ಬೆಂಗಳೂರಿನ ಕಂದಾಯ ಭವನ ಕಚೇರಿ ಮತ್ತು ತಹಸೀಲ್ದಾರ್ ಕಚೇರಿಗೆ ಉಪಲೋಕಾಯುಕ್ತ ನ್ಯಾ. ಫಣೀಂದ್ರ ನೇತೃತ್ವದ ತಂಡ ದಾಳಿಯನ್ನು ನಡೆಸಿ ದಾಖಲೆಯಗಳ ಪರಿಶೀಲನೆ ನಡೆಸಿದ್ದಾರೆ.
ಕಂದಾಯ ಭವನದಲ್ಲಿ ಅರ್ಜಿಯನ್ನು ಅರ್ಜಿಗಳನ್ನು ವಿಲೇವಾರಿಯನ್ನು ಮಾಡಲು ವಿಳಂಬ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದ್ದವು. ಇದರ ಜೊತೆಗೆ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು.
ಈ ಹಿನ್ನೆಲೆಯಲ್ಲಿ ಉಪಲೋಕಾಯುಕ್ತ ನ್ಯಾ. ನ್ಯಾ.ಫಣೀಂದ್ರ ನೇತೃತ್ವದ ತಂಡ ಕಂದಾಯ ಭವನ ಮೇಲೆ ಉಪಲೋಕಾಯುಕ್ತ ದಾಳಿ ನಡೆಸಿ ತಪಾಸಣೆಯನ್ನು ನಡೆಸುತ್ತಿದ್ದಾರೆ.
ದೂರುದಾರರಿಂದ ಕಂದಾಯ ಭವನಕ್ಕೆ ಅರ್ಜಿಯಲ್ಲಿ ವಿಲೇವಾರಿ, ಕೃಷಿ ಭೂಮಿಯಿಂದ ಕೃಷಿಯೇತರ ಅರ್ಜಿ ಸೇರಿದಂತೆ ವಿವಿಧ ಅರ್ಜಿಗಳು ತಡವಾದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಖಾತಾ, ಭೂ ಪರಿವರ್ತನೆ ಮಾಡಲು ಹಣ ಬೇಡಿಕೆ, ಸಿಬ್ಬಂದಿ ಕೊರತೆ ಸೇರಿದಂತೆ ವಿವಿಧ ದೂರುಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ದಾಳಿಯನ್ನು ನಡೆಸಲಾಗಿದೆ.