• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಭ್ರಷ್ಟಾಚಾರದ ವಿರುದ್ಧ ಅಖಾಡಕ್ಕೆ ಇಳಿದ ಲೋಕಾಯುಕ್ತ..! BJP ಶಾಸಕರ ಪುತ್ರನೇ ಅರೆಸ್ಟ್..!.

ಕೃಷ್ಣ ಮಣಿ by ಕೃಷ್ಣ ಮಣಿ
March 3, 2023
in ಅಂಕಣ
0
ಭ್ರಷ್ಟಾಚಾರದ ವಿರುದ್ಧ ಅಖಾಡಕ್ಕೆ ಇಳಿದ ಲೋಕಾಯುಕ್ತ..! BJP ಶಾಸಕರ ಪುತ್ರನೇ ಅರೆಸ್ಟ್..!.
Share on WhatsAppShare on FacebookShare on Telegram

ಕಾಂಗ್ರೆಸ್​ ಪಕ್ಷ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿತ್ತು. ಗುತ್ತಿಗೆದಾರರ ಸಂಘದ ಕೆಂಪಣ್ಣ ಆರೋಪದ ಬಳಿಕ ಬಿಜೆಪಿ ಸರ್ಕಾರ 40 ಪರ್ಸೆಂಟ್​ ಕಮಿಷನ್​ ಪಡೆಯುತ್ತಿದ್ದಾರೆ ಎಂದು ಗಂಭೀರ ಆರೋಪ ಎದುರಾಗಿತ್ತು. ಆದರೆ ಈ ಆರೋಪವನ್ನು ಬಿಜೆಪಿ ಸರ್ಕಾರ ನಿರಾಕರಿಸಿತ್ತು. ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್​ಗ ಕೇವಲ ಆರೋಪ ಮಾಡ್ತಿದೆ. ಕಾಂಗ್ರೆಸ್​ ಬಳಿ ಯಾವುದಾದರೂ ಸಾಕ್ಷ್ಯಗಳಿದ್ದರೆ ದೂರು ನೀಡಲಿ ಎಂದು ತಿರುಗೇಟು ಕೊಟ್ಟಿತ್ತು. ಇದೀಗ ಬಿಜೆಪಿ ತಿರುಗಿ ಮಾತನಾಡದಂತೆ ಲೋಕಾಯುಕ್ತ ಕೇಸ್​ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್​ ಹಾಗು ಆತನ ಅಕೌಂಡೆಂಟ್​ ಸೇರಿ ಒಟ್ಟು ಐದು ಮಂದಿಯನ್ನು ಲೋಕಾಯುಕ್ತ ಪೊಲೀಸ್ರು ಅರೆಸ್ಟ್​ ಮಾಡಿದ್ದಾರೆ. ಲೋಕಾಯುಕ್ತ SP ಅಶೋಕ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಬರೋಬ್ಬರಿ 2 ಕೋಟಿ 2 ಲಕ್ಷ ರೂಪಾಯಿ ಸೀಜ್​ ಆಗಿದೆ.

ADVERTISEMENT

80 ಲಕ್ಷ ಡೀಲ್​ ನಲ್ಲಿ 40 ಲಕ್ಷ ಅಡ್ವಾನ್ಸ್​..!

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ ನಿಗಮದ ಅಧ್ಯಕ್ಷರಾಗಿರುವ ಮಾಡಾಳು ವಿರೂಪಾಕ್ಷಪ್ಪ ಪರವಾಗಿ ಮಗ ಪ್ರಶಾಂತ್​ ವ್ಯವಹಾರ ಕುದುರಿಸಿದ್ದರು. ಮೈಸೂರು ಸ್ಯಾಂಡಲ್​ ಸೋಪ್​ ಕಂಪನಿಗೆ ರಾಸಾಯನಿಕ ಪೂರೈಸುವ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು 80 ಲಕ್ಷ ಲಂಚ ನೀಡುವಂತೆ ತಿಳಿಸಲಾಗಿತ್ತು. ಇದರಲ್ಲಿ 40 ಲಕ್ಷ ಲಂಚ ಪಡೆಯುವಾಗ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಅವರನ್ನು ಬಂಧನ ಮಾಡಲಾಗಿದೆ. ಕ್ರೆಸೆಂಟ್ ರಸ್ತೆಯ ಪ್ರಶಾಂತ್​ ಕಚೇರಿಯಲ್ಲಿ ಬಗೆದಷ್ಟು ದಾಖಲೆಗಳು ಲೋಕಾಯುಕ್ತರಿಗೆ ಸಿಕ್ಕಿದ್ದು, 40 ಲಕ್ಷ ಮಾತ್ರವಲ್ಲದೆ 1 ಕೋಟಿ 62 ಲಕ್ಷ ರೂಪಾಯಿ ಹಣ ಸೇರಿ ಪ್ರಶಾಂತ್​ ಮಾಡಾಳು ಕಚೇರಿಯಲ್ಲಿ ಒಟ್ಟು 2 ಕೋಟಿ 02 ಲಕ್ಷ ರುಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ. ಕಚೇರಿ ಅಷ್ಟೇ ಅಲ್ಲದೆ ಶಾಸಕರ ಮನೆಯಲ್ಲೂ ಶೋಧ ಕಾರ್ಯ ನಡೆಸಲಾಗಿದೆ.

ಲೋಕಾ ಬಲೆಗೆ ಬಿದ್ದಿದ್ದು BWSSB ಚೀಫ್​ ಅಕೌಂಟೆಂಟ್​..!!

BWSSBನಲ್ಲಿ ಚೀಫ್ ಅಕೌಂಟೆಂಟ್ ಆಗಿರುವ ಪ್ರಶಾಂತ್ ಮಾಡಾಳ್​ ಅವರು ಕಚ್ಚಾ ವಸ್ತುಗಳ ಖರೀದಿ ಟೆಂಡರ್‌ಗಾಗಿ KSDL ಅಧ್ಯಕ್ಷ ಮಾಡಾಳು ವಿರೂಪಾಕ್ಷಪ್ಪ ಪರವಾಗಿ ಹಣ  ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಂಜಯನಗರದ KMV ಮ್ಯಾನಷನ್‌ನಲ್ಲಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ​​ ಮನೆಯಲ್ಲೂ ಶೋಧ ಕಾರ್ಯ ನಡೆದಿದೆ. ಲೋಕಾಯುಕಗ್ತ DSP ಸತೀಶ್ ರೆಡ್ಡಿ, ಪ್ರವೀಣ್ ‌ಕುಮಾರ್​ ಸೇರಿ 20 ಅಧಿಕಾರಿಗಳ ತಂಡ ಹುಡುಕಾಟ ನಡೆಸಿದೆ. ಟೆಂಡರ್ ಕೊಡಿಸುವ ವಿಚಾರದಲ್ಲಿ ದಾಖಲೆ ಪತ್ರಗಳನ್ನು ಕಲೆ ಹಾಕಲಾಗಿದೆ. ಲ್ಯಾಪ್​ಟಾಪ್​, ಮೊಬೈಲ್​ ಸೇರಿದಂತೆ ಪ್ರಮುಖ ಸಾಕ್ಷ್ಯಗಳನ್ನು ಲೋಕಾಯುಕ್ತ ಪೊಲೀಸ್ರು ಸಂಗ್ರಹ ಮಾಡಿದ್ದಾರೆ. ಲೋಕಾಯಕ್ತ ಐಜಿಪಿ ಸುಬ್ರಹ್ಮಣ್ಯರಾವ್ ಕೂಡ ದಾಳಿ ವೇಳೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್​ಗೆ ರಸದೌತಣ ಸಿಕ್ಕಂತಾಗಿದ್ದು, ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಸಾಕ್ಷಿ ಕೇಳಿದ್ರಲ್ಲಾ ಇಷ್ಟು ಸಾಕ್ಷಿ ಸಾಕಾ ಬೇಕಾ..?

ಲೋಕಾಯುಕ್ತ ದಾಳಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮಾತನಾಡಿದ್ದು, ಲೋಕಾಯುಕ್ತ ಅಧಿಕಾರಿಗಳು ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್​ ಅವರನ್ನು ಅರೆಸ್ಟ್​ ಮಾಡಿದ್ದಾರೆ. ಇಷ್ಟು ದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಭ್ರಷ್ಟಾಚಾರಕ್ಕೆ ಸಾಕ್ಷಿ ಕೇಳಿದ್ರು. ಈಗ ಲೋಕಾಯುಕ್ತ ಸಂಸ್ಥೆಯವರೇ ಸೂಕ್ತ ಸಾಕ್ಷ್ಯ ಕೊಟ್ಟಿದ್ದಾರೆ. ಈಗ ಯಾರು ರಾಜೀನಾಮೆ ಕೊಡ್ತಾರೆ….? ಸಿಎಂ ರಾಜೀನಾಮೆ ಕೊಡ್ತಾರಾ..? ಅಥವಾ ಸಚಿವರು ರಾಜೀನಾಮೆ ಕೊಡ್ತಾರಾ..? ಅಥವಾ ನಿಗಮ ಮಂಡಳಿ ಅಧ್ಯಕ್ಷರು ರಾಜೀನಾಮೆ ಕೊಡ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಕುಹಕವಾಡಿರುವ ಡಿ.ಕೆ ಶಿವಕುಮಾರ್​, ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ 40 ಪರ್ಸೆಂಟ್​ ಅಂತಾ ಹೇಳಿದ್ರು. ಮಠದ ಸ್ವಾಮೀಜಿಗಳು 30 ಪರ್ಸೆಂಟ್​ ಅಂದಿದ್ರು. ಹೆಚ್​. ವಿಶ್ವನಾಥ್​ 20 ಪರ್ಸೆಂಟ್​, ಯತ್ನಾಳ್​ ಸಿಎಂ ಕುರ್ಚಿಗೆ 2500 ಕೋಟಿ ಅಂತಿದ್ರು. ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡ್ರು. ಇಷ್ಟಾದ್ರೂ ಬಿಜೆಪಿ ಸರ್ಕಾರ ಸಾಕ್ಷಿ ಕೇಳುತ್ತೆ. ಮುಖ್ಯಮಂತ್ರಿ ರಾಜೀನಾಮೆ ಕೊಟ್ಟರೆ ಆ ಸ್ಥಾನಕ್ಕೆ ಗೌರವ ಎಂದಿದ್ದಾರೆ. ಲೋಕಾಯುಕ್ತ ದಾಳಿ ಕಾಂಗ್ರೆಸ್​ ಪಕ್ಷಕ್ಕೆ ಹಾಲು ಅನ್ನ ಉಂಡಂಗೆ ಆಗಿದೆ.

Tags: Congress Partylokayukta karnatakaಪ್ರಶಾಂತ್ಬಿಜೆಪಿಮಾಡಾಳು ವಿರೂಪಾಕ್ಷಪ್ಪ
Previous Post

ದಿಢೀರ್​ ಸುದ್ದಿಗೋಷ್ಠಿ ಕರೆದ ಸಿದ್ದರಾಮಯ್ಯ : ಕುತೂಹಲ ಮೂಡಿಸಿದ ವಿಪಕ್ಷ ನಾಯಕನ ನಡೆ

Next Post

ರಾಜ್ಯದಲ್ಲಿಂದು ಅಮಿತ್​ ಶಾ ಮೋಡಿ: ಬೀದರ್​ ವಿಜಯ ಸಂಕಲ್ಪ ಯಾತ್ರೆ ಚಾಲನೆಗೆ ಕ್ಷಣಗಣನೆ

Related Posts

Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
0

ವಾಣಿಜ್ಯೋದ್ಯಮದಲ್ಲಿ ಹಲವಾರು ಯಶಸ್ವಿ ಯೋಜನೆಗಳನ್ನು ರೂಪಿಸಿರುವಂತಹ ಅನಿಲ್ ಶೆಟ್ಟಿ (Anil Shetty) ರವರು ಈಗ ಚಿತ್ರೋದ್ಯಮದಲ್ಲೂ ತಮ್ಮ ಛಾಪನ್ನು ಮೂಡಿಸಲು ಮುಂದಾಗಿದ್ದಾರೆ. ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ...

Read moreDetails

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

DK Shivakumar: ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಸಿಎಂ ಡಿ.ಕೆ. ಶಿವಕುಮಾರ್

June 25, 2025

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

June 25, 2025
Next Post
home minister amit shah to flag off two days vijay sankalp yatra in basavakalyan bidar

ರಾಜ್ಯದಲ್ಲಿಂದು ಅಮಿತ್​ ಶಾ ಮೋಡಿ: ಬೀದರ್​ ವಿಜಯ ಸಂಕಲ್ಪ ಯಾತ್ರೆ ಚಾಲನೆಗೆ ಕ್ಷಣಗಣನೆ

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada