು ತೋರಿಸಿಕೊಟ್ಟ ಮಾದರಿ ಜನನಾಯಕ ಎಂದು ಪ್ರಶಂಸಿದ್ದಾರೆ.

ಯಡಿಯೂರಪ್ಪ ಗುಡುಗಿದರೆ, ವಿಧಾನಸೌಧ ನಡುಗುತಗತ್ತದೆ ಎಂಬುದನ್ನು ಸಾಧಿಸಿ ತೋರಿಸಿದ್ದರು. ಅಧಿವೇಶನದ ಸಂದರ್ಭದಲ್ಲಿ ಪ್ರತಿದಿನ ಸಮಯಕ್ಕೆ ಸರಿಯಾಗಿ ಸದನಕ್ಕೆ ಬರುವ ಮೂೆಲಕ ನಮಗೆಲ್ಲರಿಗೂ ಪ್ರೇರಣೆಯಾದವರು ಎಂದು ಹೇಳಿದ್ದಾರೆ.

ಜನರ ಬಗೆಗಿನ ಬದ್ದತೆ, ಜನರ ಬಗ್ಗೆ ಇರುವ ಕಳಕಳಿ,ಮುಂದಿನ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ.ನಿಮ್ಮ ಸೇವೆಯನ್ನು ಗುರುತಿಸಿ ಅತ್ಯುತ್ತಮ ಶಾಸಕ ನೀಡಿರುವುದು ಈ ಪ್ರಶಸ್ತಿಯ ಮೌಲ್ಯವನ್ನು ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.

ಮುಂದೆ ಶಾಸನ ಸಭೆಗೆ ಆಯ್ಕೆಯಾಗಿ ಬರಲಿರುವ ಜನಪ್ರತಿನಿಧಿಗಳಿಗೆ ಈ ಪ್ರಶಸ್ತಿಯು ಹುಮ್ಮಸ್ಸು, ಪ್ರೇರಣೆಯನ್ನು ನೀಡಲಿದೆ.ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪ್ರಶಸ್ತಿ ನೀಡುವ ಪರಂಪರೆಯನ್ನು ಪ್ರಾರಂಭಿಸಿದ ವಿಧಾನ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೂ ನಿರಾಣಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕರ್ನಾಟಕ ವಿಧಾನಸಭೆಯಲ್ಲಿ ಈ ವರ್ಷದಿಂದ ಕೊಡಲು ನಿಶ್ಚಯಿಸಿರುವ “ಅತ್ಯುತ್ತಮ ಶಾಸಕ” ಮೊದಲ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಗಳಾದ ಸನ್ಮಾನ್ಯ ಶ್ರೀ ಯಡಿಯೂರಪ್ಪನವರಿಗೆ ನೀಡಲಾಯಿತು. ಲೋಕಸಭೆಯ ಸ್ಪೀಕರ್ ಶ್ರೀ ಓಂ ಬಿರ್ಲಾ ರವರು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಸುರೇಶ್‌ ಕುಮಾರ್‌ ಟ್ವೀಠ್‌ ಮಾಡಿದ್ದಾರೆ.

ನಮ್ಮೆಲ್ಲರ ನೇತಾರರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಸಂಸದೀಯ ಪಟು ಎಂದು ಗೌರವಿಸಿ, ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ “ಅತ್ಯುತ್ತಮ ಶಾಸಕ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಗೆ ಭಾಜನರಾದ ನಮ್ಮೆಲ್ಲರ ನಾಯಕರಾದ ಬಿ.ಎಸ್.ಯಡಿಯೂರಪ್ಪನವರಿಗೆ ಅಭಿನಂದನೆಗಳು ಎಂದು ಮೈಸೂರು ಶಾಸಕ ರಾಮದಾಸ್‌ ಟ್ವೀಟ್‌ ಮಾಡಿ ಅಭಿನಂದಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು ‘ಅತ್ಯುತ್ತಮ ಶಾಸಕ ಪ್ರಶಸ್ತಿ’ ಪಡೆದ ಮಾಜಿ ಮುಖ್ಯಮಂತ್ರಿಗಳು, ಅತ್ಯುತ್ತಮ ಸಂಸದೀಯ ಪಟು, ರೈತ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಶುಭಕೋರಿದ್ದಾರೆ.

ವಿಧಾನಸಭೆಯಲ್ಲಿ ಶುಕ್ರವಾರ ನಡೆದ ಜಂಟಿ ಅಧಿವೇಶನದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು. ಜಂಟಿ ಅಧೀವೇಶನ ಆರಂಭವಾಗುತ್ತಿದ್ದಂತೆ ಮಾತನಾಡಿದ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, “ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಮೊದಲಿಗೆ ಆಯ್ಕೆ ಮಾಡಬೇಕು ಎಂದು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ” ಎಂದು ಹೇಳಿದರು.

ಯಡಿಯೂರಪ್ಪ ಅವರು ಶಾಸಕರಾಗಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾಗಿ ಸುದೀರ್ಘವಾಗಿ ಜನಪರವಾದಂತಹ ಕಾರ್ಯಗಳನ್ನು ಮಾಡಿದ್ದಾರೆ. ಅಲ್ಲದೆ, ಎಷ್ಟೇ ಕೆಲಸ ಕಾರ್ಯಗಳು ಇದ್ದರೂ ಶಾಸನ ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆ. ಎಲ್ಲರ ಅಭಿಪ್ರಾಯಗಳನ್ನು ಆಲಿಸಿ ಸ್ಪಷ್ಟ ನಿಲುವುಗಳನ್ನು ತೆಗೆದುಕೊಳ್ಳುತ್ತಾರೆ. ಹೀಗಾಗಿ ಅವರ ಸೇವೆಯನ್ನು ಗಮನಿಸಿ ಮೊದಲ ಪ್ರಶಸ್ತಿಗೆ ಅವರನ್ನು ಸಮಿತಿಯು ಆಯ್ಕೆ ಮಾಡಿದೆ ಎಂದರು.

Tags: BJPಓಂ ಬಿರ್ಲಾಕರ್ನಾಟಕ ಸರ್ಕಾರಕೋವಿಡ್-19ನರೇಂದ್ರ ಮೋದಿಪ್ರಶಸ್ತಿಬಿ ಎಸ್ ಯಡಿಯೂರಪ್ಪಬಿಜೆಪಿಯಡಿಯೂರಪ್ಪಶಿಕಾರಿಪುರ
Previous Post

ಟಾಟಾ-ಏರ್‌ಬಸ್‌ನಿಂದ ಸೇನೆಗಾಗಿ ವಿಮಾನ ನಿರ್ಮಾಣ: 22,000 ಕೋಟಿಯ ಬೃಹತ್‌ ಯೋಜನೆಗೆ ಸಹಿ ಹಾಕಿದ ಜಂಟಿ ಕಂಪೆನಿಗಳು!

Next Post

UPSC 2020 ಫಲಿತಾಂಶ ಪ್ರಕಟ : ಬಿಹಾರದ ಶುಭಂ ಫಸ್ಟ್ : ಕರ್ನಾಟಕದ ಅಕ್ಷಯ್ ಸಿಂಹಾ 77ನೇ ರ್ಯಾಂಕ್!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
UPSC 2020 ಫಲಿತಾಂಶ ಪ್ರಕಟ : ಬಿಹಾರದ ಶುಭಂ ಫಸ್ಟ್ : ಕರ್ನಾಟಕದ ಅಕ್ಷಯ್ ಸಿಂಹಾ 77ನೇ ರ್ಯಾಂಕ್!

UPSC 2020 ಫಲಿತಾಂಶ ಪ್ರಕಟ : ಬಿಹಾರದ ಶುಭಂ ಫಸ್ಟ್ : ಕರ್ನಾಟಕದ ಅಕ್ಷಯ್ ಸಿಂಹಾ 77ನೇ ರ್ಯಾಂಕ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada