ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಯಾದಗಿರಿ ಡಿಎಚ್ಓ ಡಾ.ಪ್ರಭುಲಿಂಗ ಮಾನಕರ ಅವರ ಕಲಬುರಗಿ, ಯಾದಗಿಯಲ್ಲಿನ ನಿವಾಸ, ಕಚೇರಿ ಹಾಗೂ ಕಲಬುರಗಿ ಬಳಿಯ ಫಾರ್ಮಹೌಸ್ ಮೇಲೂ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಕರ್ನೂಲ್ ನೇತೃತ್ವದ ತಂದ ದಾಳಿ ನಡೆಸಿ, ದಾಖಲೆಗಳ ತಪಾಸಣೆ ನಡೆಸುವಲ್ಲಿ ನಿರತರಾಗಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಇಂದು ಬೆಂಗಳೂರು, ಬಂದಿದೆ ಕಲಬುರಗಿ, ಬೀದರ್, ಕೊಪ್ಪಳ, ವಿಜಯನಗರ, ಬಳ್ಳಾರಿ ಸೇರಿದಂತೆ ಒಟ್ಟು 63 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ